Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...