Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್...

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

- Advertisement -
- Advertisement -

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ

ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ ಮಾಡಿದ್ದು, ಅದರಲ್ಲಿ ಅವರು ಈ ವಿಷಯದ ಕುರಿತು “ಮುಂದಿನ ವಾರ (ನಿಯಮ 176 ರ ಅಡಿಯಲ್ಲಿ) ಮುಕ್ತ ಚರ್ಚೆ”ಯನ್ನು ಕೋರಿದ್ದಾರೆ. “ನಾಲ್ಕು ದಿನಗಳ ವಿರಾಮದ ನಂತರ ಸಂಸತ್ತು ಮತ್ತೆ ಸೇರುತ್ತಿದೆ. ರಚನಾತ್ಮಕ ವಿರೋಧ ಪಕ್ಷವು ಪ್ರಜಾಪ್ರಭುತ್ವದ ತಿರುಳಿನ ವಿಚಾರದ ಕುರಿತು ಚರ್ಚಿಸಲು ಬಯಸುತ್ತದೆ. ಸರ್ಕಾರ ಸಿದ್ಧವಾಗಿದೆಯೇ?” ಡೆರೆಕ್ ಅವರು ಕೇಳಿದ್ದಾರೆ.

ಸಂಸತ್ತಿನಲ್ಲಿ ಹಲವಾರು ವಿರೋಧ ಪಕ್ಷಗಳು ಒಂದೇ ರೀತಿಯ EPIC ಸಂಖ್ಯೆಯ ವಿವಾದದ ಕುರಿತು ಚರ್ಚೆಯನ್ನು ಒತ್ತಾಯಿಸುತ್ತಿವೆ. ಜೊತೆಗೆ ದಕ್ಷಿಣ ಭಾರತದ ಪಕ್ಷಗಳು ಕೂಡಾ ಡಿಲಿಮಿಟೇಶನ್ ವಿಷಯದ ಕುರಿತು ಚರ್ಚೆಯನ್ನು ಬಯಸುತ್ತಿವೆ. ಮತದಾರರ ಗುರುತಿನ ಚೀಟಿ

ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಾದ ನಿಯಮಕ್ಕೆ ಹೊಂದಿಕೊಳ್ಳುವುದಾಗಿ ಹೇಳಿದ್ದು, ಅದಾಗ್ಯೂ, ಸಂಸತ್ತು ಈ ವಿಷಯವನ್ನು ಚರ್ಚಿಸಬೇಕು ಎಂದು ಒತ್ತಿ ಹೇಳಿವೆ ಎಂದು ಮೂಲಗಳು ಉಲ್ಲೇಖಿಸಿವೆ.

ದೇಶದ ಹಲವು ರಾಜ್ಯಗಳಲ್ಲಿ ಒಂದೇ ರೀತಿಯ ಸಂಖ್ಯೆಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಫೆಬ್ರವರಿ 27 ರಂದು ಮುನ್ನಲೆಗೆ ತಂದಿದ್ದರು.

ಕಳೆದ ವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ, “ಆಧಾರ್ ಕಾರ್ಡ್‌ಗಳನ್ನು ಕ್ಲೋನ್ ಮಾಡಲಾಗುತ್ತಿದೆ ಮತ್ತು ನಕಲಿ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಈ ಕ್ಲೋನ್ ಮಾಡಿದ ಆಧಾರ್ ಕಾರ್ಡ್‌ಗಳನ್ನು ಬಳಸಲಾಗುತ್ತಿದೆ ಎಂಬ ವಿಶ್ವಾಸಾರ್ಹ ಆರೋಪಗಳಿವೆ” ಎಂದು ಟಿಎಂಸಿ ಹೇಳಿದೆ.

ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತರು ಮಾರ್ಚ್ 18 ರಂದು ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಸಭೆ ಕರೆದಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಆಯೋಗವು ಹೇಳಿಕೆ ನೀಡಿ, ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಡೇಟಾಬೇಸ್ ಅನ್ನು ERONET (ಚುನಾವಣಾ ಪಟ್ಟಿ ನಿರ್ವಹಣೆ) ವೇದಿಕೆಗೆ ವರ್ಗಾಯಿಸುವ ಮೊದಲು “ವಿಕೇಂದ್ರೀಕೃತ ಮತ್ತು ಹಸ್ತಚಾಲಿತ ಕಾರ್ಯವಿಧಾನ” ದಿಂದಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೆಲವು ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆಗಳು ಅಥವಾ ಸರಣಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಕೆಲವು ಮತದಾರರ EPIC ಸಂಖ್ಯೆಗಳು “ಒಂದೇ ಆಗಿರಬಹುದು” ಎಂದು ಆಯೋಗವು ಹೇಳಿದ್ದು, ಆದೆರೆ ಅದು ನಕಲಿ ಮತದಾರರ ಚೀಟಿ ಅಲ್ಲ ಎಂದು ಪ್ರತಿಪಾದಿಸಿದೆ. ಈ ರೀತಿಯಲ್ಲಿ ಒಂದೇ EPIC ಸಂಖ್ಯೆ ಹೊಂದಿರುವ ಮತದಾರರ ಚೀಟಿಗಳ ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ಈ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಆಯೋಗ, 2000 ಇಸವಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಚುನಾವಣಾ ನೋಂದಣಿ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಿಲ್ಲ ಎಂದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಗಳ ದೇಟಾ ಬೇಸ್‌ಗಳನ್ನು ನಿರ್ವಹಿಸುತ್ತಿರುವುದರಿಂದ ತಪ್ಪಾದ ಸರಣಿಗಳಿಂದಾಗಿ ಒಂದೇ ರೀತಿಯ ಸಂಖ್ಯೆಗಳ ಹಂಚಿಕೆಯನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...