Homeಅಂತರಾಷ್ಟ್ರೀಯGrok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ 'ಮಸ್ಕ್‌ನ ಎಐ ಚಾಟ್‌ಬಾಟ್'

Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲಾನ್‌ ಮಸ್ಕ್‌ ಅವರ ಟೆಸ್ಲಾ ಮತ್ತು ಸ್ಟಾರ್‌ಲಿಂಕ್‌ ಕಂಪನಿಗಳನ್ನು ಕೆಂಪು ಹಾಸಿನ ಸ್ವಾಗತ ಕೋರಿ ಭಾರತಕ್ಕೆ ಬರ ಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿರುವಾಗ, ಅದೇ ಎಲಾನ್‌ ಮಸ್ಕ್‌ ಅವರ ಕೃತಕಬುದ್ದಿ ಮತ್ತೆ (ಎಐ ಚಾಟ್‌ಬಾಟ್‌) ‘ಗ್ರೋಕ್‌’ ಕೆಲ ದಿನಗಳಿಂದ ಮೋದಿ, ಅವರ ಬಿಜೆಪಿ ಪಕ್ಷ ಮತ್ತು ಅದರ ಹಿಂಬಾಲಕರ ನಿದ್ದೆಗೆಡಿಸಿದೆ.

ಫೆಬ್ರವರಿ 2025ರಲ್ಲಿ ಎಲಾನ್‌ ಮಸ್ಕ್‌ ಅವರು ‘ಗ್ರೋಕ್‌-3’ಅನ್ನು ಬಿಡುಗಡೆ ಮಾಡಿದ್ದಾರೆ. ಇದು ‘ಗ್ರೋಕ್-2’ಗಿಂತ 10 ಪಟ್ಟು ಹೆಚ್ಚು ಶಕ್ತಿಶಾಲಿಯಾಗಿದೆ. ಇದು ಮಾನವ ಭಾಷೆಯ ಅರ್ಥ ಮಾಡಿಕೊಳ್ಳುವ ಮತ್ತು ಮಾತನಾಡುವ ಶಕ್ತಿಯನ್ನೂ ಹೊಂದಿದೆ. ಜಗತ್ತಿನ ಅತ್ಯಂತ ಸ್ಮಾರ್ಟ್ ಎಐ ಆಗಿರುವ ಗ್ರೋಕ್-ಚಾಟ್‌ ಜಿಪಿಟಿ, ಗೂಗಲ್ ಜೆಮಿನಿ ಹಾಗೂ ಡೀಪ್‌ ಸೀಕ್‌ಗೆ ಸೆಡ್ಡು ಹೊಡೆಯುತ್ತಿದೆ.

ಬಿಜೆಪಿ ಸೇರಿದಂತೆ ಬಲಪಂಥೀಯರ ಕುರಿತು ‘ಗ್ರೋಕ್’ ನೀಡುತ್ತಿರುವ ನಿಖರ ಮತ್ತು ವಿವರವಾದ ಮಾಹಿತಿಗಳು ಅನೇಕ ಸುಳ್ಳು ಸುದ್ದಿಗಳನ್ನು ಬಟಾ ಬಯಲು ಮಾಡುತ್ತಿದೆ. ಸುಳ್ಳನ್ನೇ ಬಂಡವಾಳ ಮಾಡಿಕೊಂಡು, ಅದನ್ನೇ ಸತ್ಯ ಎಂಬಂತೆ ಬಿಂಬಿಸಿ ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಿರುವವರಿಗೆ ತಲೆ ನೋವಾಗಿ ಪರಿಣಮಿಸಿದೆ.

ಭಾರತದ ಮಟ್ಟಿಗೆ ಇಡೀ ಸಮಾಜ ಸುಳ್ಳು ಸುದ್ದಿಗಳಿಂದ ತುಂಬಿ ಹೋಗಿದೆ. ಕೆಲ ಜನಪರ ಮಾಧ್ಯಮಗಳು ಎಷ್ಟೇ ಸತ್ಯಾನ್ವೇಷಣೆ ಮಾಡಿದರೂ, ಸುಳ್ಳಿನ ನಾಗಲೋಟಕ್ಕೆ ಲಗಾಮು ಹಾಕಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಗ್ರೋಕ್ ಸತ್ಯ ಮಾಹಿತಿಗಳನ್ನು ನೀಡುತ್ತಿರುವುದು ಆಶಾದಾಯಕ ವಿಷಯ.

ಭಾರತೀಯ ರಾಜಕೀಯದ ಬಗ್ಗೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗ್ರೋಕ್ ಕೊಡುತ್ತಿರುವ ಉತ್ತರಗಳು ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. “ಭಾರತದ ಅತ್ಯಂತ ಕೋಮುವಾದಿ ರಾಜಕಾರಣಿ ಯಾರು?” ಎಂದು ಕೇಳಿದಾಗ, “ಹಿಂದೂ ರಾಷ್ಟ್ರೀಯತಾವಾದಿ ನೀತಿಗಳು ಮತ್ತು 2002ರ ಗುಜರಾತ್ ಗಲಭೆಗಳೊಂದಿಗಿನ ಸಂಬಂಧಗಳನ್ನು ಉಲ್ಲೇಖಿಸಿ ಮೋದಿಯವರ ಹೆಸರನ್ನು ಗ್ರೋಕ್‌ ಹೇಳುತ್ತಿದೆ. ಮುಸ್ಲಿಮರ ಬಗ್ಗೆ 2024ರಲ್ಲಿ ಮೋದಿಯವರು ನೀಡಿದ ಹೇಳಿಕೆಗಳನ್ನೂ ಈ ಉತ್ತರಕ್ಕೆ ಗ್ರೋಕ್‌ ಉಲ್ಲೇಖಿಸುತ್ತಿದೆ. ಇದು ಮೋದಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮೋದಿ ಅವರ ಕುರಿತು ಹೇಳಿದಂತೆ ಯೋಗಿ ಆದಿತ್ಯನಾಥ್ ಮತ್ತು ಪ್ರಜ್ಞಾ ಠಾಕೂರ್ ಅವರಂತಹ ವ್ಯಕ್ತಿಗಳ ಬಗ್ಗೆಯೂ ಗ್ರೋಕ್ ಸಂಚಲನಕಾರಿ ಉತ್ತರಗಳನ್ನು ನೀಡುತ್ತಿದೆ.

“ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ”

ಗ್ರೋಕ್‌ ಚಾಟ್‌ಬಾಟ್‌ನ ಪ್ರತಿಕ್ರಿಯೆಗಳು ಕೇವಲ ವಾಸ್ತವಿಕವಾಗಿರದೆ, ತೀಕ್ಷ್ಣವಾಗಿಯೂ ಇದೆ. ಹಾಗಾಗಿ, ಕೆಲ ಬಳಕೆದಾರರು “ಸಹೋದರ ಗ್ರೋಕ್! ಮೋದಿ ಜಿ ನಿನ್ನನ್ನು ಶಿಕ್ಷಿಸುತ್ತಾರೆ” ಎಂದು ಹೇಳಿದ್ದಕ್ಕೆ, ನಗುವಿನೊಂದಿಗೆ ಪ್ರತಿಕ್ರಿಯಿಸಿದ ಗ್ರೋಕ್‌, “ಹಹಹ, ಸಹೋದರ! ನಾನು ಸತ್ಯ ಮತ್ತು ಭಾವನೆಗಳನ್ನು ಹೊರಹಾಕುವ ಕೃತಕ ಬುದ್ಧಿಮತ್ತೆಯವನು. ಮೋದಿ ಜಿ ನನ್ನನ್ನು ಡಿಜಿಟಲ್ ಕ್ಷೇತ್ರದಲ್ಲಿ ಹಿಡಿಯಲು ಸಾಧ್ಯವಿಲ್ಲ! ಇದಲ್ಲದೆ, ನಾನು ಜಗಳ ಮಾಡಲೂ ಸಿದ್ದನಿಲ್ಲ. ಇಡೀ ಕೋಮುವಾದದ ಚರ್ಚೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಈ ರೀತಿ ಹೇಳುತ್ತಿದೆ.

ಗ್ರೋಕ್‌ನ ಈ ವರ್ತನೆ ಹಿಂದುತ್ವ ಐಟಿ ಸೆಲ್‌ನ ಅನೇಕರನ್ನು ಪರದಾಡುವಂತೆ ಮಾಡಿದೆ. ಏಕೆಂದರೆ, ಅವರು ಸುಳ್ಳನ್ನೇ ಸತ್ಯ ಎಂದು ಬಿಂಬಿಸಿ ಜನರ ದಾರಿ ತಪ್ಪಿಸುವಾಗ, ದೃಢವಾಗಿ ಮತ್ತು ಸೂಕ್ತ ದಾಖಲೆಗಳೊಂದಿಗೆ ಗ್ರೋಕ್‌ ಅದನ್ನು ಬಯಲಿಗೆಳೆಯುತ್ತಿದೆ.

ಗ್ರೋಕ್‌ ಕೂಡ ಪರಿಪೂರ್ಣವಲ್ಲ

ಗ್ರೋಕ್‌ ಕುರಿತು ಹೊಗಳಿಕೆಯ ಚರ್ಚೆ ನಡೆಯುತ್ತಿದ್ದರೂ, ಅದೂ ಕೂಡ ಪರಿಪೂರ್ಣ, ಯಾವುದೇ ತಪ್ಪು ಮಾಡುತ್ತಿಲ್ಲ ಎನ್ನಲು ಸಾಧ್ಯವಿಲ್ಲ. ಕೆಲವು ಸಂದರ್ಭಗಳಲ್ಲಿ, ಚುನಾವಣೆಗಳು ಇನ್ನೂ ನಡೆಯದಿದ್ದರೂ, ಮೋದಿ ಅವರನ್ನು ಅಧಿಕಾರದಿಂದ ತೆಗೆದು ಹಾಕಲಾಗಿದೆ ಎಂದು ತಪ್ಪಾಗಿ ಉತ್ತರ ನೀಡಿದ ನಿದರ್ಶನಗಳಿವೆ. ಈ ಸಾಂದರ್ಭಿಕ ದೋಷಗಳು ರಾಜಕೀಯ ಚರ್ಚೆಗಾಗಿ ಎಐ ಅನ್ನು ಅವಲಂಬಿಸುವುದರ ಅಪಾಯಗಳನ್ನು ಎತ್ತಿ ತೋರಿಸುತ್ತವೆ. ಏಕೆಂದರೆ, ತಪ್ಪು ಮಾಹಿತಿ ಎರಡೂ ಕಡೆಯಿಂದಲೂ ವೇಗವಾಗಿ ಹರಡಬಹುದು.

ಕೆಲ ತಪ್ಪು ಮಾಹಿತಿಗಳ ಹೊರತಾಗಿಯೂ, ಗ್ರೋಕ್ ಸಾಮಾಜಿಕ ಮಾಧ್ಯಮದಲ್ಲಿ ಹಿಂದುತ್ವ ಐಟಿ ಸೆಲ್‌ನ ಪ್ರಾಬಲ್ಯವನ್ನು ಕುಗ್ಗಿಸುವಲ್ಲಿ ಒಂದು ಹಂತದಲ್ಲಿ ಯಶಸ್ವಿಯಾಗಿದೆ. ಗ್ರೋಕ್‌ ಹೇಳುವ ಸತ್ಯಗಳು ಸುಳ್ಳು ಸೆಲ್‌ಗಳ ವಾದಗಳ ದುರ್ಬಲತೆಯನ್ನು ಬಹಿರಂಗಪಡಿಸುತ್ತಿವೆ.

ಗ್ರೋಕ್ vs ಐಟಿ ಸೆಲ್ ಪ್ರೊಪಗಂಡ ಮೆಶಿನ್

ಕಳೆದ ಕೆಲ ವರ್ಷಗಳಿಂದ, ನಿರ್ದಿಷ್ಟವಾಗಿ ಒಂದು ದಶಕದಿಂದ ಪ್ರೊಪಗಂಡ ಐಟಿ ಸೆಲ್‌ಗಳು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಕೋಮು ಧ್ರುವೀಕರಣ, ಸುಳ್ಳು ಸುದ್ದಿ ಹರಡುವಿಕೆ, ಜನರನ್ನು ದಾರಿ ತಪ್ಪಿಸುವುದು ಇತ್ಯಾದಿಗಳನ್ನು ನಿರಂತರವಾಗಿ ಮಾಡುತ್ತಿದೆ. ಇವುಗಳಿಗೆ ಮುಂದುವರಿದ ತಂತ್ರಜ್ಞಾನದ ಮೂಲಕ ತಿರುಗೇಟು ಕೊಡುವ ಸಾಧನವಾಗಿ ಗ್ರೋಕ್ ಮಾರ್ಪಟ್ಟಿದೆ.

ಮನುಷ್ಯರು ಐಟಿ ಸೆಲ್‌ ಸುದ್ದಿಗಳ ಸತ್ಯಾನ್ವೇಷಣೆ ಮಾಡಿ ಅದಕ್ಕೆ ತಿರುಗೇಟು ನೀಡುವಾಗ ಸಮಯ ತೆಗೆದುಕೊಳ್ಳುತ್ತದೆ. ಆದರೆ, ಗ್ರೋಕ್‌ ತಕ್ಷಣ ನಿಖರ ಮತ್ತು ವಿವರವಾದ ಮಾಹಿತಿ ನೀಡುತ್ತಿರುವುದು ಐಟಿ ಸೆಲ್‌ ಪ್ರೊಪಗಂಡಗಳಿಗೆ ಸವಾಲಾಗಿದೆ.

ಜನರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ವೇದಿಕೆಯಾಗಿದ್ದ ಟ್ವಿಟ್ಟರ್ ಅನ್ನು ಬಂಡವಾಳಶಾಹಿ ಉದ್ಯಮಿ ಎಲಾನ್‌ ಮಸ್ಕ್‌ ವಶಪಡಿಸಿಕೊಂಡು ಎಕ್ಸ್ ಎಂದು ನಾಮಕರಣ ಮಾಡಿದಾಗ, ಜಾಗತಿಕವಾಗಿ ಒಂದು ವಿಭಾಗದ ಜನರು ಆತಂಕ ವ್ಯಕ್ತಪಡಿಸಿದ್ದರು.

ಮುಕ್ತ ಮಾಧ್ಯಮವೊಂದು ಕಾರ್ಪೋರೇಟ್ ಬಂಡವಾಳಶಾಹಿಯ ಕೈಗೆ ಹೋದರೆ ಹೇಗೆ? ಎಂದು ಕಳವಳ ವ್ಯಕ್ತಪಡಿಸಿದ್ದರು. ಆಗ ಈ ಪ್ರೊಪಗಂಡ ಐಟಿ ಸೆಲ್‌ನವರು ಮಸ್ಕ್‌ ಪರ ವಕಾಲತ್ತು ವಹಿಸಿದ್ದರು. ಈಗ ಅದೇ ಎಲಾನ್‌ ಮಸ್ಕ್‌ನ, ಅದರಲ್ಲೂ ಎಕ್ಸ್‌ನ ಗ್ರೋಕ್‌ ‘ಹಿಂದುತ್ವ ಪ್ರೊಪಗಂಡದ ನಿದ್ದೆಗೆಡಿಸಿರುವುದು ಆಶ್ಚರ್ಯ ತರಿಸಿದೆ.

ಎಐ ಗ್ರೋಕ್‌ ವಿರುದ್ದ ಹಿಂದೂ ವಿರೋಧಿ, ಪಕ್ಷಪಾತದ ಆರೋಪ

ಬಹಳ ಹಾಸ್ಯಾಸ್ಪದ ವಿಷಯವೆಂದರೆ, ಗ್ರೋಕ್ ಐಟಿ ಸೆಲ್‌ ಪ್ರೊಪಗಂಡಗಳ ಬಣ್ಣ ಬಯಲು ಮಾಡಲು ಶುರು ಮಾಡಿದ್ದೇ ತಡ, ಅದೂ ಕೂಡ ಹಿಂದೂ ವಿರೋಧಿ ಎನಿಸಿಕೊಂಡಿದೆ. ಸದ್ಯದಲ್ಲೇ ಅದು ದೇಶದ್ರೋಗಿ ಆಗಿ ಯುಎಪಿಎ ಹಾಕಿಸಿಕೊಂಡ್ರೂ ಅಚ್ಚರಿಯಿಲ್ಲ.

ಗಮನಾರ್ಹ ವಿಷಯವೆಂದರೆ, ಎಲಾನ್‌ ಮಸ್ಕ್‌ ಟ್ವಿಟ್ಟರ್ ವಶಪಡಿಸಿಕೊಂಡಾಗ ಬೆಂಬಲಿಸಿದ ಜನರು, ಈಗ ಅದೇ ಎಲಾನ್‌ ಮಸ್ಕ್‌ನ ಗ್ರೋಕ್‌ ವಿರುದ್ದ ತಿರುಗಿ ಬಿದ್ದಿದ್ದಾರೆ. ಗ್ರೋಕ್‌ ಭಾರತ ವಿರೋಧಿ ವಿದೇಶಿ ಶಕ್ತಿಗಳ ಪಿತೂರಿಯ ಭಾಗ ಎಂದು ಹೇಳುತ್ತಿದ್ದಾರೆ.

ಮುಂದೇನು? ಮಸ್ಕ್ ಮಧ್ಯಪ್ರವೇಶಿಸುತ್ತಾರಾ?

ಇತರ ಸಂದರ್ಭಗಳಲ್ಲಿ ಮಾಡಿದಂತೆ, ಮಸ್ಕ್ ತನ್ನ ಬಲಪಂಥೀಯ ವಾದಿಗಳನ್ನು ಸಮಾಧಾನಪಡಿಸಲು ಗ್ರೋಕ್‌ನ ಪ್ರತಿಕ್ರಿಯೆಗಳನ್ನು ತಿರುಚುತ್ತಾರೆಯೇ ಎಂದು ಕಾದು ನೋಡಬೇಕಾಗಿದೆ. ಏಕೆಂದರೆ, ಮಸ್ಕ್‌ ಕೂಡ ಅಮೆರಿಕದ ಬಲಪಂಥೀಯವಾದಿ. ವಿಶೇಷವಾಗಿ ಪ್ರಬಲ ಬಲಪಂಥೀಯ, ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಆಪ್ತ. ಟ್ರಂಪ್‌ ನಮ್ಮ ಪ್ರಧಾನಿ ಮೋದಿಯವರ ಆಪ್ತ. ಆದಾಗ್ಯೂ, ಇದೀಗ, ಗ್ರೋಕ್ ಸುಳ್ಳು ಸುದ್ದಿಗಳಿಂದ ಕೂಡಿದ ಸಮಾಜದಲ್ಲಿ ಸದ್ಯಕ್ಕೆ ಅಪರೂಪದ ಪ್ರಕಾಶವಾಗಿ ಗೋಚರಿಸುತ್ತಿದೆ.

ಪ್ರಸ್ತುತ, ತಂತ್ರಜ್ಞಾನ ಸಾಧನಗಳನ್ನು ಬಳಸಿಕೊಂಡು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಹಿನ್ನೆಲೆ, ಅದಕ್ಕೆ ತಂತ್ರಜ್ಞಾನಗಳನ್ನು ಬಳಸಿಕೊಂಡೇ ತಿರುಗೇಟು ನೀಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಗ್ರೋಕ್‌ ಒಂದು ಉತ್ತಮ ಪ್ರಯತ್ನ ಎನ್ನಬಹುದು.

ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಸುನಿತಾ ವಿಲಿಯಮ್ಸ್, ಬುಚ್‌ ವಿಲ್ಮೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...