Homeಮುಖಪುಟಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ನಡೆದ ಹಿಂದೂಗಳ ಹೋಳಿ ಹಬ್ಬದ ಸಂದರ್ಭದಲ್ಲಿ ತನ್ನ ಮೇಲೆ ಬಣ್ಣ ಬಳಿಯುವುದನ್ನು ವಿರೋಧಿಸಿದ್ದಕ್ಕಾಗಿ 55 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಜೀವವನ್ನೇ ತೆತ್ತಿದ್ದಾನೆ.

ಶೀತ್ಲಾ ಮಾತಾ ಮಂದಿರ ಬಳಿಯ ಕೊಟ್ವಾಲಿ ಸದರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ 55 ವರ್ಷದ ಮೊಹಮ್ಮದ್ ಷರೀಫ್ ಅವರನ್ನು ಹೋಳಿ ಹಬ್ಬದ ಸಂಭ್ರಮಾಚರಣೆ ಮಾಡುವವರ ಗುಂಪೊಂದು ತಡೆದು ಅವರ ಮೇಲೆ ಬಣ್ಣ ಬಳಿಯಲು ಎಳೆದೊಯ್ದಾಗ ಈ ಘಟನೆ ಸಂಭವಿಸಿದೆ.

ಬಲಿಪಶುವಿನ ಮೇಲೆ ಬಣ್ಣ ಬಳಿಯುವ ಈ ಗುಂಪಿನ ಪ್ರಯತ್ನಗಳನ್ನು ಬಲಿಪಶು ವಿರೋಧಿಸಿದನು ಮತ್ತು ಇದು ತೀವ್ರ ವಾಗ್ವಾದಗಳಿಗೆ ಕಾರಣವಾಯಿತು. ತಕ್ಷಣವೇ ಸಂಭ್ರಮಾಚರಣೆ ಮಾಡುವವರು ಕ್ರೋಧಗೊಂಡರು ಮತ್ತು ಅವರಿಂದ ತಪ್ಪಿಸಿಕೊಳ್ಳಲು ಮತ್ತು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ ವೃದ್ಧನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದರು.

ಬಲಿಪಶು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಷರೀಫ್ ಅವರ ಪುತ್ರಿ ಬುಶ್ರಾ ಹೇಳುವಂತೆ, ಸಂಭ್ರಮಿಸುವವರು ತಮ್ಮ ತಂದೆಯನ್ನು ಆಟೋರಿಕ್ಷಾದಿಂದ ಹೊರಗೆಳೆದು ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಕೈಚೀಲದಿಂದ 5,000 ರೂ. ಮೌಲ್ಯದ ಹಣವನ್ನು ದೋಚಿದ್ದಾರೆ ಎಂದು ಆರೋಪಿಸಿದ್ದಾರೆ.

“ಕೆಲವರು ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅವರ ಮೇಲೆ ಬಣ್ಣ ಎರಚಿದರು. ನಮ್ಮ ತಂದೆ ಅವರನ್ನು ತಡೆದಾಗ, ಅವರು ನಮ್ಮ ತಂದೆಯನ್ನು ತಳ್ಳಿ ಹೊಡೆದರು. ಅವರು ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರ ಕೈಚೀಲವನ್ನು ಕಸಿದುಕೊಳ್ಳಲಾಯಿತು ಮತ್ತು ಅದರ ಒಳಗಡೆ ಇದ್ದ ಹಣವನ್ನು ದೋಚಲಾಯಿತು” ಎಂದು ಸಂತ್ರಸ್ತನ ಪುತ್ರಿಯು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಷರೀಫ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಉನ್ನಾವೊಗೆ ಹಿಂತಿರುಗಿದ್ದರು.

ಷರೀಫ್ ಅವರ ಸೋದರಳಿಯ ಮೊಹಮ್ಮದ್ ಶಮೀಮ್, ತಮ್ಮ ಮಾವನನ್ನು ಮಧ್ಯಾಹ್ನದ ಸುಮಾರಿಗೆ ಡೈರಿಗೆ ಹೋಗುತ್ತಿದ್ದಾಗ ಅವರ ಆಟೋರಿಕ್ಷಾವನ್ನು ಸಂಭ್ರಮಿಸುವವರು ತಡೆದು ಈ ಕೃತ್ಯ ಎಸಗಿದರು ಎಂದು ಆರೋಪಿಸಿದ್ದಾನೆ.

“ಅವರಿಗೆ ಕಿರುಕುಳ ಕೊಡಲಾಯಿತು ಮತ್ತು ಸಂಭ್ರಮಿಸುವವರು ನನ್ನ ಮಾವನಿಗೆ ಬಣ್ಣ ಬಳಿಯಲು ನಿರ್ಧರಿಸಿದ್ದರು. ನಾನು ಸ್ಥಳಕ್ಕೆ ತಲುಪಿದಾಗ ನನ್ನ ಮಾವ ಹಾಗೆ ಮಾಡದಂತೆ ವಿನಂತಿಸುತ್ತಿದ್ದರು. ಆಗ ಸಮಸ್ಯೆ ಇತ್ಯರ್ಥವಾಯಿತು. ಆದರೆ ನಂತರ ಅವರಲ್ಲಿ ಕೆಲವರು ಅವರನ್ನು ಮತ್ತೆ ಹಿಡಿದುಕೊಂಡರು. ಅವರು ಕುಸಿದು ಬೀಳುವ ಮೊದಲು ಅವರನ್ನು ಪದೇ ಪದೇ ಕಪಾಳಮೋಕ್ಷ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ನನಗೆ ಹೇಳಿದ್ದಾರೆ” ಎಂದು ಶಮೀಮ್ ತಿಳಿಸಿದ್ದಾರೆ.

ಷರೀಫ್ ಅವರ ಸಾವು ಅವರ ಹುಟ್ಟೂರು ಖಾಸಿಮ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಅಪರಾಧಿಗಳನ್ನು ಬಂಧಿಸುವವರೆಗೆ ಶವಪರೀಕ್ಷೆಗೆ ಅವಕಾಶ ನೀಡಲು ಷರೀಫ್ ಅವರ ಕುಟುಂಬ ನಿರಾಕರಿಸಿತು.

ಕಾನ್ಪುರ-ಲಕ್ನೋ ಮುಖ್ಯರಸ್ತೆ ಐಬಿಪಿ ಕ್ರಾಸಿಂಗ್‌ನಲ್ಲಿ ಷರೀಫ್ ಅವರ ಮೃತದೇಹವನ್ನು ಇರಿಸುವ ಮೂಲಕ ಶೋಕತಪ್ತರು ರಸ್ತೆ ತಡೆ ನಡೆಸಿದರು. ಆಡಳಿತ ಅಧಿಕಾರಿಗಳು ಷರೀಫ್ ಅವರ ಕುಟುಂಬವನ್ನು ವಿಳಂಬವಿಲ್ಲದೆ ಅವರ ಅಂತ್ಯಕ್ರಿಯೆಯನ್ನು ನಡೆಸುವಂತೆ ಮನವೊಲಿಸಿದರು, ಆದರೆ ಕುಟುಂಬವು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.

ಉನ್ನಾವ್ ಉತ್ತರದ ಹೆಚ್ಚುವರಿ ಎಸ್‌ಪಿ ಅಖಿಲೇಶ್ ಸಿಂಗ್, “ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಇಲ್ಲ. ದೂರು ದಾಖಲಾದ ನಂತರ ನಾವು ಎಫ್‌ಐಆರ್ ದಾಖಲಿಸುತ್ತೇವೆ” ಎಂದು ಹೇಳಿದ್ದಾರೆ.

ಉನ್ನಾವ್ ಕೊಟ್ವಾಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನ್ಪುರದಿಂದ ಉನ್ನಾವ್‌ಗೆ ಪ್ರಯಾಣ ಬೆಳೆಸಿದ ಶಹರ್ ಖಾಜಿ ಸಾಕಿಬ್ ಅದೀಬ್ ಮಿಸ್ಬಾಹಿ ​​ಅಧಿಕಾರಿಗಳನ್ನು ಭೇಟಿಯಾಗಿ ಉದ್ರಿಕ್ತ ಜನಸಮೂಹವನ್ನು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

“ಉನ್ನಾವ್‌ದ ಇತಿಹಾಸದಲ್ಲಿ ಇಂತಹ ಘಟನೆ ಹಿಂದೆಂದೂ ಸಂಭವಿಸಿರಲಿಲ್ಲ. ಇಲ್ಲಿ ಹೋಳಿಯನ್ನು ಯಾವಾಗಲೂ ಶಾಂತಿಯುತವಾಗಿ ಆಚರಿಸಲಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆಡಳಿತವು ಭರವಸೆ ನೀಡಿದೆ ಮತ್ತು ಅವರು ಅದನ್ನು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...