Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್...

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

- Advertisement -
- Advertisement -

ನಾಲ್ಕು ದಿನಗಳ ವಿರಾಮದ ನಂತರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾಗುತ್ತಿದ್ದಂತೆ, ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಅವರು ನಕಲಿ ಮತದಾರರ ಗುರುತಿನ ಚೀಟಿಗಳ ವಿಷಯದ ಕುರಿತು ಪ್ರತಿಪಕ್ಷಗಳು ಚರ್ಚೆಯನ್ನು ಬಯಸುತ್ತಿದ್ದು, ಸರ್ಕಾರ ಅದಕ್ಕೆ ಸಿದ್ಧವಾಗಿದೆಯೇ ಎಂದು ಕೇಳಿದ್ದಾರೆ. ಸೋಮವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಈ ವಿಚಾರವು “ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ” ಎಂದು ಹೇಳಿದ್ದಾರೆ. ಮತದಾರರ ಗುರುತಿನ ಚೀಟಿ

ಡೆರೆಕ್ ಅವರು ಮಾರ್ಚ್ 12 ರ ಪೋಸ್ಟ್ ಅನ್ನು ಸಹ ಟ್ಯಾಗ್ ಮಾಡಿದ್ದು, ಅದರಲ್ಲಿ ಅವರು ಈ ವಿಷಯದ ಕುರಿತು “ಮುಂದಿನ ವಾರ (ನಿಯಮ 176 ರ ಅಡಿಯಲ್ಲಿ) ಮುಕ್ತ ಚರ್ಚೆ”ಯನ್ನು ಕೋರಿದ್ದಾರೆ. “ನಾಲ್ಕು ದಿನಗಳ ವಿರಾಮದ ನಂತರ ಸಂಸತ್ತು ಮತ್ತೆ ಸೇರುತ್ತಿದೆ. ರಚನಾತ್ಮಕ ವಿರೋಧ ಪಕ್ಷವು ಪ್ರಜಾಪ್ರಭುತ್ವದ ತಿರುಳಿನ ವಿಚಾರದ ಕುರಿತು ಚರ್ಚಿಸಲು ಬಯಸುತ್ತದೆ. ಸರ್ಕಾರ ಸಿದ್ಧವಾಗಿದೆಯೇ?” ಡೆರೆಕ್ ಅವರು ಕೇಳಿದ್ದಾರೆ.

ಸಂಸತ್ತಿನಲ್ಲಿ ಹಲವಾರು ವಿರೋಧ ಪಕ್ಷಗಳು ಒಂದೇ ರೀತಿಯ EPIC ಸಂಖ್ಯೆಯ ವಿವಾದದ ಕುರಿತು ಚರ್ಚೆಯನ್ನು ಒತ್ತಾಯಿಸುತ್ತಿವೆ. ಜೊತೆಗೆ ದಕ್ಷಿಣ ಭಾರತದ ಪಕ್ಷಗಳು ಕೂಡಾ ಡಿಲಿಮಿಟೇಶನ್ ವಿಷಯದ ಕುರಿತು ಚರ್ಚೆಯನ್ನು ಬಯಸುತ್ತಿವೆ. ಮತದಾರರ ಗುರುತಿನ ಚೀಟಿ

ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಾದ ನಿಯಮಕ್ಕೆ ಹೊಂದಿಕೊಳ್ಳುವುದಾಗಿ ಹೇಳಿದ್ದು, ಅದಾಗ್ಯೂ, ಸಂಸತ್ತು ಈ ವಿಷಯವನ್ನು ಚರ್ಚಿಸಬೇಕು ಎಂದು ಒತ್ತಿ ಹೇಳಿವೆ ಎಂದು ಮೂಲಗಳು ಉಲ್ಲೇಖಿಸಿವೆ.

ದೇಶದ ಹಲವು ರಾಜ್ಯಗಳಲ್ಲಿ ಒಂದೇ ರೀತಿಯ ಸಂಖ್ಯೆಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ವಿಷಯವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಫೆಬ್ರವರಿ 27 ರಂದು ಮುನ್ನಲೆಗೆ ತಂದಿದ್ದರು.

ಕಳೆದ ವಾರ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ, “ಆಧಾರ್ ಕಾರ್ಡ್‌ಗಳನ್ನು ಕ್ಲೋನ್ ಮಾಡಲಾಗುತ್ತಿದೆ ಮತ್ತು ನಕಲಿ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಈ ಕ್ಲೋನ್ ಮಾಡಿದ ಆಧಾರ್ ಕಾರ್ಡ್‌ಗಳನ್ನು ಬಳಸಲಾಗುತ್ತಿದೆ ಎಂಬ ವಿಶ್ವಾಸಾರ್ಹ ಆರೋಪಗಳಿವೆ” ಎಂದು ಟಿಎಂಸಿ ಹೇಳಿದೆ.

ಮತದಾರರ ಗುರುತಿನ ಚೀಟಿಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯದ ಕುರಿತು ಚರ್ಚಿಸಲು ಮುಖ್ಯ ಚುನಾವಣಾ ಆಯುಕ್ತರು ಮಾರ್ಚ್ 18 ರಂದು ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಕಾರ್ಯದರ್ಶಿ ಮತ್ತು ಯುಐಡಿಎಐ ಸಿಇಒ ಅವರೊಂದಿಗೆ ಸಭೆ ಕರೆದಿದ್ದಾರೆ.

ಮಾರ್ಚ್ 2 ರಂದು ಚುನಾವಣಾ ಆಯೋಗವು ಹೇಳಿಕೆ ನೀಡಿ, ಎಲ್ಲಾ ರಾಜ್ಯಗಳ ಮತದಾರರ ಪಟ್ಟಿಯ ಡೇಟಾಬೇಸ್ ಅನ್ನು ERONET (ಚುನಾವಣಾ ಪಟ್ಟಿ ನಿರ್ವಹಣೆ) ವೇದಿಕೆಗೆ ವರ್ಗಾಯಿಸುವ ಮೊದಲು “ವಿಕೇಂದ್ರೀಕೃತ ಮತ್ತು ಹಸ್ತಚಾಲಿತ ಕಾರ್ಯವಿಧಾನ” ದಿಂದಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೆಲವು ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆಗಳು ಅಥವಾ ಸರಣಿಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಕೆಲವು ಮತದಾರರ EPIC ಸಂಖ್ಯೆಗಳು “ಒಂದೇ ಆಗಿರಬಹುದು” ಎಂದು ಆಯೋಗವು ಹೇಳಿದ್ದು, ಆದೆರೆ ಅದು ನಕಲಿ ಮತದಾರರ ಚೀಟಿ ಅಲ್ಲ ಎಂದು ಪ್ರತಿಪಾದಿಸಿದೆ. ಈ ರೀತಿಯಲ್ಲಿ ಒಂದೇ EPIC ಸಂಖ್ಯೆ ಹೊಂದಿರುವ ಮತದಾರರ ಚೀಟಿಗಳ ಜನಸಂಖ್ಯಾ ವಿವರಗಳು, ವಿಧಾನಸಭಾ ಕ್ಷೇತ್ರ ಮತ್ತು ಮತಗಟ್ಟೆ ಸೇರಿದಂತೆ ಇತರ ವಿವರಗಳು ವಿಭಿನ್ನವಾಗಿವೆ ಎಂದು ಅದು ಹೇಳಿದೆ.

ಈ ಬಗ್ಗೆ ಮತ್ತೊಂದು ಹೇಳಿಕೆ ನೀಡಿರುವ ಆಯೋಗ, 2000 ಇಸವಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ EPIC ಸರಣಿಯನ್ನು ಹಂಚಿಕೆ ಮಾಡಿದಾಗಿನಿಂದ, ಕೆಲವು ಚುನಾವಣಾ ನೋಂದಣಿ ಅಧಿಕಾರಿಗಳು ಸರಿಯಾದ ಸರಣಿಯನ್ನು ಬಳಸಿಲ್ಲ ಎಂದು ಹೇಳಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ವತಂತ್ರವಾಗಿ ಮತದಾರರ ಪಟ್ಟಿಗಳ ದೇಟಾ ಬೇಸ್‌ಗಳನ್ನು ನಿರ್ವಹಿಸುತ್ತಿರುವುದರಿಂದ ತಪ್ಪಾದ ಸರಣಿಗಳಿಂದಾಗಿ ಒಂದೇ ರೀತಿಯ ಸಂಖ್ಯೆಗಳ ಹಂಚಿಕೆಯನ್ನು ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...