Homeಮುಖಪುಟಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

ಸಚಿವ ರಾಜೀನಾಮೆ | ಇಕ್ಕಟ್ಟಿನಲ್ಲಿ ಉತ್ತರಾಖಂಡ ಸಿಎಂ ಧಾಮಿ!

- Advertisement -
- Advertisement -

ಉತ್ತರಾಖಂಡ ವಿಧಾನಸಭೆಯಲ್ಲಿ ಫೆಬ್ರವರಿ ವೇಳೆ ನಡೆದ ಬಜೆಟ್ ಅಧಿವೇಶನದಲ್ಲಿ “ಸಾಲಾ ಪಹಾಡಿ” ಎಂಬ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ಬಂದ ನಂತರ ಉತ್ತರಾಖಂಡದ ಹಣಕಾಸು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರೇಮ್‌ಚಂದ್ ಅಗರ್ವಾಲ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಸವಾಲಾಗಿ ಪರಿಣಮಿಸಿದ್ದು, 2022 ರ ವಿಧಾನಸಭಾ ಚುನಾವಣೆಯ ನಂತರ ಭರ್ತಿಯಾಗದೆ ಉಳಿದಿರುವ ನಾಲ್ಕು ಸ್ಥಾನಗಳು ಸೇರಿದಂತೆ ಸಂಪುಟದಲ್ಲಿ ಐದು ಸ್ಥಾನಗಳು ಖಾಲಿಯಾಗಿವೆ. ಸಚಿವ ರಾಜೀನಾಮೆ

ಅಗರ್ವಾಲ್ ಅವರ ಹೇಳಿಕೆಯು ರಾಜ್ಯಾದ್ಯಂತ ಆಕ್ರೋಶವನ್ನು ಹುಟ್ಟುಹಾಕಿದ್ದು, ವ್ಯಾಪಕ ಪ್ರತಿಭಟನೆಗಳಿಗೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಯಿತು. ವಿಧಾನಸಭಾ ಅಧಿವೇಶನದಲ್ಲಿ ಕೇಳಿದ್ದ ಕ್ಷಮೆಯಾಚನೆ ಸೇರಿದಂತೆ ಹಲವಾರು ಕ್ಷಮೆಯಾಚನೆಗಳನ್ನು ನೀಡಿದ್ದರೂ, ಸಾರ್ವಜನಿಕರ ಆಕ್ರೋಶ ಕಡಿಮೆಯಾಗಿಲ್ಲ. ಸಚಿವ ರಾಜೀನಾಮೆ

“ನನ್ನ ಹೇಳಿಕೆಗೆ ನಾನು ತೀವ್ರವಾಗಿ ವಿಷಾದಿಸುತ್ತೇನೆ” ಎಂದು ಅಗರ್ವಾಲ್ ಹೇಳಿದ್ದಾರೆ. ಉತ್ತರಾಖಂಡದ ಚಳವಳಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಒತ್ತಿ ಹೇಳಿದ ಅವರು, ತಾನು ಎಂದಿಗೂ ಯಾರನ್ನೂ ನಿಂದಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ, ವಿಧಾನಸಭೆ ಅಧಿವೇಶನ ಮುಗಿದ ನಂತರವೂ ಪ್ರತಿಭಟನೆಗಳು ಮುಂದುವರೆದಿದ್ದು, ಅಂತಿಮವಾಗಿ ಅವರ ಸ್ಥಾನದಿಂದ ಕೆಳಗಿಳಿಯುವಂತೆ ಒತ್ತಡ ಹೇರಲಾಗಿದೆ.

ಅಗರ್ವಾಲ್ ಅವರ ರಾಜೀನಾಮೆಯೊಂದಿಗೆ, ಧಾಮಿ ಸಚಿವ ಸಂಪುಟದಲ್ಲಿ ಈಗ ಕೇವಲ ಆರು ಸಚಿವರು ಉಳಿಸಿದ್ದಾರೆ. ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್, ಕೃಷಿ ಸಚಿವ ಗಣೇಶ್ ಜೋಶಿ, ಶಿಕ್ಷಣ ಸಚಿವ ಧನ್ ಸಿಂಗ್ ರಾವತ್, ಅರಣ್ಯ ಸಚಿವ ಸುಬೋಧ್ ಉನಿಯಲ್, ಕ್ರೀಡಾ ಸಚಿವೆ ರೇಖಾ ಆರ್ಯ ಮತ್ತು ಪಶುಸಂಗೋಪನಾ ಸಚಿವೆ ಸೌರಭ್ ಬಹುಗುಣ.

ಕಳೆದ ವರ್ಷ ಮಾಜಿ ಕ್ಯಾಬಿನೆಟ್ ಸಚಿವ ಚಂದನ್ ರಾಮದಾಸ್ ಅವರ ನಿಧನದ ನಂತರ ಸಂಪುಟದಲ್ಲಿ ಸದಸ್ಯರ ಕೊರತೆಯಾಗಿತ್ತು. ಅವರ ಸ್ಥಾನ ಸೇರಿದಂತೆ ಪ್ರಸ್ತುತ ಭರ್ತಿಯಾಗದ ಸಚಿವ ಸ್ಥಾನಗಳ ಒಟ್ಟು ಸಂಖ್ಯೆ ಐದಕ್ಕೆ ಏರಿದೆ.

ಭಾರತದ ಸಂವಿಧಾನದ 164(1A) ನೇ ವಿಧಿಯ ಪ್ರಕಾರ, ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಮಂತ್ರಿಮಂಡಲವು 70 ಸದಸ್ಯರ ಉತ್ತರಾಖಂಡ ವಿಧಾನಸಭೆಯಲ್ಲಿ ಒಟ್ಟು ಸದಸ್ಯರಲ್ಲಿ 15 ಪ್ರತಿಶತವನ್ನು ಮೀರಬಾರದು. ಹೆಚ್ಚುವರಿಯಾಗಿ, ಮುಖ್ಯಮಂತ್ರಿ ಸೇರಿದಂತೆ ಕನಿಷ್ಠ ಸಚಿವರ ಸಂಖ್ಯೆ 12 ಆಗಿರಬೇಕು. ಪ್ರಸ್ತುತ, ಧಾಮಿ ಸಚಿವ ಸಂಪುಟವು ಖಾಲಿ ಹುದ್ದೆಗಳ ಕಾರಣದಿಂದಾಗಿ ಈ ಅವಶ್ಯಕತೆಯನ್ನು ಪೂರೈಸುತ್ತಿಲ್ಲ.

ಬಿಜೆಪಿ ಹೈಕಮಾಂಡ್ ಈಗ ಸಂಪುಟಕ್ಕೆ ಹೊಸ ಮುಖಗಳ ಹುಡುಕಾಟದಲ್ಲಿದ್ದು, ಪಕ್ಷದ ನಾಯಕರಲ್ಲಿ ತೀವ್ರ ಲಾಬಿ ನಡೆಯುತ್ತಿದೆ. ಪ್ರಸ್ತುತ ಸಚಿವರ ಕಾರ್ಯಕ್ಷಮತೆಯ ವಿಮರ್ಶೆಗಳು ಸಹ ನಡೆಯುತ್ತಿವೆ ಮತ್ತು ಕೆಲವು ಸಚಿವರು ನಿರೀಕ್ಷೆಗಳನ್ನು ಪೂರೈಸಲು ವಿಫಲವಾದರೆ, ಅವರನ್ನು ಪಕ್ಷವು ತೆಗೆದುಹಾಕಲಿದೆ ಎಂದು ಮೂಲಗಳು ಸೂಚಿಸಿವೆ.

“ರಿಪೋರ್ಟ್ ಕಾರ್ಡ್‌ಗಳು ನಿರೀಕ್ಷೆಗಳನ್ನು ಪೂರೈಸದಿದ್ದರೆ, ಕನಿಷ್ಠ ಒಬ್ಬರು ಮತ್ತು ಬಹುಶಃ ಇಬ್ಬರು, ಅಸ್ತಿತ್ವದಲ್ಲಿರುವ ಸಚಿವರ ತಲೆದಂಡವಾಗಲಿದೆ” ಎಂದು ಬಿಜೆಪಿ ಮೂಲಗಳು ಹೇಳಿವೆ.

2027 ರ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು, ಮುಂಬರುವ ಸಚಿವ ಸಂಪುಟ ಪುನರ್ರಚನೆಯಲ್ಲಿ ಪಕ್ಷವು ಪ್ರಾದೇಶಿಕ ಮತ್ತು ರಾಜಕೀಯ ಸಮತೋಲನವನ್ನು ಕಾಯ್ದುಕೊಳ್ಳುವತ್ತ ಗಮನಹರಿಸುತ್ತಿದೆ. ಸತ್ಪಾಲ್ ಮಹಾರಾಜ್, ಧನ್ ಸಿಂಗ್ ರಾವತ್ ಮತ್ತು ಸುಬೋಧ್ ಉನಿಯಾಲ್ ಅವರಂತಹ ಸಚಿವರು ಪೌರಿ ಲೋಕಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದರೂ, ಹರಿದ್ವಾರ, ಉತ್ತರಕಾಶಿ, ಪಿಥೋರಗಢ ಮತ್ತು ಚಮೋಲಿಯಂತಹ ಗಮನಾರ್ಹ ಪ್ರದೇಶಗಳು ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವಿಲ್ಲದೆ ಉಳಿದಿವೆ ಎಂದು ಚರ್ಚೆಗಳು ನಡೆಯುತ್ತಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ಮತದಾರರ ಗುರುತಿನ ಚೀಟಿ ವಿಚಾರದ ಬಗ್ಗೆ ಚರ್ಚೆಗೆ ಮೋದಿ ಸರ್ಕಾರ ಸಿದ್ದವೆ?: ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...