Homeಕರ್ನಾಟಕಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನು ಕಾಂಗ್ರೆಸ್ ಇನ್ನೂ ಮುಂದುವರೆಸಿದೆ: ನೂರ್ ಶ್ರೀಧರ್ ಆಕ್ರೋಶ

- Advertisement -
- Advertisement -

ಕೇಂದ್ರ ಬಜೆಟ್‌ ಸಂಪೂರ್ಣವಾಗಿ ಜನ ವಿರೋಧಿ ಹಾಗೂ ಕಾರ್ಪೊರೇಟ್‌ ಪರವಾಗಿದ್ದು, ರಾಜ್ಯದ ಹಕ್ಕುಗಳನ್ನು ಹರಣ ಮಾಡುವಂಥದ್ದಾಗಿದೆ ಎಂದು ಕರ್ನಾಟಕ ಜನಶಕ್ತಿಯ ನೂರ್‌ ಶ್ರೀಧರ್‌ ಆಕ್ರೋಶ ಗುರುವಾರ ವ್ಯಕ್ತಪಡಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ಆಯೋಜಿಸಿದ್ದ ಜನಚಳವಳಿ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಬದಲಾಗಿದ್ದರೂ ನೀತಿಗಳು ಬದಲಾಗಿಲ್ಲ. ಹಳೆಯ ನೀತಿಗಳನ್ನು ತಿರಸ್ಕರಿಸದೆಯೇ ಹೊಸ ಹಾದಿಯನ್ನು ತುಳಿಯುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರೆ ಅದನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ತಂದಿದ್ದ

ಬಿಜೆಪಿ ತಂದಿದ್ದ 8 ಮನೆಹಾಳು ಕಾಯ್ದೆಗಳನ್ನೂ ಮುಂದುವರೆಸುವ ಮೂಲಕ ಕಾಂಗ್ರೆಸ್‌ ನೀತಿಗೂ ಬಿಜೆಪಿ ನೀತಿಗೂ ಆರ್ಥಿಕ ವಿಚಾರದಲ್ಲಿ ಬದಲಾವಣೆ ಇಲ್ಲ ಎಂಬುದನ್ನು ಸರಕಾರ ಸ್ಪಷ್ಟವಾಗಿ ತೋರಿಸಿಕೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕೃಷಿಯನ್ನು ಸಂಪೂರ್ಣವಾಗಿ ಖಾಸಗಿ ಕಾರ್ಪೋರೇಟುಗಳಿಗೆ ಒಪ್ಪಿಸಲು ಹಾತೊರೆಯುತ್ತಿದೆ. ಅಲ್ಲದೆ ಕಾರ್ಮಿಕ ವರ್ಗದ ಎಲ್ಲ ಹಕ್ಕುಗಳನ್ನು ಕಸಿದು ಗುಲಾಮಿ ಕಾರ್ಮಿಕರನ್ನು ಸೃಷ್ಟಿಸಲು ಬಯಸುತ್ತಿದೆ. ಜಿಎಸ್‌ಟಿ ಎಂಬುದು ಜನಸಾಮಾನ್ಯರನ್ನು ಸುಲಿಯುವ ಹಾಗೂ ರಾಜ್ಯದ ಸಂಪನ್ಮೂಲಗಳನ್ನೆಲ್ಲಾ ಸೂರೆಗೈದು ಅವನ್ನು ದೈನೇಸಿಯಾಗಿಸಿ ಬೇಡುವ ಸ್ಥಿತಿಗೆ ತಳ್ಳುವ ಲೂಟಿಕೋರ ಪದ್ದತಿಯಾಗಿದೆ. ಸೆಸ್‌ ಹಣವನ್ನೆಲ್ಲಾ ಕೇಂದ್ರವೇ ಕಬಳಿಸಿ ರಾಜ್ಯಗಳಿಗೆ ದ್ರೋಹಬಗೆಯಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಬಜೆಟ್‌ ಮತ್ತು ನೀತಿಗಳು ಖಾಸಗೀಕರಣವನ್ನು ವೇಗಗೊಳಿಸುವ ಮತ್ತು ಕಲ್ಯಾಣ ಕ್ರಮಗಳಿಗೆ ಕತ್ತರಿ ಹಾಕುವ ಗುರಿಯನ್ನು ಹೊಂದಿವೆ. ಇವು ಶೋಷಿತ ಸಮುದಾಯಗಳ ಸಬಲೀಕರಣಕ್ಕೆ ಇದ್ದ ಎಲ್ಲ ಮಾರ್ಗಗಳನ್ನು ಮುಚ್ಚಿಹಾಕಿ, ಮೀಸಲಾತಿಯನ್ನು ಅಘೋಷಿತವಾಗಿ ರದ್ದುಮಾಡಿ, ಅವರನ್ನು ಮತ್ತೆ ಕತ್ತಲಕೂಪಕ್ಕೆ ತಳ್ಳುವ ಇರಾದೆಯನ್ನು ಹೊಂದಿವೆ ಎಂದರು.

ಕಾಂಗ್ರೆಸ್‌ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿದೆ. 5 ಗ್ಯಾರಂಟಿಗಳ ಗುಂಗಿನಲ್ಲೇ ಸರಕಾರ ತೇಲುತ್ತಿದೆ. ಜನ ವರ್ಗಗಗಳಿಗೆ ಕೊಟ್ಟಿದ್ದ ಭರವಸೆಗಳಲ್ಲಿ ಒಂದೇ ಒಂದು ಭರವಸೆಯನ್ನೂ ಈಡೇರಿಸದೆ, ಈಡೇರಿಸುವ ಸೂಚನೆಯನ್ನೂ ನೀಡದೆ ದ್ರೋಹ ಬಗೆದಿದೆ. ಯಾವುದೇ ಸ್ಪಷ್ಟ ನೀತಿ ಮತ್ತು ದಿಕ್ಕು ಇಲ್ಲದ ಬಜೆಟ್‌ ಇದಾಗಿದೆ. ಜನಪರ ಅಭಿವೃದ್ದಿಯ ರೋಡ್‌ ಮ್ಯಾಪ್‌ ಇಲ್ಲದ ಬಜೆಟ್‌ ಇದಾಗಿದೆ ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

ರಾಜ್ಯ ಸರ್ಕಾರದ ಬೆಂಗಳೂರು ಮತ್ತು ಕಾರ್ಪೋರೇಟ್‌ ಕೇಂದ್ರಿತ ಬಜೆಟ್‌ ಆಗಿದೆ. ಕೃಷಿ ಬಿಕ್ಕಟ್ಟನ್ನು ಬಗೆಹರಿಸಲಿಕ್ಕಾಗಲೀ, ರೈತರನ್ನು ಋಣಮುಕ್ತರನ್ನಾಗಿಸಲಿಕ್ಕಾಗಲೀ, ರೈತರ ಬೆಳೆಗೆ ನ್ಯಾಯಸಮ್ಮತ ಬೆಲೆ ದಕ್ಕಿಸಿಕೊಡಲಿಕ್ಕಾಗಲೀ, ಕಾರ್ಮಿಕರಿಗೆ ಘನತೆಯ ವೇತನ ಖಾತ್ರಿ ಪಡಿಸಲಿಕ್ಕಾಗಲೀ, ಉದ್ಯೋಗ ಸೃಷ್ಟಿಸಲಿಕ್ಕಾಗಲೀ, ಕನಿಷ್ಟ ವೇತನವನ್ನು ಖಾತ್ರಿಪಡಿಸಲಿಕ್ಕಾಗಲೀ, ತಳ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಾಗಲೀ, ಬಡವರಿಗೆ ಭೂಮಿ ಮತ್ತು ವಸತಿ ಒದಗಿಸಲಿಕ್ಕಾಗಲೀ ಯಾವುದೇ ನಿರ್ಧಿಷ್ಟ ಕ್ರಮಗಳಿಲ್ಲ ಎಂದು ಅವರು ಹೇಳಿದರು.

ಎರಡು ದಿನಗಳ ಕಾಲ ನಡೆದ ಜನಚಳವಳಿಗಳ ಅಧಿವೇಶನದಲ್ಲಿ ಸಂಯುಕ್ತ ಹೋರಾಟದ ಪದಾಧಿಕಾರಿಗಳಾದ ಬಡಗಲಪುರ ನಾಗೇಂದ್ರ, ಯಶ್ವಂತ ಟಿ., ಕೆ.ವಿ.ಭಟ್‌, ವರಲಕ್ಷ್ಮೀ, ಚಾಮರಸ ಪಾಟೀಲ್‌, ಮಾವಳ್ಳಿ ಶಂಕರ್‌, ಗುರುಪ್ರಸಾದ್‌ ಕೆರಗೋಡು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ಸಂಭಾಲ್ ಅಧಿಕಾರಿಯಿಂದ ಮುಸ್ಲಿಮರ ಕುರಿತು ವಿವಾದಾತ್ಮಕ ಹೇಳಿಕೆ: ಟೀಕಿಸಿದ ಮುಸ್ಲಿಂ ಯುವಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ...

ಉತ್ತರ ಪ್ರದೇಶ: ಅಂಬೇಡ್ಕರ್ ಜಯಂತಿಯಂದು ಪ್ರತಿಮೆ ಸ್ಥಾಪನೆಗೆ ವಿರೋಧ: ಲಖಿಂಪುರ ಖೇರಿಯಲ್ಲಿ ಭುಗಿಲೆದ್ದ ಘರ್ಷಣೆ 

ಸರ್ಕಾರಿ ಭೂಮಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ವಿವಾದವು ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದ ನಂತರ ಮಂಗಳವಾರ ಸಂಜೆ ಮೈಲಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಕೆಗಂಜ್...

‘ನಮಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ..’; ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಯ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ

2011 ರ ಜನಗಣತಿಯ ಪ್ರಕಾರ ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 27 ರಷ್ಟಿರುವ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮುಸ್ಲಿಂ ಸಮುದಾಯದ ಮತಗಳನ್ನು ಕೇಳುವ ಅಗತ್ಯವಿಲ್ಲ ಎಂದು ಬಂಗಾಳ...

ಅಸ್ಸಾಂ ಸಿಎಂ ಪತ್ನಿ ವಿರುದ್ಧ ಬಹು ಪಾಸ್‌ಪೋರ್ಟ್ ಆರೋಪ : ಪವನ್ ಖೇರಾ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನಿಗೆ ಸುಪ್ರೀಂ ಕೋರ್ಟ್ ಬುಧವಾರ (ಏ.15) ತಡೆ ನೀಡಿದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ...

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...