Homeಕರ್ನಾಟಕಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್

- Advertisement -
- Advertisement -

ದಲಿತರಿಗೆ ಮಾತ್ರ ಮೀಸಲಾತಿಯಿದೆ ಎಂಬಂತೆ ಬಿಂಬಿಸಿ ಅವರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾವಳ್ಳಿ ಶಂಕರ್ ಹೇಳಿದರು. ಬುಧವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಷಯದಲ್ಲಿ ‘ದಲಿತ ಸಮುದಾಯದ ಆಗ್ರಹಗಳು’ ಎಂಬ ವಿಚಾರದ ಬಗ್ಗೆ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

ಭಾರತದಲ್ಲಿ ಅಕ್ಷರಸ್ಥರಲ್ಲೂ ಜಾತಿ ಇನ್ನೂ ಬಿಗಿಯಾಗುತ್ತಿವೆ. ಮರ್ಯಾದ ಹತ್ಯೆ, ಅಶ್ಪ್ರಶ್ಯತೆ ಇನ್ನೂ ಜಾಸ್ತಿಯಾಗುತ್ತಿವೆ. ಇದನ್ನು ಉದ್ದೇಶಿಸಿ ಮಾತನಾಡದೆ ಕೇವಲ ಕಾರ್ಪೊರೇಟ್, ಶ್ರಿಮಂತರು, ಸರ್ಕಾರ ಎಂದು ಮಾತನಾಡಿದರೆ ದಲಿತರು ಹತ್ತಿರ ಬರುವುದಿಲ್ಲ. ಕಂಬಾಲಪಳ್ಳಿ ದುರ್ಘಟನೆಗೆ 25 ವರ್ಷಗಳಾಯಿತು. ಅಲ್ಲಿನ ದಲಿತರ ಸುಟ್ಟ ವಾಸನೆ ಇನ್ನೂ ಕಾಡುತ್ತಿದೆ. ದಲಿತರನ್ನು ಇನ್ನೂ ಕೊಲ್ಲುತ್ತಲೆ ಇದ್ದಾರೆ ಎಂದು ಮಾವಳ್ಳಿ ಶಂಕರ್ ಅವರು ಹೇಳಿದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು

“ದಲಿತರ ವಿರುದ್ಧ ನಡೆದ ಎಲ್ಲಾ ಘಟನೆಗಳಲ್ಲಿ ದಲಿತರು ಕೂಲಿ ಜಾಸ್ತಿ ಕೇಳಿದ್ದಕ್ಕೆ ಮಾಡಲಾಗಿದೆ. ಎಲ್ಲಾ ಅಂಕಿ ಅಂಶಗಳು, ಅಧ್ಯಯನಗಳು ಮತ್ತು ವರದಿಗಳು ದಲಿತರ ಸಮಸ್ಯೆ ಇವತ್ತಿಗೂ ಹಾಗೆ ಇದೆ ಎಂದು ಹೇಳುತ್ತಿವೆ. ಎಷ್ಟೆ ಸಮಾಜ ಸುಧಾರಕರು, ಹೋರಾಟಗಾರರು ಬಂದರೂ ಸಮಸ್ಯೆ ಈಡೇರಿಲ್ಲ. ಮೀಸಲಾತಿಯನ್ನು ದಲಿತರಿಗೆ ಮಾತ್ರ ಕೊಡಲಾಗುತ್ತಿದೆ ಎಂಬ ಭಾವನೆಯಿದೆ. ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ” ಎಂದು ಅವರು ಹೇಳಿದರು.

“ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಹಣ ಮೀಸಲಿಡುವ ಕಾನೂನು ತಂದರು. ಆದರೆ ಕೊಟ್ಟಂತಹ ಹಣ ಏನಾಗಿದೆ ಎಂದು ತಿಳಿಯುತ್ತಿಲ್ಲ. 1 ಕೋಟಿಗೂ ಹೆಚ್ಚು ಇರುವ ದಲಿತರಿಗಾಗಿ ಈ ಹಣವನ್ನು ಬಳಸಿದ್ದಾಗಿ ಹೇಳುತ್ತಿದ್ದಾರೆ. ಆದರೆ ಈ ದುಡ್ಡು ಎಲ್ಲಿ ಹೋಯಿತು. ದಲಿತರು ಈಗಲೂ ಗುಡಿಸಲಿನಲ್ಲಿ ಬದುಕುತ್ತಿದ್ದಾರೆ. ಕನಿಷ್ಠ ಈ ಹಣವನ್ನು ದಲಿತರ ಮನೆ ಮನೆಗೆ ಕೊಟ್ಟರೆ ಸಾಲುತ್ತಿತ್ತು” ಎಂದು ಅವರು ತಿಳಿಸಿದರು.

“ಗ್ಯಾರೆಂಟಿ ಯೋಜನೆಗಾಗಿ ಈ ಹಣವನ್ನು ಬಳಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ ಈ ಹಣವನ್ನು ದಲಿತರು ಬಳಸಿ ಸಬಲೀಕರಣ ಆಗಿದ್ದಾರೆ ಎಂದು ಯಾವ ಅಂಕಿ ಅಂಶಗಳನ್ನು ಇಟ್ಟು ಹೇಳುತ್ತಿದ್ದಾರೆ. ಸರ್ಕಾರದಿಂದ ದಲಿತರಿಗೆ ಏನೂ ಸಿಗದಿದ್ದರೂ, ದಲಿತರಿಗೆ ಮಾತ್ರ ಸರ್ಕಾರ ಕೊಡುತ್ತಿದೆ ಎಂಬಂತೆ ಸಮಾಜದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹತ್ತಾರು ಎಕರೆ ಭೂಮಿಯಿರುವ ಭೂಮಾಲಿಕ ರೈತರೆ ಕಷ್ಟದಲ್ಲಿ ಇದಬೇಕಾದರೆ, ಭೂ ಹೀನ ದಲಿತರು, ಕೃಷಿ ಕಾರ್ಮಿಕರಾಗಿ ದುಡಿಯುತ್ತಿರುವ ದಲಿತರ ಪರಿಸ್ಥಿತಿ ಹೇಗಿರಬಹುದು” ಎಂದು ಅವರು ಕೇಳಿದರು.

“ದಲಿತ ಸಮುದಾಯದ ವಿದ್ಯಾರ್ಥಿಗಳು ದನಗಳ ಕೊಟ್ಟಿಗೆಯಲ್ಲಿ ಇರುವ ಹಾಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿವೆ. ಸಂವೇದನ ಇರುವ ಸರ್ಕಾರ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ ಎಲ್ಲಾ ಸಮುದಾಯದ ಮಕ್ಕಳಿಗೂ ಕರಾಟೆಗಳನ್ನು ಕಲಿಸುವಂತೆ ವ್ಯವಸ್ಥೆ ಮಾಡಬೇಕಿತ್ತು. ಕೇಂದ್ರ ಸರ್ಕಾರವು ಮಾರವಾಡಿ ಬಡ್ಡಿ ವಸೂಲಿ ಮಾಡುವ ರೀತಿ 60%-40% ಎಂದು ಆಟವಾಡುತ್ತಿದೆ. ಎರಡೂ ಸರ್ಕಾರಗಳು ದಲಿತರ ಸಮುದಾಯವನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ.” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ಚಿನ್ನದ ಕಳ್ಳಸಾಗಣೆ ಪ್ರಕರಣ: ಬಂಧನದ ಭೀತಿಯಲ್ಲಿ ರನ್ಯಾ ರಾವ್ ಅವರ ಪತಿ ಹೈಕೋರ್ಟ್‌ಗೆ ಮೊರೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...