Homeಮುಖಪುಟದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

ದೆಹಲಿ ಜನರ ಹಣಕಾಸಿನ ಹೊರೆ ಇಳಿಸಿದ ಸಿಎಂ ಕೇಜ್ರಿವಾಲ್..!

- Advertisement -
- Advertisement -

ಅಧಿಕೃತ ಪೈಪ್ ನೀರು ಮತ್ತು ಒಳಚರಂಡಿ ಸಂಪರ್ಕವಿಲ್ಲದ ದೆಹಲಿ ನಿವಾಸಿಗಳಿಗೆ ಸಹಾಯ ಮಾಡಲು ಶುಲ್ಕವನ್ನು ಭಾರೀ ಪ್ರಮಾಣದಲ್ಲಿ ಇಳಿಸಲಾಗಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಕೈಗೊಂಡಿರುವ ಈ ಕ್ರಮದಿಂದ ನೀರಿನಿಂದ ಮತ್ತು ಗಾಳಿಯಿಂದ ಹರಡುವ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ ಎಂದು ಹೇಳಲಾಗಿದೆ. ಶುದ್ಧ ನೀರನ್ನು ಮನೆ ಮನೆಗೂ ತಲುಪಿಸುವ ಯೋಜನೆಗೆ ಇದು ಪೂರಕವಾಗಿದೆ. ಇಷ್ಟು ದಿನ ಲಕ್ಷಗಟ್ಟಲೇ ಹಣ ಸುರಿಯುತ್ತಿದ್ದ ಜನರು ಕಡಿಮೆ ಹಣದಲ್ಲಿ ನೀರಿನ ಸಂಪರ್ಕ ವ್ಯವಸ್ಥೆ ಹೊಂದಬಹುದು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಜಲಮಂಡಳಿ ಹೊಸ ನೀರು ಮತ್ತು ಒಳಚರಂಡಿ ಸಂಪರ್ಕದ ಶುಲ್ಕದ ಮೂಲ ಮೊತ್ತವನ್ನು 1/50 ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. ಅಂದರೆ 200 ಚದರ ಮೀಟರ್ ಪ್ರದೇಶಕ್ಕೆ 1,14,110 ರೂ. ಕಟ್ಟುವ ಬದಲು ಕೇವಲ 2310 ರೂ. ಕಟ್ಟುವ ಸೌಲಭ್ಯ ದೊರೆತಿದೆ.

ಸರಿಸುಮಾರು ಶೇ. 18ರಷ್ಟು ಜನ ಇದರ ಪ್ರಯೋಜನ ಪಡೆಯಲಿದ್ದಾರೆ. ದೆಹಲಿಯ ಸುಮಾರು 6 ಲಕ್ಷ ಕುಟುಂಬಗಳು ಪ್ರಸ್ತುತ ಕೊಳವೆ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ ಹೊಂದಿಲ್ಲ. ಈ ಮನೆಗಳು ಹೆಚ್ಚಾಗಿ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿವೆ.

ದೆಹಲಿ ಜಲ ಮಂಡಳಿಯ ಅಧ್ಯಕ್ಷರೂ ಆಗಿರುವ ಸಿಎಂ ಕೇಜ್ರಿವಾಲ್ ಅವರು ಹೊಸ ನೀರು ಮತ್ತು ಒಳಚರಂಡಿ ಸಂಪರ್ಕಕ್ಕಾಗಿ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕವನ್ನು ಮನ್ನಾ ಮಾಡಿದ್ದಾರೆ. ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಾಗ ಮೀಟರ್‌ಗೆ 500 ರೂ. ಇದ್ದಿದ್ದನ್ನು 100 ರೂ.ಗೆ ಇಳಿಸಿದರು. ಆದಾಗ್ಯೂ, ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ ವೆಚ್ಚ ಕಡಿತ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಭವ್ಯ ದೇಗುಲ ನಿರ್ಮಾಣವಾಗಲಿ ಎಂದು ಕಾಂಗ್ರೆಸ್‌ ಬಯಸುತ್ತದೆ: ಸಚಿನ್ ಪೈಲಟ್

ನೀರಿನ ಪೈಪ್‌ಲೈನ್‌ ಮೂಲಕ ಅಕ್ರಮ ಎಸಗುತ್ತಿದ್ದವರಿಗೆ ಇದು ಕಡಿವಾಣ ಹಾಕಿದೆ. ನಿರ್ದಿಷ್ಟ ಪ್ರದೇಶಗಳಲ್ಲಿ ಡಿಜೆಬಿ ನೀರಿನ ಪೈಪ್‌ಲೈನ್‌ಗಳನ್ನು ಹಾಕಿದ್ದರೂ, ಹೆಚ್ಚಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಶುಲ್ಕದಿಂದಾಗಿ ಹೆಚ್ಚಿನ ನಿವಾಸಿಗಳು ಇನ್ನೂ ಸಂಪರ್ಕವನ್ನು ಪಡೆದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪೈಪ್‌ಲೈನ್‌ಗಳು, ನೀರು ಸಂಸ್ಕರಣಾ ಘಟಕಗಳು ಮತ್ತು ಪಂಪಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಈ ಅವಶ್ಯಕತೆಗಳಲ್ಲಿ ಹೂಡಿಕೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಆಪ್ ಅಧಿಕಾರಾವಧಿಯಲ್ಲಿ, 2014 ರಿಂದ 1,047 ಚದರ ಕಿ.ಮೀ ವ್ಯಾಪ್ತಿಯಲ್ಲಿ ನೀರಿನ ಪೈಪ್‌ಲೈನ್‌ಗಳನ್ನು ಹೊಂದಿರುವವರ ಸಂಖ್ಯೆ ಶೇ. 58 ರಿಂದ ಶೇ. 93ಕ್ಕೆ ಏರಿಕೆಯಾಗಿದೆ. ಕಡಿತಗೊಳಿಸಿದ ಶುಲ್ಕಗಳು ದೆಹಲಿಯಲ್ಲಿ ಲೆಕ್ಕವಿಲ್ಲದ ಅಥವಾ ಆದಾಯರಹಿತ ನೀರನ್ನು ತಗ್ಗಿಸುತ್ತವೆ ಹಲವು ಜನ ಅಕ್ರಮ ಸಂಪರ್ಕವನ್ನು ಬಿಟ್ಟಿದ್ದಾರೆ.

ಪ್ರಸ್ತುತ ನೀರಿನ ಅಭಿವೃದ್ಧಿ ಶುಲ್ಕ ಪ್ರತಿ ಚದರ ಮೀಟರ್‌ಗೆ 440 ರೂ. ಮತ್ತು ಒಳಚರಂಡಿ ಅಭಿವೃದ್ಧಿ ಶುಲ್ಕ, ಚದರ ಮೀಟರ್‌ಗೆ 494 ರೂ. ಇದೆ. ಈಗ ಎಲ್ಲಾ ದೆಹಲಿ ಜಲ ಮಂಡಳಿ ಗ್ರಾಹಕರು ಆ ಆರೋಪಗಳಿಂದ ಮುಕ್ತರಾಗಿದ್ದಾರೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಮೂಲಸೌಕರ್ಯವನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಜಲ ಮಂಡಳಿಯು ಜಿಟಿ ರಸ್ತೆಯಲ್ಲಿ (ಶಹದ್ರಾ) ಹೆಚ್ಚುವರಿ ಭೂಗತ ಜಲಾಶಯ ಮತ್ತು ಬೂಸ್ಟರ್ ಪಂಪಿಂಗ್ ಸ್ಟೇಷನ್‌ನಂತಹ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳುತ್ತಿದೆ ಎಂದು ಸಿಎಂ ಘೋಷಿಸಿದ್ದಾರೆ.

ಬಡ ಪ್ರದೇಶಗಳಾದ ಪುನರ್ವಸತಿ ವಸಾಹತುಗಳು, ಕೊಳೆಗೇರಿಗಳು ಮತ್ತು ಜೆಜೆ ಕ್ಲಸ್ಟರ್‌ಗಳು ದೆಹಲಿಯವರಿಗೆ ಕೊಳವೆ ನೀರು ಮತ್ತು ಆರೋಗ್ಯಕರ ಒಳಚರಂಡಿ ವ್ಯವಸ್ಥೆ ಹೊಂದಿಲ್ಲದ ಪ್ರದೇಶಗಳಾಗಿವೆ. ದೂರದಿಂದ ಕೊಳಕು ನೀರನ್ನು ತಂದು ಹಲವು ದಿನಗಳವರೆಗೆ ಸಂಗ್ರಹಿಸಿಡುತ್ತಾರೆ. ಹೀಗಾಗಿ ರೋಗ-ರುಜಿನ ಹೆಚ್ಚಿದೆ. ಸರಿಯಾದ ಪೈಪ್‌ಲೈನ್‌ ಅಥವಾ ನೀರು ಮತ್ತು ಒಳಚರಂಡಿ ವ್ಯವಸ್ಥೆಯಿದ್ದರೆ ರೋಗಗಳ ಪ್ರಕರಣಗಳನ್ನು ತಗ್ಗಿಸುತ್ತದೆ.

ದೆಹಲಿ ಜಲ ಮಂಡಳಿಯು ಸೋನಿಯಾ ವಿಹಾರ್ ಮತ್ತು ರಾಜೀವ್ ನಗರದಲ್ಲಿ 110 ಕಿ.ಮೀ ಹೊಸ ಒಳಚರಂಡಿ ಮಾರ್ಗ ನಿರ್ಮಿಸಲಿದೆ. ರಾಜಧಾನಿಯ ಅನೇಕ ಪ್ರದೇಶಗಳ ಕಿರಿದಾದ ಬೀದಿಗಳನ್ನು ತೆರವುಗೊಳಿಸಲು ಡಿಜೆಬಿ ಹೊಸ ಒಳಚರಂಡಿ ಶುಚಿಗೊಳಿಸುವ ಯಂತ್ರಗಳನ್ನು ನಿಯೋಜಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇಜ್ರೀವಾಲರ ಈ ಕ್ರಮ ಸ್ವಾಗತಾರ್ಹ. ಆಡಳಿತಾರೂಢರು ಮನಸ್ಸು ಮಾಡಿದರೆ ಇಂತಹ ಜನಪರ ಕಾರ್ಯಗಳನ್ನು ಜಾರಿಗೊಳಿಸಬಹುದು ಎಂಬುದಕ್ಕೆ ಇದೊಂದು ಅತ್ಯುತ್ತಮ ಉದಾಹರಣೆ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...