Homeಕರ್ನಾಟಕಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು - ರೈತ ಮುಖಂಡ ಡಿ.ಎಚ್‌. ಪೂಜಾರ್

ಪ್ರಾಣ ಒತ್ತೆಯಿಟ್ಟು ರೈತರು ಭೂಮಿ ಉಳಿಸಬೇಕು – ರೈತ ಮುಖಂಡ ಡಿ.ಎಚ್‌. ಪೂಜಾರ್

- Advertisement -
- Advertisement -

ಪ್ರಭುತ್ವವನ್ನು ಈಗ ಕಾರ್ಪೊರೇಟ್ ಕಂಪೆನಿಗಳು ಎಂದು ಕರೆಯಬಹುದಾಗಿದ್ದು, ಯಾಕೆಂದರೆ ಅದು ಈಗ ಕಾರ್ಪೋರೇಟ್ ಕಂಪೆನಿಗಳ ಕಪಿ ಮುಷ್ಟಿಯಲ್ಲಿ ಇದೆ. ಈ ಕಾರ್ಪೊರೇಟ್ ಕಂಪೆನಿಗಳು 35% ಇರುವ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಏಕಸ್ವಾಮ್ಯ ಗಳಿಸಿದ್ದು, ಉಳಿದ 65% ಇರುವ ಕೃಷಿ ವಲಯದಲ್ಲಿ ಇರುವ 65% ಜನರನ್ನು ಹಿಡಿತಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಡಿಎಚ್ ಪೂಜಾರ್ ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು. ಭೂಮಿ ಪ್ರಶ್ನೆ ಮತ್ತು ಬಜೆಟ್‌ನ ಧೋರಣೆಗಳು ಎಂಬ ವಿಚಾರದಲ್ಲಿ ಹೋರಾಟಗಾರರಾದ ಸಿರಿಮನೆ ನಾಗರಾಜ್ ಮತ್ತು ರೈತ ಮುಖಂಡ ಯು ಬಸವರಾಜ್ ಅವರು ಮಂಡಿಸಿದ ವಿಚಾರಗಳಿಗೆ ಪ್ರತಿಕ್ರಿಯಿಸಿದ ಅವರು ರೈತ ಸಂಘಟನೆಗಳು ರಾಜ್ಯದ ಅರ್ಧ ಶಕ್ತಿಯಾಗಿದ್ದು, ಇವರಿಗೆ ದಲಿತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹೇಳಿದರು. ಪ್ರಾಣ ಒತ್ತೆಯಿಟ್ಟು ರೈತರು

“ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಭೂಮಿಯನ್ನು ಮುಂದಿನ ಪೀಳಿಗೆಗಾಗಿ ಉಳಿಯಬೇಕು ಎಂದು ಹೇಳುತ್ತಾರೆ. ಇದರ ಅರ್ಥ ಯಾವುದೇ ಕಾರಣಕ್ಕೂ ಭೂಮಿಯ ಪಟ್ಟಾ ಕೊಡೊಲ್ಲ ಎಂದಾಗಿದೆ. ಅಂದರೆ ಇವೆಲ್ಲವನ್ನೂ ಕಾರ್ಪೊರೇಟ್‌ಗೆ ಬಿಟ್ಟು ಕೊಡುತ್ತೇವೆ ಎಂದು ಅರ್ಥ. ಹಾಗಾಗಿ ರೈತರು ತಮ್ಮ ಭೂಮಿಯನ್ನು ಪ್ರಾಣ ಒತ್ತೆಯಿಟ್ಟು ಉಳಿಸಬೇಕಾಗಿ. ಸರ್ಕಾರಿ ಅಧಿಕಾರಿಗಳು ಕಾರ್ಪೊರೇಟ್ ಪರವಾಗಿ ಇರಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಮೋದಿ ಚೊಂಬು ಕೊಟ್ಟರೆ, ಸಿದ್ದರಾಮಯ್ಯ ಚಿಪ್ಪು ಕೊಟ್ಟರು: ಎಂ. ಪುಟ್ಟಮಾದು

ಜನ ಚಳವಳಿ ಅಧಿವೇಶನದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ. ಪುಟ್ಟಮಾದು ಅವರು, “ಬಜೆಟ್ ಪೂರ್ವ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಸರ್ಕಾರದ ಮುಂದಿಟ್ಟಿದ್ದೆವು. ನಮ್ಮ ಬೇಡಿಕೆ ಸರ್ಕಾರ ಈಡೇರಿಸುತ್ತದೆ ಎಂದು ಭಾವಿಸಿದ್ದೆವು. ಸರ್ಕಾರ ಕೂಡಾ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ಆದರೆ ಈ ಗ ನೋಡಿದರೆ, ಮೋದಿಯವರು ನಮಗೆ ಚೊಂಬು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳುತ್ತಾರೆ, ಆದರೆ ಸಿದ್ದರಾಮಯ್ಯಾ ಅವರು ನಮಗೆ ಚಿಪ್ಪು ಕೊಟ್ಟರು” ಎಂದು ಹೇಳಿದರು.

ಮುಂದಿನ ಮೂರು ವರ್ಷಗಳ ನಂತರ ನಾವು ಮುಂದಿನ ಜನ ಚಳವಳಿ ಬಜೆಟ್ ಅಧಿವೇಶನವನ್ನು ವಿಧಾನಸೌಧದಲ್ಲೆ ಮಾಡಬೇಕು. ಅಂತಹ ಹೋರಾಟವನ್ನು ರೂಪಿಸಬೇಕಿದೆ. ನಾಲ್ಕಿ ಲಕ್ಷ ಕೋಟಿಯಲ್ಲಿ ರೈತರಿಗೆ 7ಸಾವಿರ ಕೊಟ್ಟಿದೆ. ಆದರೆ ಉಳಿದ ಕೋಟಿಗಳು ಎಲ್ಲಿ ಹೋದವು ಎಂದು ಅವರು ಪ್ರಶ್ನಿಸಿದರು.

16 ಲಕ್ಷ ಕುಟುಂಬಗಳಿಗೆ ನಿವೇಶನ ಇಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದಿನಿಂದಲೂ ನಾವು ಇದನ್ನು ಕೇಳುತ್ತಲೆ ಬಂದಿದ್ದೇವೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ ನಿವೇಶನ ಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ನಿವೇಶನ ಕೊಡದೆ ಕಾರ್ಪೊರೇಟ್‌ಗೆ ನಿವೇಶನ ಕೊಟ್ಟು ಅವರು ಮನೆ ನಿರ್ಮಿಸುತ್ತಾರೆ ಎಂದು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಇರುವ ಒಂದುವರೆ ಕೋಟಿ ಹೆಕ್ಟೇರ್ ಭೂಮಿಯಲ್ಲಿ ನಾವು ಕೇಳುತ್ತಿರುವುದು ಕೇವಲ 60 ಸಾವಿರ ಹೆಕ್ಟೇರ್‌ ಭೂಮಿ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ”ಬಿಎಂಜಿಆರ್‌” ಬಜೆಟ್ ಆಗಿದೆ. ಅಂದರೆ ಬೆಂಗಳೂರು, ಮೈಸೂರು, ಗುಲ್ಬರ್ಗ ಮತ್ತು ರಾಮನಗರಕ್ಕೆ ಸೀಮಿತವಾದ ಬಜೆಟ್, ಇದು ರಾಜ್ಯದ ಬಜೆಟ್ ಅಲ್ಲ ಎಂದು ಅವರು ಹೇಳಿದರು.

14 ಲಕ್ಷ ಹೆಕ್ಟೇರ್ ಭೂಮಿ ಗೋಮಾಳ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಈ ಭೂಮಿ ಎಲ್ಲಿ ಹೋಯಿತು. ಕೇರಳದಲ್ಲಿ ಮನೆ ಕಟ್ಟಲು 7 ಲಕ್ಷ ಕೊಡುತ್ತಿದೆ. ರಾಜ್ಯದಲ್ಲಿ ನೀಡುತ್ತಿರುವುದು 1.5 ಲಕ್ಷ. ನಾವು ಕನಿಷ್ಠ 5 ಲಕ್ಷವಾದರೂ ಕೊಡಿ ಎಂದು ಕೇಳುತ್ತಿದ್ದೇವೆ. ರಾಜ್ಯ ಸರ್ಕಾರ ಅದನ್ನೂ ಕೊಡುತ್ತಿಲ್ಲ. ಈ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ ಮಾಡಬೇಕಿದ್ದ ಆಡಳಿತ ಮತ್ತು ವಿಪಕ್ಷಗಳು, ಅದನ್ನೂ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ಹೋರಾಟಗಾರ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಸರ್ಕಾರಗಳಲ್ಲಿ ಜಡತ್ವ ಇದೆ. ಕೇಂದ್ರದ ಬಜೆಟ್ ಅಂತೂ ರೈತ, ಮಹಿಳೆ, ಕೂಲಿಕಾರರಿಗೆ ದುಡಿಯುವ ವರ್ಗದ ಪರವಾಗಿಲ್ಲ. ಅದು ಎಂದಿದ್ದರೂ ಕಾರ್ಪೊರೇಟ್ ವರ್ಗಗಳ ಪರವಿದೆ. ಅವರ ನಿಲುವು ಎಂದಿದ್ದರೂ ಜನ ವಿರೋಧಿಯಾಗಿವೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾತರದ ರಾಜ್ಯಗಳು ಅಭಿವೃದ್ಧಿ ಹೊಂದಿ ತೆರಿಗೆ ಕಟ್ಟುತ್ತಿದೆ. ಆದರೆ ಕೇಂದ್ರ ಸರ್ಕಾರ ನಮ್ಮ ತೆರಿಗೆಯ ಹಣ ನೀಡುತ್ತಿಲ್ಲ ಎಂದು ಹೇಳಿದರು.

ನಾವು ಹೋರಾಟದ ರಂಗದಲ್ಲಿ ಇದ್ದೇವೆ. ಹೋರಾಟಗಾರರು ಹೋರಾಟ ಮಾಡುತ್ತಲೆ ಇರುತ್ತಾರೆ. ಆಳುವವರು ಆಳುತ್ತಲೆ ಇರುತ್ತಾರೆ. ಇದು ಬದಲಾಗಬೇಕಿದೆ. ರೈತ ಸಂಘಗಳೂ, ಕಮ್ಯುನಿಸ್ಟ್ ಸಂಘಟನೆಗಳು, ದಲಿತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಕೂದಲು ಸೀಲುವುದನ್ನು ಬಿಟ್ಟು ನಾವು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಬಿಜೆಪಿ ಸರ್ಕಾರ ತಂದಂತಹ ಜನವಿರೋಧಿ ಕಾನೂನುಗಳನ್ನು ವಾಪಾಸು ತೆಗೆದುಕೊಳ್ಳಬೇಕು. ಆದರೆ ಕರ್ನಾಟಕ ಸರ್ಕಾರ ವಾಪಾಸು ತೆಗೆದುಕೊಳ್ಳುತ್ತಿಲ್ಲ. ಸರ್ಕಾರವನ್ನು ಭೇಟಿಯಾಗುವ ನಿಯೋಗಗಳು ಮೊದಲು ಇದನ್ನು ಪ್ರಸ್ತಾಪಿಸಬೇಕು ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ಮತಾಂಧತೆಯ ಪರಿಭಾಷೆಯಲ್ಲಿ ಬಜೆಟ್ ವಿಶ್ಲೇಷಣೆ ನಡೆಸುತ್ತಿರುವುದು ದುರಂತ: ಟಿ.ಆರ್.ಚಂದ್ರಶೇಖರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...