Homeಕರ್ನಾಟಕಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ (ಮಾ.18) ಎತ್ತಿ ಹಿಡಿದಿದೆ.

ಸುಗ್ರೀವಾಜ್ಞೆಯ ಸಿಂಧುತ್ವ ಪ್ರಶ್ನಿಸಿ ಹಾಗೂ ಮೋಟಾರು ವಾಹನ/ಆಸ್ತಿಗೆ ಹಣಕಾಸು ಸೌಲಭ್ಯ ಒದಗಿಸುವ ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್‌ ಪರ್ಚೇಸ್‌ ಅಸೋಶಿಯೇಶನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್‌ ಹೊಳ್ಳ ಅವರು “ಸಂಕಷ್ಟದಲ್ಲಿರುವ ಕುಟುಂಬಗಳನ್ನು ರಕ್ಷಿಸುವ ಉದ್ದೇಶ ಸರ್ಕಾರದ್ದಾಗಿದ್ದರೆ ಸಾಲ ನೀಡುವವರು, ಸಂಸ್ಥೆಗಳು ಮತ್ತು ಸಂಘಗಳನ್ನು ಏಕೆ ಸೇರಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ವಿವೇಚನಾರಹಿತವಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಆರ್‌ಬಿಐ ನಿರ್ದೇಶನ ಪಾಲಿಸಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಆರ್‌ಬಿಐ ನಿರ್ದೇಶನವು ನಿಯಮ ಅಥವಾ ಶಾಸನವಲ್ಲ. ನಾವು ಖರೀದಿ ಉದ್ಯಮದಲ್ಲಿದ್ದು, ವಾಹನಗಳನ್ನೇ ಭದ್ರತೆಯನ್ನಾಗಿ ಇಟ್ಟುಕೊಳ್ಳುತ್ತೇವೆ. ಸುಗ್ರೀವಾಜ್ಞೆಯ ಸೆಕ್ಷನ್‌ 6 ಬಾಧಕವಾಗಿದೆ” ಎಂದು ವಾದಿಸಿದ್ದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಮೂರು ಲಕ್ಷ ವಾರ್ಷಿಕ ಆದಾಯ ಇರುವ ಕುಟುಂಬಗಳಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ. ಹಾಲಿ ಪ್ರಕರಣದಲ್ಲಿ ಬಾದಿತರಾರೂ ನ್ಯಾಯಾಲಯದ ಮುಂದೆ ಬಂದಿಲ್ಲ. ಅರ್ಜಿದಾರರು ಕಾಯ್ದೆ ತಮಗೆ ಅನ್ವಯಿಸುತ್ತದೆಯೇ ಇಲ್ಲವೇ ಎಂಬುದರ ಸ್ಪಷ್ಟನೆ ಕೋರಲು ನ್ಯಾಯಾಲಯ ಮುಂದೆ ಬಂದಿದ್ದಾರೆ. ಆರ್‌ಬಿಐ ಸುತ್ತೋಲೆ ಏನು ಹೇಳುತ್ತದೆ ಅದನ್ನು ಮಾಡಲಾಗಿದೆ. ಅರ್ಜಿದಾರರಿಗೂ ಸುಗ್ರೀವಾಜ್ಞೆಗೂ ಯಾವುದೇ ಸಂಬಂಧವಿಲ್ಲ. ಸಾಲದಾತರ ಕಿರುಕುಳದಿಂದಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಆ ಸಂಬಂಧ ಎಫ್‌ಐಆರ್‌ ದಾಖಲಾಗಿವೆಯಷ್ಟೆ. ಬೇರೆ ಯಾವುದೇ ತೆರನಾದ ಎಫ್‌ಐಆರ್‌ ದಾಖಲಿಸಲಾಗಿಲ್ಲ. ಎನ್‌ಬಿಎಫ್‌ಸಿ ಮತ್ತು ಆರ್‌ಬಿಐ ಕಾಯ್ದೆ ವ್ಯಾಪ್ತಿಯಿಂದ ಹೊರಗಿರುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ” ಎಂದಿದ್ದಾರೆ.

ಸೌಜನ್ಯ ಪರ ಹೋರಾಟದ ದಿಕ್ಸೂಚಿ ಸಭೆಗೆ ಪೊಲೀಸರಿಂದ ನೋಟಿಸ್: ಸಭೆ ನಡೆದೇ ನಡೆಯುತ್ತದೆ ಎಂದ ಆಯೋಜಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...