Homeಕರ್ನಾಟಕಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ...

ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

- Advertisement -
- Advertisement -

ಜೆಎನ್‌ಯು ಪ್ರತಿಭಟನೆಯ ನಂತರ ಕರ್ನಾಟಕದಲ್ಲಿ ಎಲ್ಲಾ ಧಾರೆಗಳ ವಿದ್ಯಾರ್ಥಿ ಸಂಘಟನೆಗಳು ಒಂದೆಡೆ ಸೇರುತ್ತಿರುವ ಪ್ರಯತ್ನವೊಂದು ಆರಂಭವಾಗಿದೆ. ಆ ಪ್ರಯತ್ನದ ಮುಂಚೂಣಿಯಲ್ಲಿರುವವರು ಹೇಳಿದ್ದನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.

ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದು ಉಚಿತವಾಗಿ, ಸಮಾನವಾಗಿ ಎಲ್ಲರಿಗೂ ಕಡ್ಡಾಯವಾಗಿ ಸಿಗಬೇಕೆಂಬುದು ಸಂವಿಧಾನ ಆಶಯ. ಅದಕ್ಕಾಗಿ ಸಾವಿತ್ರಿಬಾಯಿ ಫುಲೆ, ಮಹಾತ್ಮ ಜ್ಯೋತಿಬಾ ಫುಲೆ, ಡಾ.ಬಿ.ಆ‌ರ್‌ ಅಂಬೇಡ್ಕರ್‌ ಸೇರಿದಂತೆ ನೂರಾರು ಮಹನೀಯರು ಹೋರಾಡಿದ್ದಾರೆ. ಇಂದಿಗೂ ಆ ಹೋರಾಟ ನಡೆಯುತ್ತಲೇ ಇದೆ. ಆದರೆ ಆಳುವ ಸರ್ಕಾರಗಳು ಮಾತ್ರ ಶಿಕ್ಷಣ ನೀಡುವ ತಮ್ಮ ಸಾಂವಿಧಾನಿಕ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸದಾ ಪ್ರಯತ್ನಿಸುತ್ತಿರುತ್ತವೆ. ಮನಬಂದಂತೆ ಖಾಸಗಿ ಸಂಸ್ಥೆಗಳನ್ನು ತೆರೆಯಲು ಅವಕಾಶ ಕೊಡುವುದು, ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚುವುದರಿಂದ ಹಿಡಿದು ಈಗ JNUವಿನಲ್ಲಿ ಯಥೇಚ್ಚ ಶುಲ್ಕ ಹೆಚ್ಚಳದವರೆಗೆ ಸರ್ಕಾರ ಹುನ್ನಾರ ನಡೆಯುತ್ತಲೇ ಇದೆ.

ಸರ್ಕಾರದ ಈ ಹುನ್ನಾರವನ್ನು ಬಯಲುಗೊಳಿಸಲು, JNU ವಿದ್ಯಾರ್ಥಿಗಳ ಹೋರಾಟ ಬೆಂಬಲಿಸಲು ಮತ್ತು ಸರ್ವರಿಗೂ ಉಚಿತ ಶಿಕ್ಷಣದ ಹಕ್ಕಿನ ದ್ವನಿಯನ್ನು ದೇಶಾದ್ಯಂತ ಪಸರಿಸಲು ಕರ್ನಾಟಕದ ಪ್ರಜ್ಞಾವಂತ ಬಳಗವೊಂದು ಸಿದ್ದಗೊಂಡಿದೆ. ಅದು ಕರ್ನಾಟಕದ ಎಲ್ಲಾ ವಿದ್ಯಾರ್ಥಿ ಸಂಘಟನೆಗಳನ್ನು ಒಂದೆಡೆ ತಂದು ಈ ಹೋರಾಟವನ್ನು ಮುನ್ನಡೆಸಲು ತೀರ್ಮಾನಿಸಿದೆ. ಆ ನೂತನ ಪ್ರಯತ್ನವೇ ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ವಾಗಿದೆ.

ಇದರ ಮೊದಲ ಪೂರ್ವಭಾವಿ ಸಭೆ ಹಿಂದುಳಿದ  ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಸಿ.ಎಸ್‌ ದ್ವಾರಕನಾಥ್‌ ಮತ್ತು ಯುವ ಹೋರಾಟಗಾರರಾದ ಬಿ.ಆರ್‌ ಭಾಸ್ಕರ್‌ ಪ್ರಸಾದ್‌ರವರ ನೇತೃತ್ವದಲ್ಲಿ ನವೆಂಬರ್‌ 23ರಂದು ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. KVS, BVS, SFI, CFI, NSUI, SIO ಹಾಗೂ ವಿದ್ಯಾರ್ಥಿ ಜನತಾದಳದ ಪ್ರತಿನಿಧಿಗಳೂ ಸಹ ಒಕ್ಕೊರಲಿನಿಂದ ಈ ಸಭೆಯಲ್ಲಿ ಭಾಗವಹಿಸಿ ಐಕ್ಯಮತ್ಯ ಸೂಚಿಸಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮುಂದಿನ ಸಭೆಯು ನವೆಂಬರ್‌ 25ರ ಸೋಮವಾರ ಸಂಜೆ 4ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌‌ನಲ್ಲಿ ನಡೆಯಲಿದ್ದು ABVP, AISA, AIDSO, DSF ಸಂಘಟನೆಗಳಿಗೂ ಆಹ್ವಾನ ನೀಡಲಾಗಿದ್ದು ಅವರೂ ಕೂಡ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿ.ಆರ್‌ ಭಾಸ್ಕರ್‌ ಪ್ರಸಾದ್‌ ತಿಳಿಸಿದ್ದಾರೆ.

LKGಯಿಂದ PHDವರೆಗೂ ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಉಚಿತವಾಗಿರಬೇಕು. ಶಿಕ್ಷಣ ರಾಷ್ಟ್ರೀಕರಣವಾಗಬೇಕು. ಜಾತಿ-ಲಿಂಗ ಧರ್ಮಗಳ ತಾರತಮ್ಯವಿಲ್ಲದೇ ಈ ದೇಶದ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ ಸಿಗಬೇಕೆಂಬುದು ಒಕ್ಕೂಟದ ಆಶಯವಾಗಿದೆ. ಇದರ ಜೊತೆಗೆ JNU ಉಳಿಸಿಕೊಳ್ಳೋಣ ಬನ್ನಿ, ಈ ಹೋರಾಟ ನಮಗಾಗಿ, ನಮ್ಮ ಮುಂದಿನ ಪೀಳಿಗೆಗಾಗಿ, ದೇಶದ ಭವ್ಯ ಭವಿಷ್ಯಕ್ಕಾಗಿ ಎಂದು ಸಹ ಕರೆ ಕೊಡಲಾಗಿದೆ.

JNU ವಿದ್ಯಾರ್ಥಿಗಳ ಹೋರಾಟಕ್ಕೆ ನಾವು ಹೇಗೆ ಬೆಂಬಲಿಸಬಹುದು? ಇದರೊಂದಿಗೆ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರೈಮರಿಯಿಂದ ಪಿಎಚ್.ಡಿ‌ ವರಗೂ ಉಚಿತ ಶಿಕ್ಷಣ ನೀಡಬೇಕು ಮತ್ತು‌ ಅತಿಮುಖ್ಯವಾಗಿ ಶಿಕ್ಷಣವನ್ನು ರಾಷ್ಡ್ರೀಕರಣ ಮಾಡಬೇಕು ಎಂಬುದರ ಬಗ್ಗೆ ನಮ್ಮ ಗಾಂಧಿನಗರದ ಕಛೇರಿಯಲ್ಲಿ ಇಂದು ಕರೆದಿದ್ದ ಸಭೆಗೆ ಬಹುತೇಕ ಎಲ್ಲಾ ವಿದ್ಯಾರ್ಥಿ ಸಂಘಟನೆಗಳ ನಾಯಕರು ತಮ್ಮ ಪಕ್ಷಬೇದ ತೊರೆದು, ಸೈದ್ದಾಂತಿಕ ಬಿನ್ನಾಭಿಪ್ರಾಯ ಬದಿಗಿಟ್ಟು ಬಂದಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ಹಲವು ವಿಷಯಗಳ ಕುರಿತಂತೆ ಸುದೀರ್ಘವಾಗಿ ಚರ್ಚೆಯಾಯಿತು. ಈ ವಿಷಯದ ಬಗ್ಗೆ ಕಾಳಜಿ ಇರುವ ಇನ್ನಷ್ಟು ಜನರನ್ನು ಕರೆಸಬೇಕೆಂದು ತೀರ್ಮಾನಿಸಲಾಯಿತು ಎಂದು ಸಿ.ಎಸ್.ದ್ವಾರಕಾನಾಥ್‌ರವರು ತಿಳಿಸಿದ್ದಾರೆ.

ನಾನು 2002ರಿಂದ 2010ರವರೆಗೆ ದೆಹಲಿಯ ಜೆಎನ್‌ಯುನಲ್ಲಿ ಎಂ.ಎ, ಎಂ.ಫಿಲ್‌ ಮತ್ತು ಪಿಎಚ್‌ಡಿ ಮಾಡಿದ್ದೇನೆ. ಜೆಎನ್‌ಯು ಅತ್ಯುತ್ತಮ ಶಿಕ್ಷಣವನ್ನು ಅತಿ ಕಡಿಮೆ ವೆಚ್ಚದಲ್ಲಿ ನೀಡುತ್ತದೆ. ಹಾಗಾಗಿಯೇ ಭಾರತದ ಎಲ್ಲಾ ಮೂಲೆಗಳ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅಲ್ಲಿಗೆ ಬರುತ್ತಾರೆ. ನಾನು ಕೂಡ ಹಳ್ಳಿಯಿಂದ ಹೋಗಿ ಅಲ್ಲಿ ವರ್ಷಕ್ಕೆ ಕೇವಲ 300 ರೂ ಕಟ್ಟಿ ಓದಿದವನು. ಅದಿಲ್ಲದಿದ್ದರೆ ನಾನು ಇಷ್ಟು ಮುಂದೆ ಬರಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲಿ ಕಮ್ಯುನಿಷ್ಟ್‌ ಪ್ರಭಾವ ಹೆಚ್ಚಾಗಿ ಇದ್ದರೂ ಕೂಡ ಯಾರ ಮೇಲೆಯು ಅವರು ತಮ್ಮ ಸಿದ್ದಾಂತವನ್ನು ಹೇರುವುದಿಲ್ಲ. ಅಲ್ಲಿ ABVP, NSUI ಸಹ ಇದೆ. ನಾವು ಕೂಡ ಬಹುಜನ್‌ ಸ್ಟೂಟೆಂಡ್ಸ್‌ ಫ್ರಂಟ್‌ ಎಂಬ ಸಂಘಟನೆ ಶುರು ಮಾಡಿದ್ದೆವು. ಅಷ್ಟೆಲ್ಲ ಸಂಘಟನೆಗಳು ಇದ್ದರೂ ಯಾರು ಯಾರಿಗೂ ಒತ್ತಾಯ ಮಾಡುವುದಿಲ್ಲ. ಅಲ್ಲಿ ಮುಕ್ತ ವಾತಾವರಣ ಇದ್ದು ಇಡೀ ದೇಶದ ವಸ್ತುಸ್ಥಿತಿಯನ್ನು ನಮಗೆ ಅರ್ಥ ಮಾಡಿಸುತ್ತದೆ. ಅದೇ ಬಲಿಷ್ಟ ಭಾರತ ಕಟ್ಟಲು ಎಲ್ಲರಿಗೂ ಪ್ರೇರಣೆ ಕೊಡುತ್ತದೆ. ಅಲ್ಲಿಂದ ಹೊರಬಂದವರು ಅದೇ ಆಲೋಚನೆಗಳನ್ನು ಬಿತ್ತುತ್ತಾರೆ ಎಂಬುದೇ ಬಿಜೆಪಿ ಸರ್ಕಾರಕ್ಕೆ ತಲೆನೋವಾಗಿದೆ. ಅದೊಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಜೆಎನ್‌ಯು ಮುಗಿಸಲು ಹೊರಟಿದೆ. ಅದನ್ನು ಉಳಿಸಲು ನಾವು ಕರ್ನಾಟಕದಲ್ಲಿ ಒಂದೂಗೂಡುತ್ತಿದ್ದೆವೆ. – ಶ್ರೀನಿವಾಸ್‌, ಬಹುಜನ ವಿದ್ಯಾರ್ಥಿ ಸಂಘ(BVS)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Only basic education should be given free by the state . Higher education should be made available to only those who have the aptitude for it .It should not be based on any kind of reservation .

  2. ತುಂಬಾ ಒಳ್ಳೆಯ ಚರ್ಚೆ ಇದಾಗಿದ್ದು ಎಲ್ಲಾ ಮದ್ಯಮ . ಮತ್ತು ಬಡವರಿಗೂ ತುಂಬಾ ಉಪಯುಕ್ತ ಮಾಹಿತಿ ಎಲ್ಲರು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...