Homeಅಂತರಾಷ್ಟ್ರೀಯಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಹಿಂದಿರುಗುವ ಸಮಯ ಸನ್ನಿಹಿತ; ದಿನಾಂಕ, ಸ್ಥಳ ಪ್ರಕಟಿಸಿದ ನಾಸಾ

- Advertisement -
- Advertisement -

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ಐಎಸ್‌ಎಸ್‌) ಒಂಬತ್ತು ತಿಂಗಳಿಗೂ ಹೆಚ್ಚು ಸಮಯದಿಂದ ಸಿಲುಕಿಕೊಂಡಿರುವ ಅಮೆರಿಕದ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮಂಗಳವಾರ (ಮಾ.18) ಸಂಜೆ ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ತಿಳಿಸಿದೆ.

ಈ ಮೊದಲು ಮಾರ್ಚ್​ 19ಕ್ಕೆ ಸುನಿತಾ ಮತ್ತು ಬುಚ್ ಭೂಮಿಗೆ ಮರಳುತ್ತಾರೆ ಎಂದು ನಾಸಾ ಹೇಳಿತ್ತು. ಭಾನುವಾರ ಸಂಜೆ ಮತ್ತೊಂದು ಅಪ್​ಡೇಟ್ಸ್ ನೀಡಿರುವ ನಾಸಾ, ಮಾರ್ಚ್​ 18ರಂದು ಭೂಮಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿಸಿದೆ. ನಾಳೆ ಸಂಜೆ 5.57ರ ಸುಮಾರಿಗೆ ಭೂಮಿಗೆ ಅಂದರೆ, ಫ್ಲೊರಿಡಾದಲ್ಲಿ ಕಡಲಿಗೆ ಲ್ಯಾಂಡ್ (Splash Down Off) ಆಗಲಿದ್ದಾರೆ ಎಂದಿದೆ.

“ಬಾಹ್ಯಾಕಾಶದ ಪರಿಸ್ಥಿತಿಗೆ ಅನುಗುಣವಾಗಿ ಗಗನಯಾನಿಗಳ ವಾಪಾಸಾತಿ ಸಮಯ ನಿಗದಿಯಾಗುತ್ತಿದೆ. ಹವಾಮಾನ ಪರಿಸ್ಥಿತಿ ಕೂಡ ಸಹಕಾರ ನೀಡಬೇಕಿದೆ” ಎಂದು ನಾಸಾ ಹೇಳಿದೆ.

ಇಬ್ಬರು ಗಗನಯಾನಿಗಳನ್ನು ಕರೆತರಲು ನಾಸಾದ ಕ್ರ್ಯೂ–10 ಮಿಷನ್‌ ಅನ್ನು ಶುಕ್ರವಾರ(ಮಾ.14) ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ‘ಕ್ರ್ಯೂ ಡ್ರ್ಯಾಗನ್’ ಹೆಸರಿನ ಗಗನನೌಕೆಯನ್ನು ಹೊತ್ತು ಸ್ಪೇಸ್‌ಎಕ್ಸ್‌ನ ‘ಫಾಲ್ಕನ್‌ 9’ ರಾಕೆಟ್ ಪ್ಲೋರಿಡಾದ ಕೆನಡಿ ಸ್ಪೇಸ್ ಸೆಂಟರ್‌ನಿಂದ ಸ್ಥಳೀಯ ಕಾಲಮಾನ ಶುಕ್ರವಾರ ರಾತ್ರಿ 7.03ಕ್ಕೆ ನಭಕ್ಕೆ ಚಿಮ್ಮಿತ್ತು.

ಈ ಗಗನನೌಕೆಯಲ್ಲಿ ನಾಲ್ವರು ಗಗನಯಾನಿಗಳು ಐಎಸ್‌ಎಸ್‌ಗೆ ಪ್ರಯಾಣಿಸಿದ್ದಾರೆ. ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಭಾನುವಾರ (ಮಾ.16) ಐಎಸ್‌ಎಸ್‌ಗೆ ತಲುಪಿದ್ದಾರೆ.

ಗಗನನೌಕೆಯು ಮರಳುವಾಗ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್‌ ಅಲ್ಲದೆ, ಐಎಸ್‌ಎಸ್‌ನಲ್ಲಿರುವ ನಿಕ್‌ ಹೇಗ್‌ ಮತ್ತು ಅಲೆಕ್ಸಾಂಡರ್‌ ಗೊರ್ಬನೊವ್ ಅವರನ್ನೂ ಕರೆತರಲಿದೆ. ಇವರಿಬ್ಬರು ನಾಸಾದ ಕ್ರ್ಯೂ–9 ಮಿಷನ್‌ನಲ್ಲಿ ಐಎಸ್‌ಎಸ್‌ಗೆ ತೆರಳಿದ್ದರು.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಅವರು ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದಾರೆ.

ಹೌತಿ ಬಂಡುಕೋರರ ಮೇಲೆ ಭಾರೀ ದಾಳಿ ನಡೆಸಿದ ಅಮೆರಿಕ; 24 ಸಾವು-ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...