Homeಮುಖಪುಟಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

ಉನ್ನಾವೊ: ಹೋಳಿಯ ಬಣ್ಣ ಬಳಿಯುವುದನ್ನು ವಿರೋಧಿಸಿದಕ್ಕಾಗಿ ಮುಸ್ಲಿಂ ವ್ಯಕ್ತಿಯ ಹತ್ಯೆ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಶನಿವಾರ ನಡೆದ ಹಿಂದೂಗಳ ಹೋಳಿ ಹಬ್ಬದ ಸಂದರ್ಭದಲ್ಲಿ ತನ್ನ ಮೇಲೆ ಬಣ್ಣ ಬಳಿಯುವುದನ್ನು ವಿರೋಧಿಸಿದ್ದಕ್ಕಾಗಿ 55 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಜೀವವನ್ನೇ ತೆತ್ತಿದ್ದಾನೆ.

ಶೀತ್ಲಾ ಮಾತಾ ಮಂದಿರ ಬಳಿಯ ಕೊಟ್ವಾಲಿ ಸದರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಹೋಳಿ ಹಬ್ಬದ ಸಂಭ್ರಮಾಚರಣೆ ಸಂದರ್ಭದಲ್ಲಿ 55 ವರ್ಷದ ಮೊಹಮ್ಮದ್ ಷರೀಫ್ ಅವರನ್ನು ಹೋಳಿ ಹಬ್ಬದ ಸಂಭ್ರಮಾಚರಣೆ ಮಾಡುವವರ ಗುಂಪೊಂದು ತಡೆದು ಅವರ ಮೇಲೆ ಬಣ್ಣ ಬಳಿಯಲು ಎಳೆದೊಯ್ದಾಗ ಈ ಘಟನೆ ಸಂಭವಿಸಿದೆ.

ಬಲಿಪಶುವಿನ ಮೇಲೆ ಬಣ್ಣ ಬಳಿಯುವ ಈ ಗುಂಪಿನ ಪ್ರಯತ್ನಗಳನ್ನು ಬಲಿಪಶು ವಿರೋಧಿಸಿದನು ಮತ್ತು ಇದು ತೀವ್ರ ವಾಗ್ವಾದಗಳಿಗೆ ಕಾರಣವಾಯಿತು. ತಕ್ಷಣವೇ ಸಂಭ್ರಮಾಚರಣೆ ಮಾಡುವವರು ಕ್ರೋಧಗೊಂಡರು ಮತ್ತು ಅವರಿಂದ ತಪ್ಪಿಸಿಕೊಳ್ಳಲು ಮತ್ತು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ ವೃದ್ಧನ ಮೇಲೆ ಹಲ್ಲೆ ನಡೆಸಲು ಪ್ರಾರಂಭಿಸಿದರು.

ಬಲಿಪಶು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಷರೀಫ್ ಅವರ ಪುತ್ರಿ ಬುಶ್ರಾ ಹೇಳುವಂತೆ, ಸಂಭ್ರಮಿಸುವವರು ತಮ್ಮ ತಂದೆಯನ್ನು ಆಟೋರಿಕ್ಷಾದಿಂದ ಹೊರಗೆಳೆದು ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಅವರ ಕೈಚೀಲದಿಂದ 5,000 ರೂ. ಮೌಲ್ಯದ ಹಣವನ್ನು ದೋಚಿದ್ದಾರೆ ಎಂದು ಆರೋಪಿಸಿದ್ದಾರೆ.

“ಕೆಲವರು ಅವರೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ಅವರ ಮೇಲೆ ಬಣ್ಣ ಎರಚಿದರು. ನಮ್ಮ ತಂದೆ ಅವರನ್ನು ತಡೆದಾಗ, ಅವರು ನಮ್ಮ ತಂದೆಯನ್ನು ತಳ್ಳಿ ಹೊಡೆದರು. ಅವರು ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದರು. ಅವರ ಕೈಚೀಲವನ್ನು ಕಸಿದುಕೊಳ್ಳಲಾಯಿತು ಮತ್ತು ಅದರ ಒಳಗಡೆ ಇದ್ದ ಹಣವನ್ನು ದೋಚಲಾಯಿತು” ಎಂದು ಸಂತ್ರಸ್ತನ ಪುತ್ರಿಯು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಷರೀಫ್ ಅವರು ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಉನ್ನಾವೊಗೆ ಹಿಂತಿರುಗಿದ್ದರು.

ಷರೀಫ್ ಅವರ ಸೋದರಳಿಯ ಮೊಹಮ್ಮದ್ ಶಮೀಮ್, ತಮ್ಮ ಮಾವನನ್ನು ಮಧ್ಯಾಹ್ನದ ಸುಮಾರಿಗೆ ಡೈರಿಗೆ ಹೋಗುತ್ತಿದ್ದಾಗ ಅವರ ಆಟೋರಿಕ್ಷಾವನ್ನು ಸಂಭ್ರಮಿಸುವವರು ತಡೆದು ಈ ಕೃತ್ಯ ಎಸಗಿದರು ಎಂದು ಆರೋಪಿಸಿದ್ದಾನೆ.

“ಅವರಿಗೆ ಕಿರುಕುಳ ಕೊಡಲಾಯಿತು ಮತ್ತು ಸಂಭ್ರಮಿಸುವವರು ನನ್ನ ಮಾವನಿಗೆ ಬಣ್ಣ ಬಳಿಯಲು ನಿರ್ಧರಿಸಿದ್ದರು. ನಾನು ಸ್ಥಳಕ್ಕೆ ತಲುಪಿದಾಗ ನನ್ನ ಮಾವ ಹಾಗೆ ಮಾಡದಂತೆ ವಿನಂತಿಸುತ್ತಿದ್ದರು. ಆಗ ಸಮಸ್ಯೆ ಇತ್ಯರ್ಥವಾಯಿತು. ಆದರೆ ನಂತರ ಅವರಲ್ಲಿ ಕೆಲವರು ಅವರನ್ನು ಮತ್ತೆ ಹಿಡಿದುಕೊಂಡರು. ಅವರು ಕುಸಿದು ಬೀಳುವ ಮೊದಲು ಅವರನ್ನು ಪದೇ ಪದೇ ಕಪಾಳಮೋಕ್ಷ ಮಾಡಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ನನಗೆ ಹೇಳಿದ್ದಾರೆ” ಎಂದು ಶಮೀಮ್ ತಿಳಿಸಿದ್ದಾರೆ.

ಷರೀಫ್ ಅವರ ಸಾವು ಅವರ ಹುಟ್ಟೂರು ಖಾಸಿಮ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಅಪರಾಧಿಗಳನ್ನು ಬಂಧಿಸುವವರೆಗೆ ಶವಪರೀಕ್ಷೆಗೆ ಅವಕಾಶ ನೀಡಲು ಷರೀಫ್ ಅವರ ಕುಟುಂಬ ನಿರಾಕರಿಸಿತು.

ಕಾನ್ಪುರ-ಲಕ್ನೋ ಮುಖ್ಯರಸ್ತೆ ಐಬಿಪಿ ಕ್ರಾಸಿಂಗ್‌ನಲ್ಲಿ ಷರೀಫ್ ಅವರ ಮೃತದೇಹವನ್ನು ಇರಿಸುವ ಮೂಲಕ ಶೋಕತಪ್ತರು ರಸ್ತೆ ತಡೆ ನಡೆಸಿದರು. ಆಡಳಿತ ಅಧಿಕಾರಿಗಳು ಷರೀಫ್ ಅವರ ಕುಟುಂಬವನ್ನು ವಿಳಂಬವಿಲ್ಲದೆ ಅವರ ಅಂತ್ಯಕ್ರಿಯೆಯನ್ನು ನಡೆಸುವಂತೆ ಮನವೊಲಿಸಿದರು, ಆದರೆ ಕುಟುಂಬವು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿತು.

ಉನ್ನಾವ್ ಉತ್ತರದ ಹೆಚ್ಚುವರಿ ಎಸ್‌ಪಿ ಅಖಿಲೇಶ್ ಸಿಂಗ್, “ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಇಲ್ಲ. ದೂರು ದಾಖಲಾದ ನಂತರ ನಾವು ಎಫ್‌ಐಆರ್ ದಾಖಲಿಸುತ್ತೇವೆ” ಎಂದು ಹೇಳಿದ್ದಾರೆ.

ಉನ್ನಾವ್ ಕೊಟ್ವಾಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನ್ಪುರದಿಂದ ಉನ್ನಾವ್‌ಗೆ ಪ್ರಯಾಣ ಬೆಳೆಸಿದ ಶಹರ್ ಖಾಜಿ ಸಾಕಿಬ್ ಅದೀಬ್ ಮಿಸ್ಬಾಹಿ ​​ಅಧಿಕಾರಿಗಳನ್ನು ಭೇಟಿಯಾಗಿ ಉದ್ರಿಕ್ತ ಜನಸಮೂಹವನ್ನು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

“ಉನ್ನಾವ್‌ದ ಇತಿಹಾಸದಲ್ಲಿ ಇಂತಹ ಘಟನೆ ಹಿಂದೆಂದೂ ಸಂಭವಿಸಿರಲಿಲ್ಲ. ಇಲ್ಲಿ ಹೋಳಿಯನ್ನು ಯಾವಾಗಲೂ ಶಾಂತಿಯುತವಾಗಿ ಆಚರಿಸಲಾಗುತ್ತಿತ್ತು” ಎಂದು ಅವರು ಹೇಳಿದ್ದಾರೆ.

“ಈ ಪ್ರಕರಣದಲ್ಲಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆಡಳಿತವು ಭರವಸೆ ನೀಡಿದೆ ಮತ್ತು ಅವರು ಅದನ್ನು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...