Homeಮುಖಪುಟಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

- Advertisement -
- Advertisement -

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, ಆ ಹಿಂದೂಯೇತರರು ಅಲ್ಲಿಗೆ ಹೋಗುವುದನ್ನು ನಿಷೇಧಿಸಬೇಕು. ಸ್ಥಳೀಯ ಉದ್ಯಮಿಗಳು ಸಹ ಅಂತಹ ವಿಷಯಗಳನ್ನು ನಿರುತ್ಸಾಹಗೊಳಿಸಬೇಕೆಂದು ಒತ್ತಾಯಿಸಿದರು” ಎಂದು ನೌಟಿಯಾಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ನಾನು ಶಾಸಕಿಯಾಗಿರುವುದರಿಂದ, ಈ ವಿಷಯದ ಕುರಿತು ಧ್ವನಿ ಎತ್ತುವ ಜವಾಬ್ದಾರಿ ನನ್ನ ಮೇಲಿದೆ. ಯಾತ್ರಿಕರು ತಾವು ಬರುವ ಅದೇ ನಂಬಿಕೆಯೊಂದಿಗೆ ಚಾರ್ ಧಾಮ್‌ನಿಂದ ಹಿಂತಿರುಗಬೇಕು” ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಶಿವನಿಗೆ ಅರ್ಪಿತವಾದ ಪವಿತ್ರ ಜ್ಯೋತಿರ್ಲಿಂಗವೆಂದು ಪರಿಗಣಿಸಲಾದ ಕೇದಾರನಾಥವು ಚಾರ್ ಧಾಮ್ ಸರ್ಕ್ಯೂಟ್‌ನಲ್ಲಿ ಪ್ರಮುಖ ಸ್ಥಳವಾಗಿದೆ. ಇದರಲ್ಲಿ ಬದರಿನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ಕೂಡ ಸೇರಿವೆ. ವಾರ್ಷಿಕ ತೀರ್ಥಯಾತ್ರೆ ಏಪ್ರಿಲ್ 30 ರಂದು ಪ್ರಾರಂಭವಾಗಲಿದ್ದು, ಕೇದಾರನಾಥದ ಬಾಗಿಲು ಮೇ 2 ರಂದು ತೆರೆಯಲಿದೆ.

ಬಿಜೆಪಿ ಶಾಸಕಿ ಆಶಾ ನೌಟಿಯಾಲ್

ಆದರೆ, ನೌತಿಯಾಲ್ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸೂರ್ಯಕಾಂತ್ ಧಸ್ಮಣ ಅವರು, “ಮಹಾ ಕುಂಭ, ಹೋಳಿ, ಜುಮ್ಮೆ ಕಿ ನಮಾಜ್ ಅಥವಾ ಚಾರ್ ಧಾಮ್ ಯಾತ್ರೆಯಾಗಿರಲಿ, ಬಿಜೆಪಿ ಪದೇಪದೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯವನ್ನು ಹಾಳುಮಾಡುತ್ತಿದೆ. ಇದು ಅವರ ರಾಷ್ಟ್ರೀಯ ಕಾರ್ಯಸೂಚಿಯಾಗಿದೆ. ಇಂತಹ ಹೇಳಿಕೆಗಳು ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಹೊಂದಿವೆ” ಎಂದು ಅವರು ವಾದಿಸಿದರು.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಕೂಡ ಬಿಜೆಪಿಯ ವಿಧಾನವನ್ನು ಟೀಕಿಸುತ್ತಾ, “ಬಿಜೆಪಿ ನಾಯಕರು ಸಂವೇದನಾಶೀಲ ಹೇಳಿಕೆಗಳನ್ನು ನೀಡುವುದು ಅಭ್ಯಾಸವಾಗಿದೆ. ಉತ್ತರಾಖಂಡ್ ಒಂದು ದೇವಭೂಮಿ, ಆದ್ದರಿಂದ ನೀವು ಎಷ್ಟು ದಿನ ಎಲ್ಲವನ್ನೂ ಧರ್ಮಕ್ಕೆ ಜೋಡಿಸುತ್ತೀರಿ? ಅವರು ಜನರಿಗೆ ಹೇಳಲು ಬೇರೆ ಏನೂ ಇಲ್ಲದ ಕಾರಣ ಹೀಗೆಲ್ಲಾ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಈ ಮಧ್ಯೆ, ಬಿಜೆಪಿ ಉತ್ತರಾಖಂಡ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಅವರು ನೌಟಿಯಾಲ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹಿಂದೂ ಭಾವನೆಗಳನ್ನು ಪ್ರತಿಬಿಂಬಿಸುವುದರಿಂದ ಪಕ್ಷವು ಅವರ ಹೇಳಿಕೆಗಳಿಗೆ ಬದ್ಧವಾಗಿದೆ ಎಂದು ಹೇಳಿದರು. “ಈ ನಾಲ್ಕು ತೀರ್ಥಯಾತ್ರೆಗಳು ಸನಾತನ ಧರ್ಮದಲ್ಲಿ ಮುಖ್ಯವಾಗಿವೆ, ಪ್ರತಿ ವರ್ಷ ಲಕ್ಷಾಂತರ ಜನರು ಈ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದೇವಾಲಯದ ಬಳಿ ಮಾಂಸ ಮತ್ತು ಮದ್ಯ ಮಾರಾಟದ ಬಗ್ಗೆ ಸ್ಥಳೀಯ ವ್ಯಾಪಾರ ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಅವರು ಆರೋಪಿಸಿದರು. “ಈ ಪವಿತ್ರ ಧಾಮದಲ್ಲಿ ಅಂತಹ ವ್ಯವಹಾರಗಳನ್ನು ನಡೆಸುವುದು ತಪ್ಪು. ಇತರ ವ್ಯವಹಾರಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಮದ್ಯದ ಅಂಗಡಿಗಳು ಸಹ ಇವೆ” ಎಂದು ಅವರು ಹೇಳಿದರು.

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...