Homeಅಂತರಾಷ್ಟ್ರೀಯಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

9 ತಿಂಗಳಿನಿಂದ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾನಿಗಳು

- Advertisement -
- Advertisement -

ಕೇವಲ ಎಂಟು ದಿನಗಳ ಭೇಟಿಗೆ ತೆರಳಿ 9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ(ಐಎಸ್ಎಸ್‌) ಸಿಲುಕಿದ್ದ ಅಮೆರಿಕದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಮತ್ತು ತಂಡ ಕೊನೆಗೂ ಸುರಕ್ಷಿತವಾಗಿ ಭೂಮಿಗೆ ಹಿಂದಿರುಗಿದೆ.

ನಿರೀಕ್ಷೆಯಂತೆ ಅಮೆರಿಕದ ಸ್ಥಳೀಯ ಕಾಲಮಾನ ಮಾರ್ಚ್ 18, 2025 ಸಂಜೆ 5.57 ಮತ್ತು ಭಾರತೀಯ ಕಾಲಮಾನ ಮಾರ್ಚ್‌ 19, 2025 ಮುಂಜಾನೆ 3.27ಕ್ಕೆ ಅಮೆರಿಕ ಕರಾವಳಿಯ ಫ್ಲೋರಿಡಾದ ತಲ್ಲಾಹಸ್ಸೀಯಲ್ಲಿ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್, ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಅವರನ್ನು ಹೊತ್ತ ಸ್ಪೇಸ್ ಎಕ್ಸ್‌ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಲ್ಯಾಂಡ್ ಆಗಿದೆ.

ಪ್ಯಾರಚೂಟ್‌ಗಳ ಸಹಾಯದಿಂದ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆ ಸಮುದ್ರದ ಮೇಲೆ ಇಳಿಯುತ್ತಿದ್ದಂತೆ ರಕ್ಷಣಾ ಬೋಟ್‌ಗಳು ಸಮೀಪಕ್ಕೆ ಧಾವಿಸಿತು. ಬಾಹ್ಯಾಕಾಶ ನೌಕೆಯಲ್ಲಿದ್ದ ಗಗನಯಾನಿಗಳು ಬೋಟ್‌ಗೆ ಸ್ಥಳಾಂತರಗೊಂಡರು. ನಂತರ ಅವರನ್ನು ದಡಕ್ಕೆ ಕರೆ ತರಲಾಯಿತು.

ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಗಗನಯಾನಿಗಳು ಹೂಸ್ಟನ್‌ನಲ್ಲಿರುವ ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ ಎಂದು ನಾಸಾ ತಿಳಿಸಿದೆ.

ನಿನ್ನೆ (ಮಾ.18) ಬೆಳಿಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಐಎಸ್‌ಎಸ್‌ನಿಂದ ಹೊರಟಿತ್ತು. ಡ್ರ್ಯಾಗನ್ ಐಎಸ್‌ಎಸ್‌ನಿಂದ ಬೇರ್ಪಡುವ ವಿಡಿಯೋವನ್ನು ಹಂಚಿಕೊಂಡಿದ್ದ ನಾಸಾ, ಮುಂದಿನ 17 ಗಂಟೆಗಳಲ್ಲಿ ಅದು ಭೂಮಿಗೆ ತಲುಪಲಿದೆ ಎಂದಿತ್ತು. ಅದರಂತೆ ಸರಿಯಾದ ಸಮಯಕ್ಕೆ ತಲುಪಿದೆ.

ಬಾಹ್ಯಾಕಾಶ ನೌಕೆಯಿಂದ ಹೊರ ಬಂದ ಬಳಿಕ ಸುನಿತಾ ಮತ್ತು ಬುಚ್‌ ಕೈ ಬೀಸುತ್ತಾ, ನಗುತ್ತಾ ತೆರಳಿದ್ದಾರೆ. ಬಾಹ್ಯಾಕಾಶ ಮತ್ತು ಭೂಮಿಯ ವಾತಾವರಣ ವ್ಯತಿರಿಕ್ತವಾಗಿ ಇರುವುದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಹಾಗಾಗಿ, ನಾಸಾ ಅವರ ಆರೋಗ್ಯದ ಮೇಲೆ ನಿಗಾ ಇಡಲಿದೆ ಎನ್ನಲಾಗಿದೆ.

ಸುನಿತಾ ವಿಲಿಯಮ್ಸ್ ಹಾಗೂ ಬುಚ್‌ ವಿಲ್ಮೋರ್‌ ಕಳೆದ ವರ್ಷ (2024) ಜೂನ್‌ 5ರಂದು, ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಗಗನನೌಕೆಯಲ್ಲಿ ಐಎಸ್‌ಎಸ್‌ನತ್ತ ಪ್ರಯಾಣ ಬೆಳೆಸಿದ್ದರು. 8 ದಿನಗಳ ನಂತರ ಅವರು ಭೂಮಿಗೆ ಮರಳಬೇಕಿತ್ತು. ಆದರೆ, ಗಗನನೌಕೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಅವರಿಗೆ ಮರಳಲು ಸಾಧ್ಯವಾಗದೆ ಅಲ್ಲೇ ಉಳಿದುಕೊಂಡಿದ್ದರು.

ಹಿಂದಿರುಗುವ ಸಮಸ್ಯೆ ಉಂಟಾದ ನಡುವೆಯೂ, ಸುನಿತಾ ಮತ್ತು ಬುಚ್ ಅವರನ್ನು ನಾಸಾ ಸ್ಪೇಸ್‌ಎಕ್ಸ್‌ನ ಕ್ರೂ-9 ಕಾರ್ಯಾಚರಣೆಗೆ ಮರು ನಿಯೋಜಿಸಿತ್ತು. ಇವರಿಬ್ಬರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ನಾಲ್ವರ ಬದಲಿಗೆ ಇಬ್ಬರು ಸಿಬ್ಬಂದಿಯೊಂದಿಗೆ ಸೆಪ್ಟೆಂಬರ್‌ನಲ್ಲಿ ಸ್ಪೇಸ್‌ಎಕ್ಸ್‌ನ ಕ್ರೂ-9 ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ನಾಸಾ ಐಎಸ್‌ಎಸ್‌ಗೆ ಕಳುಹಿಸಿತ್ತು.

ಸುನಿತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್ ತೆರಳಿದ 9 ತಿಂಗಳ ನಂತರ ಕಳೆದ ಭಾನುವಾರ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್ (SpaceX’s Crew-10) ಐಎಸ್‌ಎಸ್‌ ತಲುಪಿತ್ತು. ಆ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್, ಸ್ಪೇಸ್‌ಎಕ್ಸ್‌ನ ಕ್ರೂ-9ನಲ್ಲಿ ತೆರಳಿದ್ದ ನಾಸಾದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಭೂಮಿಗೆ ಮರಳಿದ್ದಾರೆ.

ಸ್ಪೇಸ್‌ಎಕ್ಸ್‌ನ ಕ್ರೂ-10 ಮಿಷನ್‌ನಲ್ಲಿ ತೆರಳಿದ ನಾಲ್ವರು ಗಗಯಾನಿಗಳಾದ ನಾಸಾದ ಆ್ಯನ್‌ ಮೆಕ್ಲೇನ್ ಮತ್ತು ನಿಕೋಲ್ ಆಯೆರ್ಸ್‌, ಜಪಾನ್‌ನ ತಕುಯಾ ಒನಿಶಿ ಹಾಗೂ ರಷ್ಯಾದ ಕಿರಿಲ್ ಪೆಸ್ಕೊವ್ ಅವರು ಕೆಲ ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಉಳಿಯಲಿದ್ದಾರೆ.

ನಾಪತ್ತೆಯಾದ ಮಗಳು| ಸಾವನ್ನಪ್ಪಿದ್ದಾಳೆಂದು ಘೋಷಿಸಲು ಕೋರಿದ ಪೋಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...