Homeಮುಖಪುಟಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

- Advertisement -
- Advertisement -

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಮಾರ್ಚ್ 7 ರಂದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ನಾಯಕರನ್ನು ಈ ಪ್ರಕ್ರಿಯೆಯ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಕರೆ ನೀಡಿದ್ದರು. ಕ್ಷೇತ್ರ ಪುನರ್‌ವಿಂಗಡನೆ

ಡಿಎಂಕೆಯ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಅವರು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ ಸಮಿತಿಯ ಮೊದಲ ಸಭೆಯಲ್ಲಿ ಏಳು ರಾಜ್ಯಗಳ ಮುಖ್ಯಮಂತ್ರಿಗಳನ್ನು ಸೇರುವಂತೆ ಒತ್ತಾಯಿಸಿದ್ದಾರೆ. ಶುಕ್ರವಾರದಂದು ತಮಿಳುನಾಡಿನ ಐಟಿ ಮತ್ತು ಡಿಜಿಟಲ್ ಸೇವೆಗಳ ಸಚಿವ ಪಳನಿವೇಲ್ ತ್ಯಾಗರಾಜನ್ ಮತ್ತು ದಕ್ಷಿಣ ಚೆನ್ನೈ ಸಂಸದ ತಮಿಝಾಚಿ ತಂಗಪಾಂಡ್ಯನ್ ಅವರು ತಮ್ಮನ್ನು ಭೇಟಿ ಮಾಡಿರುವುದಾಗಿ ಪಿಣರಾಯಿ ವಿಜಯನ್ ಹೇಳಿದ್ದು, ಅವರು ಸಮಿತಿ ಸಭೆಗೆ ತಮ್ಮನ್ನು ಆಹ್ವಾನಿಸಿದ್ದಾಗಿ ಹೇಳಿದ್ದಾರೆ.

“ಈ ಪ್ರಮುಖ ವಿಷಯದ ಬಗ್ಗೆ ಒಗ್ಗಟ್ಟಿನಿಂದ ನಿಲ್ಲಿರಿ” ಎಂದು ಸಿಎಂ ಪಿಣರಾಯಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿದ್ದಾರೆ. ಕ್ಷೇತ್ರ ಪುನರ್‌ವಿಂಗಡನೆ

“ರಾಜ್ಯಗಳೊಂದಿಗೆ ಒಮ್ಮತಕ್ಕೆ ಬಂದ ನಂತರ ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡನೆ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಸಿದ್ಧರಾಗಿರಬೇಕು. ಯಾವುದೇ ರಾಜ್ಯದ ಕ್ಷೇತ್ರಗಳ ಅನುಪಾತದ ಪಾಲನ್ನು ಕಡಿಮೆ ಮಾಡದೆ ಇದನ್ನು ಕೈಗೊಳ್ಳಬೇಕು.” ಎಂದು ಸಿಎಂ ಪಿಣರಾಯಿ ಅವರು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರ ಕೇಂದ್ರ ಸರ್ಕಾರಗಳು ಪರಿಚಯಿಸಿದ ಕುಟುಂಬ ಯೋಜನಾ ನೀತಿಗಳಿಗೆ ಅನುಗುಣವಾಗಿ ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ದಂಡ ವಿಧಿಸಬಾರದು ಎಂದು ಅವರು ಹೇಳಿದ್ದಾರೆ. “ಕೇಂದ್ರ ಸರ್ಕಾರದ ಈ ನಡೆಯು ಇಂತಹ ಕ್ರಮವುಗಳಲ್ಲಿ ವಿಫಲವಾದ ರಾಜ್ಯಗಳಿಗೆ ಬಹುಮಾನ ನೀಡಿದಂತೆ” ಎಂದು ಅವರು ಹೇಳಿದ್ದಾರೆ.

ದಕ್ಷಿಣ ರಾಜ್ಯಗಳು ಅನುಪಾತದ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಪಾಲನ್ನು ಪಡೆಯುತ್ತವೆ ಎಂಬ ಕೇಂದ್ರ ಸರ್ಕಾರದ ವಾದಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಪಿಣರಾಯಿ ವಿಜಯನ್ ಇದೇ ವೇಳೆ ಹೇಳಿದ್ದಾರೆ.

ಜಂಟಿ ಕ್ರಿಯಾ ಸಮಿತಿಗೆ ಸೇರುವಂತೆ ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ಟಾಲಿನ್ ಬರೆದ ಪತ್ರದಲ್ಲಿ, ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡನೆಯ ಪ್ರಕ್ರಿಯೆಯನ್ನು “ಫೆಡರಲಿಸಂ ಮೇಲಿನ ಸ್ಪಷ್ಟ ದಾಳಿ” ಎಂದು ಕರೆದಿದ್ದಾರೆ. “ಭಾರತದ ಪ್ರಜಾಪ್ರಭುತ್ವದ ಸಾರವು ಅದರ ಫೆಡರಲ್ ಸ್ವರೂಪದ ಮೇಲೆ ನಿಂತಿದೆ. ಒಂದು ರಾಷ್ಟ್ರವಾಗಿ ನಮ್ಮ ಪವಿತ್ರ ಏಕತೆಯನ್ನು ಗೌರವಿಸುತ್ತಲೆ ಪ್ರತಿಯೊಂದು ರಾಜ್ಯಕ್ಕೂ ಅದರ ಸರಿಯಾದ ಧ್ವನಿಯನ್ನು ಎತ್ತಿಹಿಡಿಯುವ ವ್ಯವಸ್ಥೆ ಇದಾಗಿದೆ” ಎಂದು ಅವರು ಹೇಳಿದ್ದಾರೆ.

ಗುರುವಾರದಂದು ಸ್ಟಾಲಿನ್ ಅವರು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಅಲ್ಲಿನ ವಿರೋಧ ಪಕ್ಷ ಭಾರತ ರಾಷ್ಟ್ರ ಸಮಿತಿ ನಾಯಕರನ್ನು ಸಮಿತಿ ಸಭೆಗೆ ಆಹ್ವಾನಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು ಸಭೆಯಲ್ಲಿ ಭಾಗವಹಿಸಲು “ತಾತ್ವಿಕವಾಗಿ” ಒಪ್ಪಿಕೊಂಡಿದ್ದರೂ, ಪಕ್ಷದ ನಾಯಕತ್ವದಿಂದ ಅನುಮತಿ ಪಡೆಯುವುದಾಗಿ ಕಾಂಗ್ರೆಸ್‌ನ ರೆಡ್ಡಿ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇದೇ ವೇಳೆ ಭಾರತ ರಾಷ್ಟ್ರ ಸಮಿತಿಯ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಜೊತೆಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಭೆಗೆ ಹಾಜರಾಗುವಂತೆ ಕೇಳಿಕೊಂಡಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...