Homeಅಂತರಾಷ್ಟ್ರೀಯಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

- Advertisement -
- Advertisement -

ಗಾಜಾದಿಂದ ಸುಡಾನ್, ಸೊಮಾಲಿಯಾ ಮತ್ತು ಅದರ ಬೇರ್ಪಟ್ಟ ಪ್ರದೇಶವಾದ ಸೊಮಾಲಿಲ್ಯಾಂಡ್‌ಗೆ ಪ್ಯಾಲೆಸ್ತೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಗಳು ಮೂರು ಪೂರ್ವ ಆಫ್ರಿಕಾದ ಸರ್ಕಾರಗಳೊಂದಿಗೆ ಚರ್ಚಿಸಿವೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರದ ವರದಿಯಲ್ಲಿ ಸುಡಾನ್ ಅಧಿಕಾರಿಗಳು ಅಮೆರಿಕದ ಪ್ರಸ್ತಾವನೆಗಳನ್ನು ತಿರಸ್ಕರಿಸಿರುವುದಾಗಿ ಹೇಳಿಕೊಂಡರೆ, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಅಧಿಕಾರಿಗಳು ಯಾವುದೇ ಸಂಪರ್ಕಗಳ ಬಗ್ಗೆ ತಿಳಿದಿಲ್ಲ ಎಂದು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ರಹಸ್ಯ ರಾಜತಾಂತ್ರಿಕ ಉಪಕ್ರಮದ ಬಗ್ಗೆ ಚರ್ಚಿಸಲು ಅನಾಮಧೇಯತೆಯ ಷರತ್ತಿನ ಮೇಲೆ ಮಾತನಾಡಿದ ಅಮೆರಿಕ ಮತ್ತು ಇಸ್ರೇಲಿ ಅಧಿಕಾರಿಗಳು, ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನೊಂದಿಗಿನ ಸಂಪರ್ಕಗಳನ್ನು ದೃಢಪಡಿಸಿದರು ಮತ್ತು ಅಮೆರಿಕದ ಅಧಿಕಾರಿಗಳು ಸುಡಾನ್ ಅನ್ನು ಸಹ ದೃಢಪಡಿಸಿದರು. ಪ್ರಯತ್ನಗಳು ಎಷ್ಟು ಪ್ರಗತಿ ಸಾಧಿಸಿವೆ ಅಥವಾ ಚರ್ಚೆಗಳು ಯಾವ ಮಟ್ಟದಲ್ಲಿ ನಡೆದವು ಎಂಬುದು ಸ್ಪಷ್ಟವಾಗಿಲ್ಲ ಎಂದು ಅದು ಹೇಳಿದೆ.

ಪ್ಯಾಲೆಸ್ಟೀನಿಯನ್ನರನ್ನು ಬಲವಂತವಾಗಿ ಸ್ಥಳಾಂತರಿಸುವ ಮತ್ತು ಗಾಜಾ ಪಟ್ಟಿಯನ್ನು “ಸ್ವಾಧೀನಪಡಿಸಿಕೊಳ್ಳುವ” ಕಲ್ಪನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಡಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಇದನ್ನು ಪ್ಯಾಲೆಸ್ಟೀನಿಯನ್ನರು ಮತ್ತು ಮಧ್ಯಪ್ರಾಚ್ಯದ ದೇಶಗಳು ಸಂಪೂರ್ಣವಾಗಿ ತಿರಸ್ಕರಿಸಿವೆ. ಅನೇಕರು ಇದನ್ನು ಜನಾಂಗೀಯ ಶುದ್ಧೀಕರಣ ಎಂದು ಬಣ್ಣಿಸಿದ್ದಾರೆ.

ಟ್ರಂಪ್ ಅವರು ನೆತನ್ಯಾಹು ಜೊತೆಗೆ ಗಾಜಾ ಯೋಜನೆಯನ್ನು ಮಂಡಿಸಿದ ಕೆಲವು ದಿನಗಳ ನಂತರ, ಅಮೆರಿಕ ಮತ್ತು ಇಸ್ರೇಲ್‌ನಿಂದ ಮೂರು ಸಂಭಾವ್ಯ ತಾಣಗಳಿಗೆ ಪ್ರತ್ಯೇಕ ಸಂಪರ್ಕವು ಕಳೆದ ತಿಂಗಳು ಪ್ರಾರಂಭವಾಯಿತು ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ. ಈ ಚರ್ಚೆಗಳಲ್ಲಿ ಇಸ್ರೇಲ್ ಮುಂಚೂಣಿಯಲ್ಲಿದೆ ಎಂದು ಅದು ವರದಿ ಮಾಡಿದೆ.

ಈ ವರದಿ ಕುರಿತಂತೆ ಅಮೆರಿಕ ಅಥವಾ ಇಸ್ರೇಲ್‌ನಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಆದರೆ ಪ್ಯಾಲೆಸ್ಟೀನಿಯನ್ನರ “ಸ್ವಯಂಪ್ರೇರಿತ” ವಲಸೆ ಎಂದು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ಇಸ್ರೇಲಿ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್, ಈ ವಾರ ಇಸ್ರೇಲ್ ಇವರ ಸ್ಥಳಾಂತರಕ್ಕೆ ದೇಶಗಳನ್ನು ಗುರುತಿಸಲು ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ. ಇಸ್ರೇಲ್ ತನ್ನ ರಕ್ಷಣಾ ಸಚಿವಾಲಯದೊಳಗೆ “ಬಹಳ ದೊಡ್ಡ ವಲಸೆ ಇಲಾಖೆ”ಯನ್ನು ಸಿದ್ಧಪಡಿಸುತ್ತಿದೆ ಎಂದು ಕೂಡ ಅದು ವರದಿ ಮಾಡಿದೆ.

ದೋಹಾ ಇನ್‌ಸ್ಟಿಟ್ಯೂಟ್ ಫಾರ್ ಗ್ರಾಜುಯೇಟ್ ಸ್ಟಡೀಸ್‌ನ ಅಸೋಸಿಯೇಟ್ ಪ್ರೊಫೆಸರ್ ಟ್ಯಾಮರ್ ಕ್ವಾರ್ಮೌಟ್  ಅವರು ಅಲ್ ಜಜೀರಾ ಜೊತೆ ಮಾತನಾಡಿ, ಪ್ಯಾಲೆಸ್ಟೀನಿಯನ್ನರ ಸ್ಥಳಾಂತರವು “ದಾಟಿ ಹೋಗಬಾರದ ಕೆಂಪು ರೇಖೆ” ಎಂದು ಹೇಳಿದ್ದಾರೆ.

ಪ್ರಪಂಚದಾದ್ಯಂತದ ಸರ್ಕಾರಗಳು ಈ “ಅತಿರೇಕದ” ಪ್ರಸ್ತಾವನೆಯನ್ನು ನಿಲ್ಲಿಸುವ ಜವಾಬ್ದಾರಿಯನ್ನು ಹೊಂದಿವೆ ಮತ್ತು “ಈ ಯಾವುದೇ ಸನ್ನಿವೇಶಗಳಲ್ಲಿ ಇಸ್ರೇಲ್‌ನೊಂದಿಗೆ ತೊಡಗಿಸಿಕೊಳ್ಳಬಾರದು” ಎಂದು ಅವರು ಹೇಳಿದರು. ವಿಶೇಷವಾಗಿ ಪ್ಯಾಲೆಸ್ಟೀನಿಯನ್ನರನ್ನು ವಸಾಹತುಶಾಹಿ ಪರಂಪರೆಯಿಂದ ಹೋರಾಡುತ್ತಲೇ ಇರುವ ಆಫ್ರಿಕನ್ ದೇಶಗಳಿಗೆ ಸ್ಥಳಾಂತರಿಸುವುದು ಖಂಡನೀಯ ಎಂದಿದ್ದಾರೆ.

ವಸಾಹತುಶಾಹಿ ಪರಂಪರೆಯಿಂದಾಗಿ ಸುಡಾನ್ ಮತ್ತು ಸೊಮಾಲಿಯಾ ಇನ್ನೂ ಯುದ್ಧಗಳಿಂದ ಜರ್ಜರಿತಗೊಂಡಿವೆ ಎಂದು ಕಾರ್ಮೌಟ್ ಹೇಳಿದ್ದಾರೆ.

ಮಾನ್ಯತೆಗೆ ಬದಲಾಗಿ ಅಮೆರಿಕಕ್ಕೆ ಸಹಾಯಕವಾಗಬಹುದಾದ ಹಲವಾರು ಕ್ಷೇತ್ರಗಳ ಕುರಿತು ಸೊಮಾಲಿಲ್ಯಾಂಡ್‌ನೊಂದಿಗೆ ಅಮೆರಿಕವು ಸಂಭಾಷಣೆ ನಡೆಸುತ್ತಿದೆ ಎಂದು ಈ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಅಮೆರಿಕದ ಅಧಿಕಾರಿಯೊಬ್ಬರು ಎಪಿಗೆ ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಪ್ಯಾಲೆಸ್ಟೀನಿಯನ್ ಸ್ವ-ಆಡಳಿತಕ್ಕೆ ಸೊಮಾಲಿಯಾ ಬಲವಾದ ಬೆಂಬಲವನ್ನು ನೀಡುತ್ತಿರುವಾಗ ಪ್ಯಾಲೆಸ್ಟೀನಿಯನ್ನರಿಗೆ ಆತಿಥ್ಯ ವಹಿಸಲು ಸೊಮಾಲಿಯಾ ಏಕೆ ಬಯಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ನೈರೋಬಿಯಲ್ಲಿ ವಕೀಲ ಮತ್ತು ಸಂಘರ್ಷ ಸಂಶೋಧಕ ಸಾಂಬು ಚೆಪ್ಕೋರಿರ್ ಎಪಿಗೆ ತಿಳಿಸಿದ್ದಾರೆ.

ಸೂಕ್ಷ್ಮ ರಾಜತಾಂತ್ರಿಕ ವಿಷಯದ ಕುರಿತು ಚರ್ಚಿಸಲು ಹೆಸರು ಬಹಿರಂಗಪಡಿಸಲು ಇಚ್ಛಿಸದ ಇಬ್ಬರು ಸುಡಾನ್ ಅಧಿಕಾರಿಗಳು, ಟ್ರಂಪ್ ಆಡಳಿತವು ಪ್ಯಾಲೆಸ್ಟೀನಿಯನ್ನರನ್ನು ಸ್ವೀಕರಿಸುವ ಬಗ್ಗೆ ಮಿಲಿಟರಿ ನೇತೃತ್ವದ ಸರ್ಕಾರವನ್ನು ಸಂಪರ್ಕಿಸಿದೆ ಎಂದು ದೃಢಪಡಿಸಿದರು.

ಸುಡಾನ್ ಸರ್ಕಾರ ಈ ವಿಚಾರವನ್ನು ತಿರಸ್ಕರಿಸಿದೆ ಎಂದು ಇಬ್ಬರೂ ಅಧಿಕಾರಿಗಳು ತಿಳಿಸಿದ್ದಾರೆ. “ಈ ಸಲಹೆಯನ್ನು ತಕ್ಷಣವೇ ತಿರಸ್ಕರಿಸಲಾಯಿತು” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಈ ಕುರಿತು ರಾಯಿಟರ್ಸ್‌ನ ಪ್ರತಿಕ್ರಿಯೆಗೆ ಶ್ವೇತಭವನ ಮತ್ತು ಯುಎಸ್ ವಿದೇಶಾಂಗ ಇಲಾಖೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಸೊಮಾಲಿಯಾ ಮತ್ತು ಸೊಮಾಲಿಲ್ಯಾಂಡ್‌ನ ಮಾಹಿತಿ ಸಚಿವರು ರಾಯಿಟರ್ಸ್‌ನ ಪ್ರತಿಕ್ರಿಯೆ ಕೋರಿದ ದೂರವಾಣಿ ಕರೆಗಳಿಗೆ ಉತ್ತರಿಸಲಿಲ್ಲ.

12 ಮಿಲಿಯನ್ ಸ್ವಂತ ಜನರನ್ನು ಸ್ಥಳಾಂತರಿಸಿರುವ ಮತ್ತು ಕ್ಷಾಮವನ್ನು ಎದುರಿಸುತ್ತಾ, ವಿನಾಶಕಾರಿ ಅಂತರ್ಯುದ್ಧವನ್ನು ಎದುರಿಸುತ್ತಿರುವ ದೇಶವಾದ ಸುಡಾನ್‌ನ ವಿದೇಶಾಂಗ ಸಚಿವಾಲಯವು ಪ್ರತಿಕ್ರಿಯಿಸಿಲ್ಲ. ಈ ತಿಂಗಳ ಆರಂಭದಲ್ಲಿ  ಅರಬ್ ನಾಯಕರು ಗಾಜಾಗೆ 53 ಬಿಲಿಯನ್ ಡಾಲರ್‌ಗಳ ಈಜಿಪ್ಟ್ ಪುನರ್ನಿರ್ಮಾಣ ಯೋಜನೆಯನ್ನು ಘೋಷಿಸಿದ್ದಾರೆ. ಇದು ಪ್ಯಾಲೆಸ್ಟೀನಿಯನ್ನರನ್ನು ಎನ್ಕ್ಲೇವ್‌ನಿಂದ ಸ್ಥಳಾಂತರಿಸುವುದನ್ನು ತಪ್ಪಿಸುತ್ತದೆ. ಇದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಮಧ್ಯಪ್ರಾಚ್ಯ ರಿವೇರಿಯಾ”ದ ದೃಷ್ಟಿಕೋನಕ್ಕೆ ವ್ಯತಿರಿಕ್ತವಾಗಿದೆ. ಈ ಘೋಷಣೆಯ ಯೋಜನೆಯಲ್ಲಿ ಸುಡಾನ್ ಮತ್ತು ಸೊಮಾಲಿಯಾ ಎರಡೂ ರಾಷ್ಟ್ರಗಳ ನಾಯಕರು ಸೇರಿದ್ದರು.

ಟ್ರಂಪ್ ಅವರ ಯೋಜನೆಯು ತಮ್ಮ ನೆಲೆಯಿಂದ ಶಾಶ್ವತವಾಗಿ ಓಡಿಸಲ್ಪಡುವ ಬಗ್ಗೆ ದೀರ್ಘಕಾಲದ ಪ್ಯಾಲೆಸ್ಟೀನಿಯನ್ ಭಯವನ್ನು ಬಲಪಡಿಸಿದೆ ಮತ್ತು ಅಂತರರಾಷ್ಟ್ರೀಯವಾಗಿ ವ್ಯಾಪಕ ತಿರಸ್ಕಾರವನ್ನು ಎದುರಿಸಿದೆ.

ಹಾವೇರಿ | ನರ್ಸ್ ಸ್ವಾತಿ ಬ್ಯಾಡಗಿ ಕೊಲೆ ಪ್ರಕರಣ ; ಆರೋಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...