Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...