Homeಮುಖಪುಟವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ವಿಕಿಪೀಡಿಯಾ vs ಎಎನ್‌ಐ ಪ್ರಕರಣ | ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಏಷ್ಯನ್ ನ್ಯೂಸ್ ಏಜೆನ್ಸಿ (ANI) ಸಂಸ್ಥೆಯ ವಿರುದ್ಧ ಸಲ್ಲಿಸಿದ ಮಾನನಷ್ಟ ಮೊಕದ್ದಮೆಯ ಕುರಿತು ವಿಕಿಪೀಡಿಯಾ ಪುಟ ಮತ್ತು ಇತರ ಚರ್ಚೆಗಳನ್ನು ತೆಗೆದುಹಾಕುವಂತೆ ನಿರ್ದೇಶಿಸುವ ದೆಹಲಿ ಹೈಕೋರ್ಟ್ ಆದೇಶದ ಕಾನೂನುಬದ್ಧತೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ. “ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳ ಕಾನೂನುಬದ್ಧತೆ ಮತ್ತು ಸಿಂಧುತ್ವದ ಬಗ್ಗೆ ನಮಗೆ ಕಳವಳ ಇದೆ” ಎಂದು ಪೀಠವು ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ವಿಕಿಮೀಡಿಯಾ ಫೌಂಡೇಶನ್ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ವಿಕಿಪೀಡಿಯಾ ಪುಟದಲ್ಲಿನ ವಿಷಯವು ನಡೆಯುತ್ತಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂಬ ದೆಹಲಿ ಹೈಕೋರ್ಟ್‌ನ ಅಭಿಪ್ರಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇದೇ ವೇಳೆ ನ್ಯಾಯಾಲಯವು ANI ಗೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 4 ರಂದು ಉತ್ತರಿಸಲು ಹೇಳಿದೆ.

ANI ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ವಿಚಾರಣೆ ನಡೆಸುವಾಗ, ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರನ್ನೊಳಗೊಂಡ ದೆಹಲಿ ಹೈಕೋರ್ಟ್ ವಿಭಾಗೀಯ ಪೀಠವು “ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ vs. ವಿಕಿಮೀಡಿಯ ಫೌಂಡೇಶನ್” ಎಂಬ ಶೀರ್ಷಿಕೆಯ ವಿಕಿಪೀಡಿಯಾ ಪುಟವನ್ನು ತೆಗೆದುಹಾಕುವಂತೆ ನಿರ್ದೇಶಿಸಿತ್ತು. ವಿಕಿಪೀಡಿಯಾ vs ಎಎನ್‌ಐ ಪ್ರಕರಣ

ಪುಟದಲ್ಲಿನ ಕೆಲವು ಹೇಳಿಕೆಗಳು, ವಿಶೇಷವಾಗಿ ಭಾರತದಲ್ಲಿ ವಿಕಿಪೀಡಿಯಾವನ್ನು ಸ್ಥಗಿತಗೊಳಿಸುವಂತೆ ನ್ಯಾಯಾಧೀಶರು ಬೆದರಿಕೆ ಹಾಕಿದ್ದಾರೆ ಎಂಬ ಹೇಳಿಕೆಯು ಪ್ರಾಥಮಿಕವಾಗಿ ನ್ಯಾಯಾಲಯದ ನಿಂದನೆಗೆ ಸಮಾನವಾಗಿದೆ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು. ಪುಟದಲ್ಲಿನ ವಿಷಯ ಮತ್ತು ನಂತರದ ಚರ್ಚೆಗಳು ನ್ಯಾಯಾಲಯದ ವಿಚಾರಣೆಗೆ ಅಡ್ಡಿಪಡಿಸುತ್ತವೆ ಎಂದು ನ್ಯಾಯಾಲಯ ಹೇಳಿತ್ತು.

ನ್ಯಾಯಾಲಯದ ವಿಚಾರಣೆಗಳ ಹೇಳಿಕೆಗಳು ಮತ್ತು ಟೀಕೆಗಳನ್ನು ಅಸಾಮಾನ್ಯವೆಂದು ನೋಡಲಾಗುವುದಿಲ್ಲ ಎಂದು ಸೂಚಿಸಿದ ನ್ಯಾಯಮೂರ್ತಿ ಓಕಾ, “ಈ ನ್ಯಾಯಾಲಯದಲ್ಲಿ, ನಾವು ವಿಷಯಗಳನ್ನು ಹೇಳುತ್ತೇವೆ ಮತ್ತು ಯಾರಾದರೂ ಅದರ ಬಗ್ಗೆ ಹೇಳಿಕೆ ನೀಡಲು ಬಯಸುತ್ತಾರೆ … ಅಂತದ್ದು ನಡೆಯುತ್ತದೆ. ಕೆಲವೊಮ್ಮೆ ಜನರು ನ್ಯಾಯಾಲಯವು ಪೂರ್ವಭಾವಿ ಮನಸ್ಸಿನಿಂದ ಇಲ್ಲಿ ಕುಳಿತಿದೆ ಎಂದು ಹೇಳುತ್ತಾರೆ ಅಥವಾ ನೀವು ವಿಚಾರಣೆಯನ್ನು ಮಾಡುತ್ತಿಲ್ಲ ಎಂದು ಹೇಳುತ್ತಾರೆ. ಜನರು ಇಂತಹ ಮಾತುಗಳನ್ನು ಹೇಳುತ್ತಲೆ ಇರುತ್ತಾರೆ, ಆದರೆ ಅದನ್ನು ನಾವು ಸಹಿಸಿಕೊಳ್ಳಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಆದೇಶವನ್ನು ಟೀಕಿಸಿದ ಅವರು, “ವಕೀಲರು ಉತ್ತಮವಾದ ವಾದಗಳನ್ನು ಮಾಡಲು ಕೆಲವೊಮ್ಮೆ ನಾವು ಮುಕ್ತ ನ್ಯಾಯಾಲಯದಲ್ಲಿ ಅನೇಕ ವಿಷಯಗಳನ್ನು ಹೇಳುತ್ತೇವೆ. ಈಗ, ನ್ಯಾಯಾಲಯ ಮೌಖಿಕವಾಗಿ ಏನಾದರೂ ಹೇಳಿದರೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ, ಎಲ್ಲೋ ಒಂದು ಹೇಳಿಕೆ ನೀಡಲ್ಪಟ್ಟರೆ, ಅಂತಹ ಹೇಳಿಕೆಗಳ ಬಗ್ಗೆ ನ್ಯಾಯಾಲಯ ಏಕೆ ಕಟುವಾಗಿ ವರ್ತಿಸಬೇಕು… ನ್ಯಾಯಾಲಯದಲ್ಲಿ ನಡೆಯುವ ವಿಚಾರದ ಬಗ್ಗೆ ಜನರು ಏನನ್ನಾದರೂ ಚರ್ಚಿಸುತ್ತಾರೆ, ಅದಕ್ಕೆ ಹಸ್ತಕ್ಷೇಪಕ್ಕೆ ಮಾಡುವುದು ಸರಿಯೆ?” ಎಂದು ಹೇಳಿದ್ದಾರೆ.

ವಿಕಿಮೀಡಿಯಾ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ದೆಹಲಿ ಹೈಕೋರ್ಟ್ ಮಾನನಷ್ಟದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳದೆ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಿದೆ ಎಂದು ವಾದಿಸಿದ್ದಾರೆ. ಸಂಬಂಧಪಟ್ಟ ವಿಷಯವು ವಿಕಿಮೀಡಿಯಾದ್ದಲ್ಲ, ಬದಲಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಲೇಖನದಿಂದ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಮೂರ್ತಿ ಓಕಾ ANI ವಿರುದ್ಧ ಕೂಡಾ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ವಿಷಯವು ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ. ವಿಕಿಮೀಡಿಯಾ ಪುಟದಲ್ಲಿನ ಹೇಳಿಕೆಗಳಿಗೆ ಕಾರಣರಾದ ವ್ಯಕ್ತಿಗಳು ನ್ಯಾಯಾಲಯದಲ್ಲಿ ಇಲ್ಲ ಎಂದು ANI ವಕೀಲರು ವಾದಿಸಿದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಓಕಾ, “ನೀವು ಒಂದು ಪ್ರಮುಖ ಅಂಶವನ್ನು ಕಳೆದುಕೊಂಡಿದ್ದೀರಿ. ಅಂತಿಮವಾಗಿ, ಇದು ಮಾಧ್ಯಮವಾಗಿದ್ದು. ಪ್ರಶ್ನೆಯಿರುವುದು ಮಾಧ್ಯಮದ ಸ್ವಾತಂತ್ರ್ಯದ ಬಗ್ಗೆ ಆಗಿದೆ.” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ರಾಮದೇವಸ್ಥಾನದಲ್ಲಿ ದಲಿತ ಯುವಕನಿಗೆ ತಿಲಕ ಹಚ್ಚಲು ಪೂಜಾರಿ ನಿರಾಕರಣೆ: ನಾವು ಹಿಂದೂಗಳಲ್ಲವೇ? ಎಂದು ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...