Homeಮುಖಪುಟಮತದಾರರ ಗುರುತಿನ ಚೀಟಿ ವಿಚಾರದಲ್ಲಿ ನಮ್ಮ ಸಂಶಯ ನಿಜವಾಗಿದೆ: ಕಾಂಗ್ರೆಸ್

ಮತದಾರರ ಗುರುತಿನ ಚೀಟಿ ವಿಚಾರದಲ್ಲಿ ನಮ್ಮ ಸಂಶಯ ನಿಜವಾಗಿದೆ: ಕಾಂಗ್ರೆಸ್

- Advertisement -
- Advertisement -

ಚುನಾವಣಾ ಆಯೋಗವು ಆಧಾರ್ ಅನ್ನು EPIC ಸಂಖ್ಯೆಗಳೊಂದಿಗೆ ಲಿಂಕ್ ಮಾಡಲು ಪ್ರಾರಂಭಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮತದಾರರ ಪಟ್ಟಿಗಳ “ಅನುಮಾನಾಸ್ಪದ ಮತ್ತು ಸಂದೇಹಾಸ್ಪದ ಸ್ವರೂಪದ” ಬಗ್ಗೆ ಪಕ್ಷ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿದ ಆರೋಪಗಳ “ಸ್ಪಷ್ಟ ಸ್ವೀಕಾರ” ಇದಾಗಿದೆ ಎಂದು ಮಂಗಳವಾರ ಪ್ರತಿಪಾದಿಸಿದೆ. ನಮ್ಮ ಸಂಶಯ ನಿಜವಾಗಿದೆ

ಮತದಾರರ ಫೋಟೋ ಗುರುತಿನ ಚೀಟಿ(EPIC )ಯನ್ನು ಚುನಾವಣಾ ಆಯೋಗವು ನೀಡುತ್ತದೆ. ಇದು ಭಾರತೀಯ ನಾಗರಿಕರು ಚುನಾವಣೆಯಲ್ಲಿ ಮತ ಚಲಾಯಿಸಲು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. EPIC ಸಂಖ್ಯೆ ಎಂದರೆ ಮತದಾರರ ಗುರುತಿನ ಚೀಟಿಯ ಸಂಖ್ಯೆಯಾಗಿದೆ. ಆಧಾರ್ ಕಾರ್ಡ್‌ಗಳನ್ನು ದೇಶದ ಕಲ್ಯಾಣ ಕಾರ್ಯಕ್ರಮಗಳಲ್ಲಿನ ಸೋರಿಕೆಯನ್ನು ಕಡಿಮೆ ಮಾಡಲು 2009 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿತ್ತು. ನಮ್ಮ ಸಂಶಯ ನಿಜವಾಗಿದೆ

EPIC ಸಂಖ್ಯೆಗಳೊಂದಿಗೆ ಆಧಾರ್ ಅನ್ನು ಲಿಂಕ್ ಮಾಡುವ ಕುರಿತು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರದೊಂದಿಗೆ ತಾಂತ್ರಿಕ ಸಮಾಲೋಚನೆಗಳನ್ನು ಪ್ರಾರಂಭಿಸುವುದಾಗಿ ಚುನಾವಣಾ ಆಯೋಗ ಮಂಗಳವಾರ ಹೇಳಿತ್ತು. ಇತರ ನಂತರ ಕಾಂಗ್ರೆಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ.

“2024 ರ ಮಹಾರಾಷ್ಟ್ರ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯ ಸಂಪೂರ್ಣ ಮತದಾರರ ಫೋಟೋ ಪಟ್ಟಿಯನ್ನು ಚುನಾವಣಾ ಆಯೋಗವು ಬಹಿರಂಗಪಡಿಸಬೇಕೆಂದು ನಾವು ಒತ್ತಾಯಿಸುತ್ತಲೇ ಇದ್ದೇವೆ” ಎಂದು ಕಾಂಗ್ರೆಸ್ ಹೇಳಿದೆ.

ವಿಧಾನಸಭಾ ಚುನಾವಣೆಗೆ ನೋಂದಾಯಿತ ಮತದಾರರ ಸಂಖ್ಯೆ (9.7 ಕೋಟಿ) ರಾಜ್ಯದ ವಯಸ್ಕ ಜನಸಂಖ್ಯೆಗಿಂತ (9.5 ಕೋಟಿ) ಹೇಗೆ ಹೆಚ್ಚಾಗಲು ಸಾಧ್ಯ ಎಂಬುದನ್ನು ವಿವರಿಸುವಂತೆ ವಿರೋಧ ಪಕ್ಷವು ಫೆಬ್ರವರಿಯಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.

2024 ರ ಲೋಕಸಭಾ ಚುನಾವಣೆ ಮತ್ತು ಐದು ತಿಂಗಳ ಅಂತರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ರಾಜ್ಯದ ಮತದಾರರ ಪಟ್ಟಿಯನ್ನು ಹಂಚಿಕೊಳ್ಳುವಂತೆಯೂ ಅದು ಚುನಾವಣಾ ಸಮಿತಿಯನ್ನು ಕೇಳಿತ್ತು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಿತು, ನಂತರ ನವೆಂಬರ್‌ನಲ್ಲಿ ರಾಜ್ಯ ಚುನಾವಣೆಗಳು ಅಲ್ಲಿ ನಡೆದಿದ್ದವು.

“ಮಹಾರಾಷ್ಟ್ರ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳ ನಡುವೆ ಕೇವಲ ಐದು ತಿಂಗಳಲ್ಲಿ ದಾಖಲಾದ ಹೊಸ ಮತದಾರರಲ್ಲಿ ಅಸಹಜ ಹೆಚ್ಚಳ ಕಂಡುಬಂದಿದೆ ಎಂಬುದು ಕಾಂಗ್ರೆಸ್ ಪಕ್ಷದ ಪ್ರಮುಖ ಆರೋಪವಾಗಿತ್ತು, ಅಂದರೆ ಇವೆಲ್ಲವೂ ನಕಲಿ ಮತದಾರರು ಎಂದು ಸೂಚಿಸುತ್ತದೆ” ಎಂದು ಕಾಂಗ್ರೆಸ್‌ನ ಪ್ರಮುಖ ನಾಯಕರು ಮತ್ತು ತಜ್ಞರು ಮಂಗಳವಾರ ಹೇಳಿದ್ದಾರೆ.

ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುವುದಾಗಿ ಪಕ್ಷ ಹೇಳಿದೆ. “ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿ, ಒಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ನಿರಾಕರಿಸದಂತೆ ಮತ್ತು ಈ ಪ್ರಕ್ರಿಯೆಯ ಮೂಲಕ ಯಾವುದೇ ಒಬ್ಬ ಮತದಾರನ ಗೌಪ್ಯತೆಯನ್ನು ಉಲ್ಲಂಘಿಸದಂತೆ ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಕಾಂಗ್ರೆಸ್ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಯಾವುದೇ ಭಾರತೀಯರು ತಮ್ಮ ಮತದಿಂದ ವಂಚಿತರಾಗದಂತೆ ಚುನಾವಣಾ ಆಯೋಗ ಖಚಿತಪಡಿಸಿಕೊಳ್ಳಬೇಕು ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ. ತಮ್ಮ ಪಕ್ಷ ಮತ್ತು ವಿರೋಧ ಪಕ್ಷದ ಮೈತ್ರಿಯಾದ ಇಂಡಿಯಾ ಮೈತ್ರಿಯು “ಅಸಹಜವಾಗಿ ಹೆಚ್ಚಿನ ಸೇರ್ಪಡೆಗಳು, ಅನಿರೀಕ್ಷಿತ ಅಳಿಸುವಿಕೆಗಳು ಮತ್ತು ಒಂದೇ ರೀತಿಯ ಮತದಾರರ ಗುರುತಿನ ಚೀಟಿ ಸಂಖ್ಯೆಗಳು ಸೇರಿದಂತೆ ಮತದಾರರ ಪಟ್ಟಿಗಳ ಸಮಸ್ಯೆಗಳ ಬಗ್ಗೆ ಪದೇ ಪದೇ ಧ್ವನಿ ಎತ್ತುತ್ತಿದೆ ಎಂದು ಅವರು ಹೇಳಿದ್ದಾರೆ.

“ಆಧಾರ್ ನಕಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗಳನ್ನು ಪರಿಹರಿಸಬಹುದಾದರೂ, ಬಡವರು ಮತ್ತು ಅತ್ಯಂತ ಅಂಚಿನಲ್ಲಿರುವವರು ಲಿಂಕ್ ಮಾಡುವ ಪ್ರಕ್ರಿಯೆಯಲ್ಲಿ ತೊಂದರೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು” ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

“ಈಗ ಚುನಾವಣಾ ಆಯೋಗವು ಸಮಸ್ಯೆಯನ್ನು ಒಪ್ಪಿಕೊಂಡಿರುವುದರಿಂದ, ಸೇರ್ಪಡೆ ಮತ್ತು ಅಳಿಸುವಿಕೆಯ ಸಮಸ್ಯೆಯನ್ನು ಸಹ ಪರಿಹರಿಸಬೇಕು ಎಂಬ ನನ್ನ ಹಿಂದಿನ ಬೇಡಿಕೆಯನ್ನು ನಾನು ಪುನರುಚ್ಚರಿಸುತ್ತೇನೆ. ಮಹಾರಾಷ್ಟ್ರ 2024 ರ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳ ಸಂಪೂರ್ಣ ಮತದಾರರ ಫೋಟೋ ಪಟ್ಟಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಮೂಲಕ ಇದನ್ನು ಪ್ರಾರಂಭಿಸಿ.” ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...