Homeಮುಖಪುಟಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

ಕೇರಳ | ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದ ಬಿಜೆಪಿ-ಆರ್‌ಎಸ್‌ಎಸ್‌

- Advertisement -
- Advertisement -

ತಿರುವನಂತಪುರದ ಹೊರವಲಯ ನೆಯ್ಯಟ್ಟಿಂಕರ ಬಳಿ ಬುಧವಾರ (ಮಾ.12) ಸಂಜೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರ ಗುಂಪೊಂದು ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿಗೆ ಮುತ್ತಿಗೆ ಹಾಕಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವುದಲ್ಲದೆ, ಆಡಳಿತ ಮತ್ತು ಪ್ರತಿಪಕ್ಷಗಳ ಪ್ರತಿಭಟನೆಗೆ ಕಾರಣವಾಯಿತು ಎಂದು ದಿ ಹಿಂದೂ ವರದಿ ಮಾಡಿದೆ.

ಶಿವಗಿರಿ ಮಠದ ಆಹ್ವಾನದ ಮೇರೆಗೆ ಕೇರಳಕ್ಕೆ ಭೇಟಿ ನೀಡಿದ್ದ ತುಷಾರ್ ಗಾಂಧಿ, ಮಠಕ್ಕೆ ಮಹಾತ್ಮ ಗಾಂಧಿ ಭೇಟಿ ನೀಡಿ 100 ವರ್ಷ ತುಂಬಿದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಆರೆಸ್ಸೆಸ್ ಮತ್ತು ಸಂಘಪರಿವಾರ ದೇಶದ ಆತ್ಮಕ್ಕೆ ಕ್ಯಾನ್ಸರ್ ಇದ್ದಂತೆ, ನಾವು ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ. ಇದು ಸಂಘಪರಿವಾರದವರನ್ನು ಕೆರಳಿಸಿದೆ ಎಂದು ವರದಿ ಹೇಳಿದೆ.

ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ, ನೆಯ್ಯಟ್ಟಿಂಕರದಲ್ಲಿ ದಿವಂಗತ ಗಾಂಧಿವಾದಿ ಪಿ. ಗೋಪಿನಾಥನ್ ನಾಯರ್ ಅವರ ಪೂರ್ವಜರ ಮನೆಯಲ್ಲಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ತುಷಾರ್ ಗಾಂಧಿ ತೆರಳಿದ್ದರು. ಈ ಕಾರ್ಯಕ್ರಮ ಮುಗಿಸಿ ಅವರು ವಾಹನ ಹತ್ತಲು ಮುಂದಾಗುತ್ತಿದ್ದಂತೆ ಆರ್‌ಎಸ್‌ಎಸ್ ಕಾರ್ಯಕರ್ತರು ಅವರಿಗೆ ಮುತ್ತಿಗೆ ಹಾಕಿದ್ದಾರೆ. ಶಿವಗಿರಿ ಮಠದಲ್ಲಿ ಆರ್‌ಎಸ್‌ಎಸ್ ವಿರುದ್ದ ಮಾಡಿದ ಭಾಷಣ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಇರಲಿಲ್ಲ

ಆರ್‌ಎಸ್‌ಎಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿದಾಗ ತುಷಾರ್ ಗಾಂಧಿಯವರು ವಾಹನದಿಂದ ಕೆಳಗಿಳಿದು ಅವರನ್ನು ಎದುರಿಸಿದರು. ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಪ್ರತಿಯಾಗಿ “ಆರ್‌ಎಸ್‌ಎಸ್ ಮುರ್ದಾಬಾದ್, ಗಾಂಧೀಜಿ ಝಿಂದಾಬಾದ್” ಎಂದು ಕೂಗಿದರು. ಸ್ಥಳದಲ್ಲಿ ಯಾವುದೇ ಗಮನಾರ್ಹ ಪೊಲೀಸ್ ಉಪಸ್ಥಿತಿ ಇರಲಿಲ್ಲ. ಗಾಂಧಿಯವರು ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿ ಅಲ್ಲಿಂದ ಹೊರಟರು. ನೆಯ್ಯತ್ತಿಂಕರ ಪೊಲೀಸರನ್ನು ಸಂಪರ್ಕಿಸಿದಾಗ, ಘಟನೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಶಿವಗಿರಿ ಮಠದವರನ್ನು ಸಂಪರ್ಕಿಸಿದಾಗ, ಗುರುವಾರ ಈ ಬೆಳವಣಿಗೆಗೆ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಆರ್‌ಎಸ್‌ಎಸ್‌ನ ಕೃತ್ಯವನ್ನು ಖಂಡಿಸಿದ್ದಾರೆ. ಮಹಾತ್ಮಾ ಗಾಂಧಿಯವರು ನಾರಾಯಣ ಗುರುಗಳೊಂದಿಗೆ ಮಠದಲ್ಲಿ ನಡೆಸಿದ ಐತಿಹಾಸಿಕ ಭೇಟಿಯ 100 ನೇ ವಾರ್ಷಿಕೋತ್ಸವವನ್ನು ಆಚರಿಸಲು ತುಷಾರ್ ಗಾಂಧಿ ಕೇರಳಕ್ಕೆ ಆಗಮಿಸಿದ್ದರು. ಆರ್‌ಎಸ್‌ಎಸ್ ಕೇರಳ ನಾಚಿಕೆಪಡುವಂತೆ ಮಾಡಿದೆ. ಪ್ರತಿಭಟನೆಯ ಮೂಲಕ ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.

ಸಿಪಿಐ ಹೇಳಿದ್ದೇನು?

ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ಆರ್‌ಎಸ್‌ಎಸ್‌ನ ತಿರಸ್ಕಾರ ಮತ್ತು ಊಳಿಗಮಾನ್ಯ ವಸಾಹತುಶಾಹಿ ವ್ಯವಸ್ಥೆಗೆ ಸಂಘಟನೆಯ ಬೆಂಬಲವು ತುಷಾರ್ ಗಾಂಧಿ ವಿರುದ್ಧದ ಅವರ ನಡೆಯಿಂದ ಸ್ಪಷ್ಟವಾಗಿ ಗೊತ್ತಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಹೇಳಿದ್ದಾರೆ.

“ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯ ದ್ರೋಹಿ. ದೇಶದ ಸ್ವಾತಂತ್ರ್ಯ ಚಳವಳಿ ಮತ್ತು ಪ್ರಜಾಪ್ರಭುತ್ವದ ಪ್ರಗತಿಯಲ್ಲಿ ಅದರದ್ದು ಯಾವುದೇ ಪಾತ್ರವಿಲ್ಲ. ಗಾಂಧಿಯವರ ಹಂತಕ ಗೋಡ್ಸೆ ಮತ್ತು ಸಾವರ್ಕರ್ ಸೇರಿದಂತೆ ಅವರ ನಾಯಕರನ್ನು ಆರ್‌ಎಸ್‌ಎಸ್ ಸಿಂಹಾಸನವೇರಿಸಿದೆ. ಕೇರಳವು ಈ ಫ್ಯಾಸಿಸ್ಟ್ ಶಕ್ತಿಯ ವಿರುದ್ಧ ಒಂದಾಗಿ ನಿಲ್ಲಬೇಕು” ಎಂದಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳು ಇಂಗ್ಲಿಷ್‌ಗೆ ಬದಲಾಗಬೇಕು: ಗೋವಾ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...