Homeಕರ್ನಾಟಕಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ;...

ಕುಮಾರಸ್ವಾಮಿ ವಿರುದ್ಧದ ಭೂ ಒತ್ತುವರಿ ಆರೋಪ | ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರಲಿದೆ; ಹೈಕೋರ್ಟ್ ಕಿಡಿ

- Advertisement -
- Advertisement -

ರಾಮನಗರ ಜಿಲ್ಲೆ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾರ ಅನುಮತಿ ಪಡೆದು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿದೆ ಎಂದು ಹೈಕೋರ್ಟ್ ಕೆಂಡಾಮಂಡಲವಾಗಿದ್ದು, “ಪ್ರಕರಣದ ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಆದೇಶಿಸಿದರೆ ಸತ್ಯ ಹೊರ ಬರಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಸಂಬಂಧಿ, ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಮತ್ತಿರರ ವಿರುದ್ದದ ಭೂ ಕಬಳಿಗೆ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಎಸ್‌.ಆರ್ ಹಿರೇಮಠ ನೇತೃತ್ವದ ‘ಸಮಾಜ ಪರಿವರ್ತನಾ ಸಮುದಾಯ’ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ (ಮಾ.17) ವಿಚಾರಣೆ ನಡೆಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಲಯ, “ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ಎಸ್‌ಐಟಿ ರಚಿಸಿದ್ದಾರೆ. ಕಂದಾಯ ಇಲಾಖೆಯು ಎಸ್‌ಐಟಿ ರಚಿಸಲು ಅಷ್ಟು ಶಕ್ತಿಶಾಲಿಯೇ? ರಾಜ್ಯ ಸರ್ಕಾರವು ಸಂವಿಧಾನಕ್ಕಿಂತ ಮಿಗಿಲಾಗಿದೆಯೇ? 14 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಉಳಿದ 71 ಎಕರೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸಬೇಕಿದೆ. ಯಾವ ರೀತಿಯಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ? ಎಷ್ಟು ಎಕರೆ ತೆರವು ಮಾಡಲಾಗಿದೆ? ತಡೆಯಾಜ್ಞೆ ಪಡೆಯಲು ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಕಟಾರಿಯಾ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಬೇಕು, ಇಲ್ಲವೇ ಆರೋಪಿಗಳನ್ನು ಜೈಲಿಗೆ ಹಾಕಬೇಕು ಅಷ್ಟೆ. ಎಲ್ಲಾ ಆರೋಪಿಗಳನ್ನು ಮಂಪರು ಪರೀಕ್ಷೆ ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಹೊರಬರುತ್ತದೆ. ಎಸ್‌ಐಟಿ ರಚಿಸಲು ಸರ್ಕಾರಕ್ಕೆ ಅಧಿಕಾರ ನೀಡಿದವರು ಯಾರು? ಹಾಗಾದರೆ ರಾಜ್ಯ ಸರ್ಕಾರ ಕಾನೂನಿಗಿಂತ ಮೇಲಿದೆಯೇ?” ಎಂದು ಕಿಡಿಕಾರಿದೆ ಎಂದು ವರದಿ ಹೇಳಿದೆ.

ಸಮಾಜ ಪರಿವರ್ತನಾ ಸಮುದಾಯ ಪರ ಹಿರಿಯ ವಕೀಲ ಎಸ್‌. ಬಸವರಾಜು ವಾದ ಮಂಡಿಸಿ, “ಪ್ರಬಲರಲ್ಲದವರು ಒತ್ತುವರಿ ಮಾಡಿದ್ದ 14 ಎಕರೆಯನ್ನು ತೆರವುಗೊಳಿಸಲಾಗಿದೆ. ಬಲಿಶಾಲಿಗಳು ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವು ಮಾಡಿಸಲಾಗಿಲ್ಲ. ಬಲಶಾಲಿಗಳು ಎಸ್‌ಐಟಿ ರಚನೆಯನ್ನು ಪ್ರಶ್ನಿಸಿ, ತಡೆಯಾಜ್ಞೆ ಪಡೆಯಲು ಅನುಕೂಲ ಮಾಡಿಕೊಡಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ತನ್ನ ಜಮೀನನ್ನು ವಶಕ್ಕೆ ಪಡೆಯಲು ನಾವು ಹೋರಾಟ ಮಾಡುತ್ತಿದ್ದೇವೆ. ಆರೋಪಿಗಳ ಹೆಸರನ್ನು ಕೇಳಿದ ತಕ್ಷಣ ಸರ್ಕಾರ ಬೆಚ್ಚುತ್ತಿದೆ. ಆರೋಪಿಗಳ ಜೊತೆ ಸರ್ಕಾರವೂ ಕೈಜೋಡಿಸಿದೆ. ಇಲ್ಲಿ ಅಪ್ರಾಮಾಣಿಕತೆ ಎದ್ದು ಕಾಣುತ್ತಿದೆ. ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಲಾಗುತ್ತಿದೆ. ಇದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಕಿರಣ ಎಂ. ರೋಣ್‌, “ಒತ್ತುವರಿ ಮಾಡಿರುವ ಸರ್ಕಾರದ ಜಮೀನನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಕೆರೆಗೆ ಸಂಬಂಧಿಸಿದ 6 ಎಕರೆ 20 ಗಂಟೆ ತೆರವು ಮಾಡಲಾಗಿದೆ. 11 ಎಕರೆ 20 ಗುಂಟೆಯನ್ನು ಪತ್ತೆ ಮಾಡಿದ್ದೇವೆ. ಐಜಿಪಿ ಮತ್ತು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒಳಗೊಂಡ ಎಸ್‌ಐಟಿ ರಚಿಸಲಾಗಿದೆ. ಎಸ್‌ಐಟಿ ರಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಕಾನೂನು ಜಾರಿಗೊಳಿಸಲು ಎಸ್‌ಐಟಿ ರಚಿಸಲಾಗಿದೆ. 18 ಎಕರೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು, ಅಸಲಿ ದಾಖಲೆಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಬಳಿಕ ಹೈಕೋರ್ಟ್ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಎಸ್‌ಐಟಿ ರಚಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ಬಗ್ಗೆ ವಿವರಣೆ ನೀಡಲು ಮುಂದಿನ ವಿಚಾರಣೆಗೆ ರಾಜೇಂದ್ರ ಕಟಾರಿಯಾ ಖುದ್ದು ಹಾಜರಾಗಲು ಸೂಚನೆ ನೀಡಿದೆ. ಪ್ರಕರಣದಲ್ಲಿ ಮೇಲ್ನೋಟಕ್ಕೆ ಅರೋಪಿಗಳ ವಿರುದ್ಧ ಮುಂದುವರಿಯಲು ದಾಖಲೆಗಳು ಇವೆ. ಆರೋಪ ನಿಗದಿಗೂ ಮುನ್ನ ವಾದ ಆಲಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಮಾರ್ಚ್‌ 19ಕ್ಕೆ ಮುಂದೂಡಿದೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...