Homeಮುಖಪುಟಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

ಕುಂಭಮೇಳವನ್ನು ಶ್ಲಾಘಿಸಿ, ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟವರನ್ನು ಮರೆತ ಮೋದಿ: ವಿಪಕ್ಷಗಳಿಂದ ಪ್ರತಿಭಟನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭ ಮೇಳವನ್ನು ಮಂಗಳವಾರ ಸದನದಲ್ಲಿ ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಷ್ಟೊಂದು ದೊಡ್ಡ ಸಭೆಯನ್ನು ಆಯೋಜಿಸಿ ಭಾರತದ ಸಾಮೂಹಿಕ ಶಕ್ತಿಯನ್ನು ಪ್ರಶ್ನಿಸಿದವರಿಗೆ ಇದು ಸೂಕ್ತ ಉತ್ತರವನ್ನು ನೀಡಿದೆ ಎಂದು ಹೇಳಿದ್ದಾರೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಅವರ ಹೇಳಿಕೆಯು ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಯಿತು. ಕುಂಭಮೇಳದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಅದೇ ಕಾರ್ಯಕ್ರಮದ ಸಮಯದಲ್ಲಿ ಕಾಲ್ತುಳಿತಕ್ಕೆ ಒಳಪಟ್ಟು ಸಾವನ್ನಪ್ಪಿದ ಜೀವಗಳ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಕುಂಭಮೇಳವನ್ನು ಶ್ಲಾಘಿಸಿ

ಲೋಕಸಭೆಯಲ್ಲಿ ಮಾತನಾಡಿದ ಮೋದಿ, ಮಹಾ ಕುಂಭದಲ್ಲಿ ನಡೆದ ಬೃಹತ್ ಏಕತೆಯ ಪ್ರದರ್ಶನವು ಭಾರತದ ಶಕ್ತಿಯಾಗಿದೆ ಎಂದು ಹೇಳಿದ್ದಾರೆ. ಅದರಲ್ಲೂ ವಿಶೇಷವಾಗಿ ಜಗತ್ತು ಅಸ್ತವ್ಯಸ್ತವಾಗಿರುವ ಈ ಸಮಯದಲ್ಲಿ ಈ ಕಾರ್ಯಕ್ರಮ ಭಾರತದ ಶಕ್ತಿಯನ್ನು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. “ಇತಿಹಾಸದಾದ್ಯಂತ, ಮುಂದಿನ ಪೀಳಿಗೆಗೆ ಉದಾಹರಣೆಗಳಾಗುವ ನಿರ್ಣಾಯಕ ಕ್ಷಣಗಳಿವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ರಾಷ್ಟ್ರವು ಸಹ ಹೊಸ ದಿಕ್ಕನ್ನು ನೀಡಿದ ಮತ್ತು ತನ್ನ ಜನರನ್ನು ಜಾಗೃತಗೊಳಿಸಿದ ಅಂತಹ ಕ್ಷಣಗಳಿಗೆ ಸಾಕ್ಷಿಯಾಗಿದೆ… ಅದೇ ರೀತಿ, ನಮ್ಮ ಸ್ವಾತಂತ್ರ್ಯ ಹೋರಾಟವು ಹಲವಾರು ತಿರುವುಗಳಿಂದ ಗುರುತಿಸಲ್ಪಟ್ಟಿದೆ – 1857 ರ ದಂಗೆ, ವೀರ್ ಭಗತ್ ಸಿಂಗ್ ಅವರ ಹುತಾತ್ಮತೆ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ದೆಹಲಿ ಚಲೋ’ ಎಂಬ ಘೋಷಣೆ ಮತ್ತು ಮಹಾತ್ಮ ಗಾಂಧಿಯವರ ದಂಡಿ ಮೆರವಣಿಗೆ” ಎಂದು ಮೋದಿ ಹೇಳಿದ್ದಾರೆ.

“ಜನರು ತಮ್ಮ ಅಹಂಕಾರವನ್ನು ಬದಿಗಿಟ್ಟು ‘ನಾನು’ ಅಲ್ಲ ‘ನಾವು’ ಎಂಬ ಭಾವನೆಯೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ಒಟ್ಟುಗೂಡಿದರು. ಮಹಾ ಕುಂಭವು ದೊಡ್ಡವರು ಮತ್ತು ಸಣ್ಣವರು ಎಂಬ ಭೇದವಿಲ್ಲ ಎಂಬುದನ್ನು ಪ್ರದರ್ಶಿಸಿತು” ಎಂದು ಅವರು ಹೇಳಿದ್ದಾರೆ. ಅದಾಗ್ಯೂ, ಮಹಾಕುಂಭದಲ್ಲಿ ವಿವಿಐಪಿಗಳಿಗೆ ಪ್ರತ್ಯೇಕ ಮತ್ತು ಸಾಮಾನ್ಯ ಜನರಿಗೆ ಪ್ರತ್ಯೇಕ ಸ್ಥಳಗಳನ್ನು ಗುರುತಿಸಲಾಗಿತ್ತು ಎಂದು ವರದಿಯಾಗಿದೆ.

ತಮ್ಮ ಇತ್ತೀಚಿನ ಮಾರಿಷಸ್ ಭೇಟಿಯನ್ನು ನೆನಪಿಸಿಕೊಂಡ ಮೋದಿ, ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಿಂದ ಪವಿತ್ರ ನೀರನ್ನು ಗಂಗಾ ತಲಾಬ್‌ನಲ್ಲಿ ಅರ್ಪಿಸಿದ ಕ್ಷಣ ಭಕ್ತಿ, ನಂಬಿಕೆ ಮತ್ತು ಈ ಆಚರಣೆಯ ವಾತಾವರಣವು ನಿಜವಾಗಿಯೂ ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

ನಂತರ, ಮಹಾ ಕುಂಭದ ಕುರಿತು ಚರ್ಚೆ ನಡೆಸಲು ಕೋರಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಮಾತನ್ನು ಸ್ಪೀಕರ್ ಓಂ ಬಿರ್ಲಾ ನಿರಾಕರಿಸಿದರು. ಇದರ ನಂತರ ವಿರೋಧ ಪಕ್ಷಗಳ ಪೀಠವು ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ಸಂಸದರು ಸದನದ ಬಾವಿಗೆ ಧಾವಿಸಿ ಪ್ರಧಾನಿಗೆ ಯಾವ ನಿಯಮದ ಅಡಿಯಲ್ಲಿ ಮಾತನಾಡಲು ಅವಕಾಶವಿದೆ ಎಂದು ಕೇಳಿದ್ದಾರೆ.

ಪ್ರಧಾನಿ ಮತ್ತು ಸಚಿವರು ಸದನದಲ್ಲಿ ಹೇಳಿಕೆ ನೀಡಲು ಅನುಮತಿಸುವ ಕಾರ್ಯವಿಧಾನ ಮತ್ತು ವ್ಯವಹಾರ ನಡವಳಿಕೆ ನಿಯಮಗಳ ನಿಯಮ 372 ಅನ್ನು ಈ ವೇಳೆ ಬಿರ್ಲಾ ಉಲ್ಲೇಖಿಸಿದ್ದು, ಆದರೆ ಹೇಳಿಕೆಯ ನಂತರ ಯಾವುದೇ ಪ್ರಶ್ನೆಗಳನ್ನು ಕೇಳಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷದ ಸಂಸದರು ಘೋಷಣೆಗಳನ್ನು ಮುಂದುವರೆಸಿದ್ದರಿಂದ ಸದನವನ್ನು ನಂತರ 30 ನಿಮಿಷಗಳ ಕಾಲ ಮುಂದೂಡಲಾಯಿತು.

ಮಹಾ ಕುಂಭ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಗೌರವ ಸಲ್ಲಿಸಲಿಲ್ಲ ಎಂದು ರಾಹುಲ್ ಹೇಳಿದ್ದಾರೆ. “ಪ್ರಧಾನಿಯವರು ಹೇಳಿದ್ದನ್ನು ನಾನು ಬೆಂಬಲಿಸಲು ಬಯಸಿದ್ದೆ. ಕುಂಭ ನಮ್ಮ ಇತಿಹಾಸ ಮತ್ತು ಸಂಸ್ಕೃತಿ. ಕುಂಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಸಂತಾಪ ಸೂಚಿಸಲಿಲ್ಲ ಎಂಬುದು ನಮ್ಮ ಏಕೈಕ ದೂರು” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....