Homeಕರ್ನಾಟಕರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

- Advertisement -
- Advertisement -

ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರ ಇಲ್ಲ ಎಂದು ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು ಈ ಬಾರಿಯ ಬಜೆಟ್‌ ಜನಪರವಾಗಿರಬೇಕು ಎಂದು ಹಲವು ಬೇಡಿಕೆಗಳನ್ನು ಇಟ್ಟಿದ್ದರು. ಆದರೆ, ಎಲ್ಲವೂ ಈಡೇರಿದೆ ಎಂದು ಅನಿಸುತ್ತಿಲ್ಲ” ಎಂದು ಹೇಳಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ ಇನ್ನಷ್ಟು ಹೆಚ್ಚು ಒತ್ತು ಕೊಡಬಹುದಿತ್ತು; ಮುಂದಿನ ದಿನಗಳಲ್ಲಿ ಬಜೆಟ್‌ನಲ್ಲಿ ರೈತರಿಗೆ, ಕೃಷಿಕರಿಗೆ ಮೀಸಲಿಡಬೇಕಾದಂತಹ ಹಣ ನಿಗಧಿ ಮಾಡಬೇಕು. ದೇಶದ ಮತ್ತು ರಾಜ್ಯದ ಜಿಡಿಪಿ ಅಭಿವೃದ್ಧಿಯಾಗಬೇಕೆಂದರೆ, ರೈತರ ಆದಾಯ ಹೆಚ್ಚಾಗಬೇಕು. ರೈತರ ಆದಾಯ ಹೆಚ್ಚಾಗದೇ ದೇಶದ ಅಭಿವೃದ್ದಿ ಸಾಧ್ಯವಿಲ್ಲ. ರೈತರನ್ನು ನಗರಗಳಿಗೆ ಕರೆತಂದು ಕೆಲಸ ಕೊಡಲು ಸಾಧ್ಯವಿಲ್ಲ” ಎಂದು ಹೇಳಿದರು.

“ನೀರಾವರಿಗೆ ಅನುದಾನ ಹೆಚ್ಚು ಮಾಡಬೇಕಿತ್ತು; ಬೇಸಿಗೆ ಪ್ರಾರಂಭವಾಗುವುದಕ್ಕಿಂತ ಮೊದಲೇ ರೈತರಿಗೆ ವಿದ್ಯುತ್‌, ಟ್ರಾನ್ಸ್‌ಫಾರ್ಮ್‌ಗಳಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಇನ್ನು ಸಂಪೂರ್ಣವಾಗಿ ಬೇಸಿಗೆ ಪ್ರಾರಂಭವಾದರೆ ರೈತರ ಪರಿಸ್ಥಿತಿ ಏನು ಅನ್ನುವುದರ ಬಗ್ಗೆ ಸರ್ಕಾರ ಯೋಚನೆ ಮಾಡಬೇಕಿತ್ತು. ನೀರಾವರಿಗೆ ಬಜೆಟ್‌ ಜಾಸ್ತಿ ಮಾಡಬೇಕು. ಸರ್ಕಾರ ರೈತರಿಗೆ, ಕಾರ್ಮಿಕರಿಗೆ ಬೆಂಬಲ ಕೊಡವ ರೀತಿಯಲ್ಲಿ ಬಜೆಟ್‌ಗಳನ್ನು ಮಂಡಿಸಬೇಕು” ಎಂದು ಹೇಳಿದರು.

ಕಾರ್ಮಿಕ ಮುಖಂಡರಾದ ಮೈತ್ರೇಯಿ ಕೃಷ್ಣನ್ ಮಾತನಾಡಿ, “ವರ್ಡ್‌ ಇನ್ ಇಕ್ವಾಲಿಟಿ ಲ್ಯಾಬ್’ ಪ್ರಕಾರ, ದೇಶಕ್ಕೆ ಸ್ವಾತಂತ್ರ್ಯ ಬರುವುದಕ್ಕೆ ಮೊದಲಿದ್ದ ಪರಿಸ್ಥಿತಿಯೇ ಈಗಲೂ ಇದೆ. ಕಳೆದ 15 ವರ್ಷಗಳಲ್ಲಿ ಅಸಮಾನತೆ ಇನ್ನೂ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ 271 ಜನ ಬಿಲೇನಿಯರ್‌ಗಳಿದ್ದಾರೆ. ದೇಶದ ಬಡತನ ಕೂಡ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ” ಎಂದರು.

“ಶೇ. 10 ಜನರಲ್ಲಿ ಬಳಿ ಶೇ.77ರಷ್ಟು ಆಸ್ತಿ ಇದೆ. ಶೇ.73 ರಷ್ಟು ಜನರ ಬಳಿ ಉಳಿದ ಆಸ್ತಿ ಇದೆ. ಈ ಬಗ್ಗೆ ಸರ್ಕಾರದ ಕ್ರಮಗಳು ಏನಿರಬೇಕು ಎಂಬುದು ಮುಖ್ಯವಾಗುತ್ತದೆ. ಅಸಮಾನತೆಯನ್ನು ಹೆಚ್ಚು ಮಾಡುವ ನೀತಿಗಳನ್ನು ಜಾರಿ ಮಾಡಲಾಗುತ್ತದೆ. ‘ಬ್ಲೂಮ್ ವರದಿ’ ಪ್ರಕಾರ, ದೇಶದ ಒಂದು ಬಿಲಿಯನ್ ಜನರಿಗೆ ಅತ್ಯವಶ್ಯಕ ವಸ್ತುಗಗಳನ್ನು ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಅಂದರೆಮ ದೇಶದ 10 ಜನರಲ್ಲಿ 9 ಜನರಿಗೆ ತಮಗೆ ಬೇಕಾಗಿರುವದನ್ನು ಕೊಳ್ಳುವ ಶಕ್ತಿ ಇಲ್ಲ” ಎಂದು ವಿವರಿಸಿದರು.

ಮೈತ್ರೇಯಿ ಕೃಷ್ಣನ್

“ಕೇಂದ್ರ ಸರ್ಕಾರದ ಬಜೆಟ್‌ನ ಆರ್ಥಿಕ ಸಮೀಕ್ಷೆ ಪ್ರಕಾರ, ದೇಶದ ಕಂಪನಿಗಳು ನೆಲದ ಕಾನೂನುಗಳನ್ನು ಪಾಲನೆ ಮಾಡಿ ಬೆಳೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಕಾರ್ಮಿಕ ಕಾನೂನುಗಳನ್ನು ಇನ್ನಷ್ಟು ಸಡಿಲಗೊಳಿಸಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಹೊಸ 4 ಕಾರ್ಮಿಕ ಕಾನೂನುಗಳಲ್ಲಿ ಸಂಪೂರ್ಣವಾಗಿ ಕಾರ್ಮಿಕರ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಮುಖ್ಯವಾಗಿ, ಈವರಗೆ ಇದ್ದ ಕಾಯ್ದೆ ಪ್ರಕಾರ 100 ಜನ ಇದ್ದರೆ ಕಾನೂನು ಅನ್ವಯ ಆಗುತ್ತದೆ; ಅದನ್ನು 300 ಜನಕ್ಕೆ ಏರಿಕೆ ಮಾಡಬೇಕು ಎಂದು ಹೊಸ ಕಾನೂನು ಹೇಳುತ್ತದೆ. ಇದರಿಂದ, ಶೇ.85 ಕಂಪನಿಗಳು ಈ ಕಾನೂನಿನಿಂದ ಹೊರಬರುತ್ತವೆ” ಎಂದರು.

“ಕಳೆದ 10 ವರ್ಷಗಳಲ್ಲಿ ಖಾಯಂ ಕೆಲಸ ತುಂಬಾ ಕಡಿಮೆಯಾಗಿ, ಗುತ್ತಿಗೆ ಪದ್ಧತಿ ಹೆಚ್ಚಾಗಿದೆ. ಇದಕ್ಕೆ ಹೊಸ ಹೆಸರುಗಳನ್ನು ನೀಡಲಾಗಿದೆ. ಅವರಿಗೆ ಕೆಲಸ, ವೇತನ ಹಾಗೂ ಸಾಮಾಜಿಕ ಭದ್ರತೆ ಕೊಡುತ್ತಿಲ್ಲ. ಕೇಂದ್ರದ ಆರ್ಥಿಕ ಸಮೀಕ್ಷೆಯಲ್ಲಿ ಇಷ್ಟೆಲ್ಲಾ ಮಾಡಲಾಗುತ್ತಿದೆ” ಎಂದು ವಿವರಿಸಿದರು.

“ರಾಜ್ಯ ಬಜೆಟ್‌ ಕೂಡ ಕೇಂದ್ರಕ್ಕಿಂತ ಭಿನ್ನವಾಗೇನೂ ಇಲ್ಲ, ಪಿಪಿಪಿ (ಪಬ್ಲಿಕ್ ಫಂಡ್ಸ್‌ ಫಾರ್ ಪ್ರೈವೇಟ್) ಮೂಲಕ ಎಲ್ಲ ವಲಯದಲ್ಲಿ ಇದನ್ನೇ ಪಾಲಿಸಿದ್ದಾರೆ. ರಾಜ್ಯದಲ್ಲಿ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಇವರ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ ಹೇಳುತ್ತದೆ. ಇ-ಶ್ರಮ್ ಪ್ರಕಾರ ಅಸಂಘಟಿತ ಕಾರ್ಮಿಕರು  1.6 ಲಕ್ಷ ಜನರಿದ್ದಾರೆ. ಮತ್ತೊಂದು ಕಡೆ ಕೇವಲ 24 ಲಕ್ಷ ಸಂಘಟಿತ ಕಾರ್ಮಿಕರಿದ್ದಾರೆ. ಉದ್ಯೋಗ ಸೃಷ್ಠಿಯೇ ಆಗುತ್ತಿಲ್ಲ. ಆದರೆ, ಫಾಕ್ಸ್‌ಕಾನ್‌ ನಂತಹ ಕಂಪನಿಗಳಿಗೆ ಸಾಕಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಫಾಕ್ಸ್‌ಕಾನ್ ಕಂಪನಿ ರಾಜ್ಯಕ್ಕೆ ಬರಲಿ ಎಂಬ ಕಾರಣಕ್ಕೆ ಕಾರ್ಮಿಕರ ದುಡಿಯುವ ಸಮಯವನ್ನು ಎಂಟರಿಂದ ಒಂಬತ್ತು ಗಂಟೆಗೆ ಹೆಚ್ಚಿಸಲಾಯಿತು. ರಾಜ್ಯದಲ್ಲಿ ಕಾರ್ಪೊರೇಟ್‌ ನೀತಿಗಳನ್ನು ಜಾರಿ ಮಾಡಲಾಗುತ್ತಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ಜನಪರ ವಿಚಾರಗಳಿಗೆ ಸ್ಪಂದಿಸುತ್ತಿಲ್ಲ

ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎಐಟಿಯುಸಿ ರಾಜ್ಯ ಉಪಾಧ್ಯಕ್ಷರಾದ ಕೆ.ವಿ. ಭಟ್ ಮಾತನಾಡಿ, “ಕೇಂದ್ರ ಸರ್ಕಾರದ ಬಜೆಟ್‌ ಕಾರ್ಮಿಕ, ವಿದ್ಯಾರ್ಥಿ, ಯುವಜನರ ವಿರೋಧಿ ನೀತಿಯಾಗಿದೆ. ಕಾರ್ಮಿಕರ ಅಭಿವೃದಿಗೆ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಹಣ ನೀಡದೇ ಸಾವಿರಾರೂ ಕೋಟಿ ರೂಪಾಯಿ ಕಡಿತ ಮಾಡಿದ್ದಾರೆ. ವ್ಯಾಪಾರಸ್ಥರ ಅನುಕೂಲಕ್ಕಾಗಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಾವಿರಾರೂ ಕೋಟಿ ರೂ.ಗಳನ್ನು ಕೊಟ್ಟಿದ್ದಾರೆಯೇ ಹೊರತು, ಕೇಂದ್ರ ಸರ್ಕಾರ ಯಾವ ರೂಪದಲ್ಲೂ ಜನಪರ ವಿಚಾರಗಳಿಗೆ ಸ್ಪಂದಿಸುವ ರೀತಿಯಲ್ಲಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ. ಭಟ್

“ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ ಪಡೆದುಕೊಳ್ಳಬೇಕೆಂದು ಆಗ್ರಹಿಸಿ, ಒಂದು ವರ್ಷಗಳ ಕಾಲ ರೈತರು ದಿಲ್ಲಿಯಲ್ಲಿ ಹೋರಾಟ ಮಾಡಿದ್ದರು. ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರಾಳ ಕೃಷಿ ಕಾಯಿದೆಗಳನ್ನು ವಾಪಸ್ಸು ಪಡೆದುಕೊಳ್ಳುತ್ತೇವೆಂದು ಹೇಳಿದ್ದಕ್ಕಾಗಿ, ಹೋರಾಟವನ್ನು ವಾಪಸ್ಸು ಪಡೆದುಕೊಂಡರು. ಆದರೆ, ಸರ್ಕಾರ ನೀಡಿದ ಭರವಸೆಯಂತೆ ಯಾವುದನ್ನು ವಾಪಸ್ಸು ಪಡೆದುಕೊಂಡಿಲ್ಲ. ಅಷ್ಟೇ ಅಲ್ಲದೇ ವಿದ್ಯುತ್‌ ಕಾಯಿದೆಯನ್ನು ಅಂಗೀಕರಿಸಿ ಹಲವು ರೈತರಿಗೆ ಕಿರುಕಳ ಕೊಡುವುದಕ್ಕೆ ಪ್ರಾರಂಭಿಸಿದ್ದಾರೆ. ಇದರ ವಿರುದ್ಧ ರೈತರು ದಂಗೇಳುತ್ತಿದ್ದಾರೆ” ಎಂದರು.

“ರಾಜ್ಯ ಸರ್ಕಾರದ ಬಜೆಟ್‌ ಕಾರ್ಮಿಕರ ಪರವಾಗಿಲ್ಲ. ಅದರಲ್ಲಿ ಯಾವುದೇ ರೀತಿಯ ಕನಿಷ್ಠ ವೇತನ ಹೆಚ್ಚಿಸುವುದಾಗಲಿ, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವುದರ ಬಗೆಯಾಗಲಿ ಮಾತಿಲ್ಲ. ಅಷ್ಟೇ ಅಲ್ಲದೇ ಸಾವಿರಾರು ಎಕರೆ ಜಮೀನನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಜಾಗತಿಕ ಹೂಡಿಕೆ ಮೂಲಕ ವ್ಯವಹಾರ ಮಾಡುತ್ತಿದ್ದಾರೆ. ಈ ಎಲ್ಲ ಅನ್ಯಾಯದ ವಿರುದ್ಧ ಜನ ದಂಗೇಳಬೇಕಾದ ಅವಶ್ಯಕತೆ ಇದೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ” ಎಂದು ಹೇಳಿದರು.

‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುದರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...