Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...