Homeಮುಖಪುಟಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

- Advertisement -
- Advertisement -

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, ಆ ಹಿಂದೂಯೇತರರು ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕೆಂದು ಒತ್ತಾಯಿಸಿದರು” ಎಂದು ನೌಟಿಯಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಶಾಸಕಿಯಾಗಿರುವುದರಿಂದ, ಈ ವಿಷಯದ ಕುರಿತು ಧ್ವನಿ ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ಅದೇ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿವನಿಗೆ ಅರ್ಪಿತವಾದ ಪವಿತ್ರ ಜ್ಯೋತಿರ್ಲಿಂಗವೆಂದು ಪರಿಗಣಿಸಲಾದ ಕೇದಾರನಾಥವು ಚಾರ್ ಧಾಮ್ ಸರ್ಕ್ಯೂಟ್‌ನಲ್ಲಿ ಪ್ರಮುಖ ಸ್ಥಳವಾಗಿದೆ. ಇದರಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಕೂಡ ಸೇರಿವೆ. ವಾರ್ಷಿಕ ತೀರ್ಥಯಾತ್ರೆ ಏಪ್ರಿಲ್ 30 ರಂದು ಪ್ರಾರಂಭವಾಗಲಿದ್ದು, ಕೇದಾರನಾಥದ ಬಾಗಿಲು ಮೇ 2 ರಂದು ತೆರೆಯಲಿದೆ.

ಬಿಜೆಪಿ ಶಾಸಕಿ ಆಶಾ ನೌಟಿಯಾಲ್

ಆದರೆ, ನೌತಿಯಾಲ್ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಣ ಅವರು, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆಯಾಗಿರಲಿ, ಬಿಜೆಪಿ ಪದೇಪದೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ. ಇಂತಹ ಹೇಳಿಕೆಗಳು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಹೊಂದಿವೆ” ಎಂದು ಅವರು ವಾದಿಸಿದರು.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕೂಡ ಬಿಜೆಪಿಯ ವಿಧಾನವನ್ನು ಟೀಕಿಸುತ್ತಾ, “ಬಿಜೆಪಿ ನಾಯಕರು ಸಂವೇದನಾಶೀಲ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ. ಉತ್ತರಾಖಂಡ್ ಒಂದು ದೇವಭೂಮಿ, ಆದ್ದರಿಂದ ನೀವು ಎಷ್ಟು ದಿನ ಎಲ್ಲವನ್ನೂ ಧರ್ಮಕ್ಕೆ ಜೋಡಿಸುತ್ತೀರಿ? ಅವರು ಜನರಿಗೆ ಹೇಳಲು ಬೇರೆ ಏನೂ ಇಲ್ಲದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಬಿಜೆಪಿ ಉತ್ತರಾಖಂಡ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಭಾವನೆಗಳನ್ನು ಪ್ರತಿಬಿಂಬಿಸುವುದರಿಂದ ಪಕ್ಷವು ಅವರ ಹೇಳಿಕೆಗಳಿಗೆ ಬದ್ಧವಾಗಿದೆ ಎಂದು ಹೇಳಿದರು. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ, ಪ್ರತಿ ವರ್ಷ ಲಕ್ಷಾಂತರ ಜನರು ಈ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇವಾಲಯದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಬಗ್ಗೆ ಸ್ಥಳೀಯ ವ್ಯಾಪಾರ ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಮದ್ಯದ ಅಂಗಡಿಗಳು ಸಹ ಇವೆ” ಎಂದು ಅವರು ಹೇಳಿದರು.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...