Homeಕರ್ನಾಟಕನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ...

ನುಡಿದಂತೆ ನಡೆಯುವ ಸರ್ಕಾರ ಎಂದು ಸಾಬೀತು ಮಾಡಲು ಕೇಂದ್ರದ ನೀತಿ ಸಾರಾ ಸಗಟಾಗಿ ತಿರಸ್ಕರಿಸಿ: ರಾಜ್ಯ ಸರ್ಕಾರಕ್ಕೆ ಸಂಯುಕ್ತ ಹೋರಾಟ ಸಮಿತಿ ಆಗ್ರಹ

- Advertisement -
- Advertisement -

ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಸಾಬೀತುಪಡಿಸಿಕೊಳ್ಳಬೇಕಾದರೆ ಕೇಂದ್ರ ಸರಕಾರ ತಂದಿರುವ ಜನವಿರೋಧಿ ನೀತಿಗಳಾದ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಹತ್ಯೆ ನಿಶೇಧ, ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ, ಮತಾಂತರ ನಿಷೇಧ ಕಾಯ್ದೆ, ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ರದ್ದುಪಡಿಸುವ ತಿದ್ದುಪಡಿ ಕಾಯ್ದೆ, ಕೇಂದ್ರದ ವಿದ್ಯುತ್‌ ಖಾಸಗೀಕರಣ ಮಸೂದೆ, ಲೋಕಸಭಾ ಕ್ಷೇತ್ರದ ಮರು ವಿಂಗಡಣೆ ನೀತಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಂಯುಕ್ತ ಹೋರಾಟ ಸಮಿತಿ ಗುರುವಾರ ಆಗ್ರಹಿಸಿದೆ.

ಬೆಂಗಳೂರಿನ ಗಾಂಧಿಭವನದಲ್ಲಿ ಸಂಯುಕ್ತ ಹೋರಾಟದಿಂದ ಆಯೋಜಿಸಿದ್ದ ಜನ ಚಳವಳಿಗಳ ಬಜೆಟ್‌ ಅಧಿವೇಶನದಲ್ಲಿ ರೈತ, ಕಾರ್ಮಿಕ, ದಲಿತ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಂಡು, ಶಾಸಕ ಬಿ.ಆರ್.ಪಾಟೀಲ್‌ ಮುಖಾಂತರ ಮುಖ್ಯಮಂತ್ರಿಗೆ ಆಗ್ರಹ ಪತ್ರವನ್ನು ಕಳುಹಿಸಿಕೊಡಲಾಯಿತು. ನುಡಿದಂತೆ ನಡೆಯುವ ಸರ್ಕಾರ

ಹಿಂಪಡೆದಿದ್ದ ಮೂರು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಬಾಗಿಲಿನಿಂದ ತರಲು ಕೇಂದ್ರ ಸರಕಾರ ಮುಂದಿಟ್ಟಿರುವ ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿ, ಕಾರ್ಮಿಕರ ಬದುಕಿಗೆ ಕಂಠಕವಾಗಿರುವ 4 ಕೋಡ್‌ಗಳನ್ನು ತಿರಸ್ಕರಿಸುವ ತೀರ್ಮಾನವನ್ನು ರಾಜ್ಯ ಸರಕಾರ ಈ ಸದನದಲ್ಲಿಯೇ ತೆಗೆದುಕೊಳ್ಳಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ನಡೆಯುತ್ತಿರುವ ಖಾಸಗೀಕರಣದ ಪ್ರಕ್ರಿಯೆ ಕೈಬಿಡಬೇಕು. ರೈತರನ್ನು ಋಣಮುಕ್ತಗೊಳಿಸಲು ಮತ್ತು ರೈತರ ಬೆಳೆಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡಲು ಖಚಿತ ಯೋಜನೆ ಮತ್ತು ಕಾಯ್ದೆ ರೂಪಿಸಬೇಕು ಎಂದು ಸಮಿತಿ ಒತ್ತಾಯಿಸಿತು.

ರೈತರಿಗೆ ಬೆಂಬಲ ಬೆಲೆ ಒದಗಿಸುವ ಸಲುವಾಗಿ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಆವರ್ತ ನಿಧಿಗೆ ಒದಗಿಸಬೇಕು. ಮೈಕ್ರೋಫೈನಾನ್ಸ್‌ ಜಾಲದಿಂದ ಬಡಜನರನ್ನು, ವಿಶೇಷವಾಗಿ ಮಹಿಳೆಯರನ್ನು ಪಾರು ಮಾಡಲು ಸಾಂಸ್ಥಿಕ ಸಾಲವನ್ನು ಹೆಚ್ಚಿಸುವ ಹಾಗೂ ಸರಳ ವಿಧಾನದಲ್ಲಿ ಒದಗಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಕೃಷಿ ಕ್ಷೇತ್ರಕ್ಕೆ, ಗ್ರಾಮೀಣಭಿವೃದ್ದಿಗೆ ಹಾಗೂ ನೀರಾವರಿಗೆ ಅನುದಾನವನ್ನು ಗಮನಾರ್ಹವಾಗಿ ಹೆಚ್ಚಿಸಬೇಕು. ನರೇಗಾ ಯೋಜನೆಯನ್ನು ನಗರಕ್ಕೂ ವಿಸ್ತರಿಸಿ, ಬಲಪಡಿಸವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುವ ನಿರ್ಣಯವನ್ನು ವಿಧಾನ ಸಭೆಯಲ್ಲಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತು.

ಸಾರ್ವಜನಿಕ ಸ್ವತ್ತಾದ ಭೂಮಿ ಬಂಡವಾಳಿಗರ ಪಾಲಾಗದಂತೆ ತಡೆಯಬೇಕು. ಭೂಮಿಯನ್ನು ಸಾಮಾಜಿಕ ನ್ಯಾಯದ ಪ್ರಮುಖ ಆಯಾಮವಾಗಿ ಪರಿಗಣಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು. ಬಗರ್‌ ಹುಕುಂ ರೈತರಿಗೆ ತ್ವರಿತ ಭೂ ಹಂಚಿಕೆಯ ತೀರ್ಮಾನ ತೆಗೆದುಕೊಳ್ಳಬೇಕು. ಕಾನೂನು ತೊಡಕುಗಳನ್ನು ನಿವಾರಿಸಿ ಎಲ್ಲ ಬಡವರಿಗೆ ಬಗರ್‌ ಹುಕುಂ ರೈತರಿಗೂ ಸಾಮಾಜಿಕ ನ್ಯಾಯ ದಕ್ಕಿಸಿಕೊಡಬೇಕು. ಚನ್ನರಾಯಪಟ್ಟಣ ಭೂಸ್ವಾಧೀನ ತೀರ್ಮಾನವನ್ನು ಕೊಟ್ಟ ಮಾತಿನಂತೆ ಕೈಬಿಡಬೇಕು.

ಪರಿಶಿಷ್ಟ ಜಾತಿಗಳ ಮೀಸಲು ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸದಂತೆ ಕ್ರಮವಹಿಸಬೇಕು. ಎಸ್ಸಿಪಿ ಟಿಎಸ್ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಚರ್ಚಿಸಲು ಎರಡೂವರೆ ವರ್ಷಕ್ಕೊಮ್ಮೆ “ಸಾಮಾಜಿಕ ನ್ಯಾಯಕ್ಕಾಗಿ ವಿಶೇಷ ಅಧಿವೇಶನ” ನಡೆಸಿ ಮೌಲ್ಯಮಾಪನ ಮಾಡಬೇಕು. ಖಾಸಗೀ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಖಾಯಂ ಸ್ವರೂಪದ ಕ್ಷೇತ್ರಗಳಲ್ಲಿರುವ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಕಾಯ್ದೆ ರೂಪಿಸಬೇಕು. ಎಲ್ಲ ಬಗೆಯ ದುಡಿಯುವ ಜನರಿಗೆ ಕನಿಷ್ಟ ವೇತನ ದರ ಜಾರಿಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಲೇಬರ್‌ ಕಾನ್ಫರೆನ್ಸ್‌ ಆಯೋಜಿಸಲು ತೀರ್ಮಾನ ತೆಗೆದುಕೊಳ್ಳಬೇಕು. ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ, ಕೋಮು ಪ್ರಚೋದನೆ ಹಾಗೂ ಮಹಿಳೆಯರ ಅತ್ಯಾಚಾರ ಹಾಗೂ ಹತ್ಯೆಗಳನ್ನು ತಡೆಯಲು ಸಮಗ್ರ ಯೋಜನೆ ರೂಪಿಸಬೇಕು. ಶೋಷಿತ ಸಮುದಾಯಗಳ ಮೇಲೆ ದೌರ್ಜನ್ಯ ನಡೆಸುವ, ಷಡ್ಯಂತರ ರೂಪಿಸುವ ಶಕ್ತಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ವಿಶೇಷ ಕಾಯ್ದೆಯನ್ನು ಜಾರಿಗೆ ತರಬೇಕು. ಶಿಕ್ಷಣ ನೀತಿಯಲ್ಲಿನ ದ್ವಂದ್ವ ನಡೆಯನ್ನು ಸರಕಾರ ಕೈಬಿಡಬೇಕು. ಎಸ್‌ ಇ ಪಿ ಯನ್ನು ಕಾಲಮಿತಿಯೊಳಗೆ ಜಾರಿಗೆ ತರಬೇಕು. ಸಾರ್ವಜನಿಕ ಶಿಕ್ಷಣಕ್ಕೆ ಮೀಸಲಿಟ್ಟಿರುವ ಹಣವನ್ನು ದುಪ್ಪಟ್ಟುಗೊಳಿಸಬೇಕು. ಉದ್ಯೋಗ ಸೃಷ್ಟಿಗೆ ಸಮಗ್ರ ಯೋಜನೆ ರೂಪಿಸಬೇಕು.

ಕ್ಯಾಬಿನೆಟ್‌ ಸಚಿವರು, ಸಂಬಂಧಿತ ಅಧಿಕಾರಿಗಳು ಹಾಗೂ ಜನಚಳವಳಿಗಳ ಪ್ರತಿನಿಧಿಗಳು ಜೊತೆಗೂಡಿ ಚರ್ಚಿಸಿ ಸರ್ವಸಮ್ಮತ ಆಧಾರದ ಮೇಲೆ ಕೆಲವಾದರೂ ಅತಿಮುಖ್ಯ ಜನರ ಸಮಸ್ಯೆಗಳಿಗೆ ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳುವಂತಾಗಬೇಕು. ಕೇಂದ್ರ ಸರಕಾರ ಹೊರಟಿರುವ ಕಾರ್ಪೋರೇಟ್‌ ಕೇಂದ್ರಿತ ಅಭಿವೃದ್ದಿಯ ಹಾದಿಯನ್ನು ತೊರೆದು ಜನ ಕೇಂದ್ರಿತ ಹೊಸ ಮಾದರಿಯನ್ನು ಕರ್ನಾಟಕ ಕಟ್ಟಿಕೊಡಲು ದಿಟ್ಟ ಹೆಜ್ಜೆಗಳನ್ನು ಮುಖ್ಯಮಂತ್ರಿ ಇಡಬೇಕು ಎಂದು ಅಧಿವೇಶನ ಆಗ್ರಹಿಸಿತು.

ಜನಚಳವಳಿಗಳ ಬಜೆಟ್_ಅಧಿವೇಶನದ ಸಂಪೂರ್ಣ ಅವಲೋಕನ ಮತ್ತು ಆಗ್ರಹ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ರಾಜ್ಯ ಬಜೆಟ್‌ನಲ್ಲಿ ಕೃಷಿಕರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...