Homeಕರ್ನಾಟಕಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು - ರೈತ ಮುಖಂಡ ಡಿ.ಎಚ್‌. ಪೂಜಾರ್

ಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು – ರೈತ ಮುಖಂಡ ಡಿ.ಎಚ್‌. ಪೂಜಾರ್

- Advertisement -
- Advertisement -

ಪ್ರಭುತ್ವವನ್ನು ಈಗ ಕಾರ್ಪೊರೇಟ್ ಕಂಪೆನಿಗಳು ಎಂದು ಕರೆಯಬಹುದಾಗಿದ್ದು, ಯಾಕೆಂದರೆ ಅದು ಈಗ ಕಾರ್ಪೋರೇಟ್ ಕಂಪೆನಿಗಳ ಕಪಿ ಮುಷ್ಟಿಯಲ್ಲಿ ಇದೆ. ಈ ಕಾರ್ಪೊರೇಟ್ ಕಂಪೆನಿಗಳು 35% ಇರುವ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಏಕಸ್ವಾಮ್ಯ ಗಳಿಸಿದ್ದು, ಉಳಿದ 65% ಇರುವ ಕೃಷಿ ವಲಯದಲ್ಲಿ ಇರುವ 65% ಜನರನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿಎಚ್ ಪೂಜಾರ್ ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು. ಭೂಮಿ ಪ್ರಶ್ನೆ ಮತ್ತು ಬಜೆಟ್‌ನ ಧೋರಣೆಗಳು ಎಂಬ ವಿಚಾರದಲ್ಲಿ ಹೋರಾಟಗಾರರಾದ ಸಿರಿಮನೆ ನಾಗರಾಜ್ ಮತ್ತು ರೈತ ಮುಖಂಡ ಯು ಬಸವರಾಜ್ ಅವರು ಮಂಡಿಸಿದ ವಿಚಾರಗಳಿಗೆ ಪ್ರತಿಕ್ರಿಯಿಸಿದ ಅವರು ರೈತ ಸಂಘಟನೆಗಳು ರಾಜ್ಯದ ಅರ್ಧ ಶಕ್ತಿಯಾಗಿದ್ದು, ಇವರಿಗೆ ದಲಿತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

“ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಭೂಮಿಯನ್ನು ಮುಂದಿನ ಪೀಳಿಗೆಗಾಗಿ ಉಳಿಯಬೇಕು ಎಂದು ಹೇಳುತ್ತಾರೆ. ಇದರ ಅರ್ಥ ಯಾವುದೇ ಕಾರಣಕ್ಕೂ ಭೂಮಿಯ ಪಟ್ಟಾ ಕೊಡೊಲ್ಲ ಎಂದಾಗಿದೆ. ಅಂದರೆ ಇವೆಲ್ಲವನ್ನೂ ಕಾರ್ಪೊರೇಟ್‌ಗೆ ಬಿಟ್ಟು ಕೊಡುತ್ತೇವೆ ಎಂದು ಅರ್ಥ. ಹಾಗಾಗಿ ರೈತರು ತಮ್ಮ ಭೂಮಿಯನ್ನು ಪ್ರಾಣ ಒತ್ತೆಯಿಟ್ಟು ಉಳಿಸಬೇಕಾಗಿ. ಸರ್ಕಾರಿ ಅಧಿಕಾರಿಗಳು ಕಾರ್ಪೊರೇಟ್ ಪರವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೋದಿ ಚೊಂಬು ಕೊಟ್ಟರೆ, ಸಿದ್ದರಾಮಯ್ಯ ಚಿಪ್ಪು ಕೊಟ್ಟರು: ಎಂ. ಪುಟ್ಟಮಾದು

ಜನ ಚಳವಳಿ ಅಧಿವೇಶನದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಅವರು, “ಬಜೆಟ್ ಪೂರ್ವ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೆವು. ನಮ್ಮ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದು ಭಾವಿಸಿದ್ದೆವು. ಸರ್ಕಾರ ಕೂಡಾ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಆದರೆ ಈ ಗ ನೋಡಿದರೆ, ಮೋದಿಯವರು ನಮಗೆ ಚೊಂಬು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯಾ ಅವರು ನಮಗೆ ಚಿಪ್ಪು ಕೊಟ್ಟರು” ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ನಂತರ ನಾವು ಮುಂದಿನ ಜನ ಚಳವಳಿ ಬಜೆಟ್ ಅಧಿವೇಶನವನ್ನು ವಿಧಾನಸೌಧದಲ್ಲೆ ಮಾಡಬೇಕು. ಅಂತಹ ಹೋರಾಟವನ್ನು ರೂಪಿಸಬೇಕಿದೆ. ನಾಲ್ಕಿ ಲಕ್ಷ ಕೋಟಿಯಲ್ಲಿ ರೈತರಿಗೆ 7ಸಾವಿರ ಕೊಟ್ಟಿದೆ. ಆದರೆ ಉಳಿದ ಕೋಟಿಗಳು ಎಲ್ಲಿ ಹೋದವು ಎಂದು ಅವರು ಪ್ರಶ್ನಿಸಿದರು.

16 ಲಕ್ಷ ಕುಟುಂಬಗಳಿಗೆ ನಿವೇಶನ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದಿನಿಂದಲೂ ನಾವು ಇದನ್ನು ಕೇಳುತ್ತಲೆ ಬಂದಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ನಿವೇಶನ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ನಿವೇಶನ ಕೊಡದೆ ಕಾರ್ಪೊರೇಟ್‌ಗೆ ನಿವೇಶನ ಕೊಟ್ಟು ಅವರು ಮನೆ ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಇರುವ ಒಂದುವರೆ ಕೋಟಿ ಹೆಕ್ಟೇರ್ ಭೂಮಿಯಲ್ಲಿ ನಾವು ಕೇಳುತ್ತಿರುವುದು ಕೇವಲ 60 ಸಾವಿರ ಹೆಕ್ಟೇರ್‌ ಭೂಮಿ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ”ಬಿಎಂಜಿಆರ್‌” ಬಜೆಟ್ ಆಗಿದೆ. ಅಂದರೆ ಬೆಂಗಳೂರು, ಮೈಸೂರು, ಗುಲ್ಬರ್ಗ ಮತ್ತು ರಾಮನಗರಕ್ಕೆ ಸೀಮಿತವಾದ ಬಜೆಟ್, ಇದು ರಾಜ್ಯದ ಬಜೆಟ್ ಅಲ್ಲ ಎಂದು ಅವರು ಹೇಳಿದರು.

14 ಲಕ್ಷ ಹೆಕ್ಟೇರ್ ಭೂಮಿ ಗೋಮಾಳ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಭೂಮಿ ಎಲ್ಲಿ ಹೋಯಿತು. ಕೇರಳದಲ್ಲಿ ಮನೆ ಕಟ್ಟಲು 7 ಲಕ್ಷ ಕೊಡುತ್ತಿದೆ. ರಾಜ್ಯದಲ್ಲಿ ನೀಡುತ್ತಿರುವುದು 1.5 ಲಕ್ಷ. ನಾವು ಕನಿಷ್ಠ 5 ಲಕ್ಷವಾದರೂ ಕೊಡಿ ಎಂದು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಅದನ್ನೂ ಕೊಡುತ್ತಿಲ್ಲ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿಪಕ್ಷಗಳು, ಅದನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಸರ್ಕಾರಗಳಲ್ಲಿ ಜಡತ್ವ ಇದೆ. ಕೇಂದ್ರದ ಬಜೆಟ್ ಅಂತೂ ರೈತ, ಮಹಿಳೆ, ಕೂಲಿಕಾರರಿಗೆ ದುಡಿಯುವ ವರ್ಗದ ಪರವಾಗಿಲ್ಲ. ಅದು ಎಂದಿದ್ದರೂ ಕಾರ್ಪೊರೇಟ್ ವರ್ಗಗಳ ಪರವಿದೆ. ಅವರ ನಿಲುವು ಎಂದಿದ್ದರೂ ಜನ ವಿರೋಧಿಯಾಗಿವೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾತರದ ರಾಜ್ಯಗಳು ಅಭಿವೃದ್ಧಿ ಹೊಂದಿ ತೆರಿಗೆ ಕಟ್ಟುತ್ತಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆಯ ಹಣ ನೀಡುತ್ತಿಲ್ಲ ಎಂದು ಹೇಳಿದರು.

ನಾವು ಹೋರಾಟದ ರಂಗದಲ್ಲಿ ಇದ್ದೇವೆ. ಹೋರಾಟಗಾರರು ಹೋರಾಟ ಮಾಡುತ್ತಲೆ ಇರುತ್ತಾರೆ. ಆಳುವವರು ಆಳುತ್ತಲೆ ಇರುತ್ತಾರೆ. ಇದು ಬದಲಾಗಬೇಕಿದೆ. ರೈತ ಸಂಘಗಳೂ, ಕಮ್ಯುನಿಸ್ಟ್ ಸಂಘಟನೆಗಳು, ದಲಿತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಕೂದಲು ಸೀಲುವುದನ್ನು ಬಿಟ್ಟು ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರ ತಂದಂತಹ ಜನವಿರೋಧಿ ಕಾನೂನುಗಳನ್ನು ವಾಪಾಸು ತೆಗೆದುಕೊಳ್ಳಬೇಕು. ಆದರೆ ಕರ್ನಾಟಕ ಸರ್ಕಾರ ವಾಪಾಸು ತೆಗೆದುಕೊಳ್ಳುತ್ತಿಲ್ಲ. ಸರ್ಕಾರವನ್ನು ಭೇಟಿಯಾಗುವ ನಿಯೋಗಗಳು ಮೊದಲು ಇದನ್ನು ಪ್ರಸ್ತಾಪಿಸಬೇಕು ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...