Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...