Homeಮುಖಪುಟಮಣಿಪುರದಲ್ಲಿ ಮತ್ತೆ ಘರ್ಷಣೆ | ಒಬ್ಬ ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಮತ್ತೆ ಘರ್ಷಣೆ | ಒಬ್ಬ ಸಾವು, ಹಲವರಿಗೆ ಗಾಯ

- Advertisement -
- Advertisement -

ಮಂಗಳವಾರ ಮಣಿಪುರದ ಚುರಾಚಂದ್‌ಪುರದ ಹೊರವಲಯದಲ್ಲಿ ಹ್ಮಾರ್ ಮತ್ತು ಝೋಮಿ ಬುಡಕಟ್ಟು ಜನಾಂಗದವರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದವು. ಈ ವೇಳೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಲಾಲ್ರೋಪುಯಿ ಪಖುಮಾತೆ (53) ಎಂದು ಗುರುತಿಸಲಾಗಿದೆ. ಹ್ಮಾರ್ ಗುಂಪುಗಳು ತಮ್ಮ ಸಮುದಾಯದ ಧ್ವಜವನ್ನು ಹಾರಿಸುವುದನ್ನು ಜೋಮಿ ಬಣ ವಿರೋಧಿಸಿದಾಗ ಹಿಂಸಾಚಾರ ಭುಗಿಲೆದ್ದಿತು ಎಂದು ವರದಿ ಹೇಳಿವೆ. ಮಣಿಪುರದಲ್ಲಿ ಮತ್ತೆ ಘರ್ಷಣೆ

ವಾಗ್ವಾದ ಪ್ರಾರಂಭವಾಗುತ್ತಿದ್ದಂತೆ ಲಾಠಿಗಳಿಂದ ಶಸ್ತ್ರಸಜ್ಜಿತರಾದ ಗುಂಪು ಕಲ್ಲು ತೂರಾಟದಲ್ಲಿ ತೊಡಗಿದ್ದು, ಇದರಿಂದಾಗಿ ಭದ್ರತಾ ಸಿಬ್ಬಂದಿಗಳು ಜನಸಮೂಹವನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಮತ್ತು ಗಾಳಿಯಲ್ಲಿ ಹಲವಾರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮತ್ತೆ ಘರ್ಷಣೆ

ಭಾನುವಾರ ಝೆನ್‌ಹಾಂಗ್‌ನಲ್ಲಿ ಹ್ಮಾರ್ ಇನ್‌ಪುಯಿ ಪ್ರಧಾನ ಕಾರ್ಯದರ್ಶಿ ರಿಚರ್ಡ್ ಹ್ಮರ್ ಮೇಲೆ ದಾಳಿ ನಡೆಸಿದ ನಂತರ ಚುರಾಚಂದ್‌ಪುರದಲ್ಲಿ ಕರ್ಫ್ಯೂ ವಿಧಿಸಲಾಯಿತು, ಇದು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು ಎಂದು ವರದಿಯಾಗಿದೆ. ಮಂಗಳವಾರ, ಹ್ಮಾರ್ ಇನ್‌ಪುಯಿ ಮತ್ತು ಝೋಮಿ ಕೌನ್ಸಿಲ್ ಬಂದ್‌ ತೆಗೆದುಹಾಕಲು ಶಾಂತಿ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ.

ಮತ್ತೆ ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ, ಜೋಮಿ ವಿದ್ಯಾರ್ಥಿ ಒಕ್ಕೂಟವು ಬುಧವಾರದಿಂದ “ಅನಿರ್ದಿಷ್ಟಾವಧಿ ತುರ್ತು ಬಂದ್” ಘೋಷಿಸಿದ್ದು, ಈ ಪ್ರದೇಶದಲ್ಲಿನ ಅಸ್ಥಿರ ಪರಿಸ್ಥಿತಿಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಎಲ್ಲಾ ಸಾಮಾನ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ. ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಟ್ಟಿರುತ್ತವೆ. ಎಲ್ಲಾ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಸಹ ಮುಚ್ಚಲ್ಪಟ್ಟಿರುತ್ತವೆ. ಎಲ್ಲಾ ಜನರು ತಮ್ಮ ಮನೆಗಳಲ್ಲಿಯೇ ಇರಬೇಕೆಂದು ನಾವು ಸಲಹೆ ನೀಡುತ್ತೇವೆ. ಪರಿಸ್ಥಿತಿ ಸುಧಾರಿಸುವವರೆಗೆ ಈ ತುರ್ತು ಬಂದ್ ಜಾರಿಯಲ್ಲಿರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಈ ಮಧ್ಯೆ, ಜಿಲ್ಲಾಡಳಿತವು ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದೆ. “ಎಲ್ಲಾ ವ್ಯಕ್ತಿಗಳು, ಸಮುದಾಯ ಮುಖಂಡರು ಮತ್ತು ಗುಂಪುಗಳು ಮತ್ತಷ್ಟು ಹಿಂಸಾಚಾರದಿಂದ ದೂರವಿರಬೇಕು ಮತ್ತು ಶಾಂತಿ ಮತ್ತು ಸಾಮರಸ್ಯಕ್ಕಾಗಿ ಕೆಲಸ ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಧರುಣ್ ಕುಮಾರ್ ಎಸ್ ಹೇಳಿದ್ದಾರೆ. ಕಾನೂನನ್ನು ಕೈಗೆತ್ತಿಕೊಳ್ಳುವ ಯಾವುದೇ ಪ್ರಯತ್ನವು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಗುಂಪು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿ ನೀಡುವುದಿಲ್ಲ ಮತ್ತು ಅಂತಹ ಯಾವುದೇ ಕೃತ್ಯಗಳನ್ನು ನಡೆಸಿದರೆ ಕಠಿಣ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅವರು ಸಮುದಾಯದ ನಾಯಕರು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ತೊಡಗಿಸಿಕೊಳ್ಳುವಂತೆ ಕೇಳಿಕೊಂಡಿದ್ದು, ಜಿಲ್ಲಾಡಳಿತವು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಕಲ್ಲು ತೂರಾಟದಲ್ಲಿ ತೊಡಗಿದ್ದ ಗುಂಪುಗಳನ್ನು ಚದುರಿಸಲು ಭದ್ರತಾ ಪಡೆಗಳು ಧ್ವಜ ಮೆರವಣಿಗೆಗಳನ್ನು ನಡೆಸಿ, ಅಶ್ರುವಾಯು ಮತ್ತು ಎಚ್ಚರಿಕೆ ಗುಂಡು ಹಾರಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ. ಗುಂಪಿನಲ್ಲಿದ್ದ ಕೆಲವು ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಆದರೆ ಅದಕ್ಕೆ ಯಾರು ಹೊಣೆಗಾರರು ಎಂಬುದು ಸ್ಪಷ್ಟವಾಗಿಲ್ಲ. ಗಲಭೆಯಲ್ಲಿ ಹಲವಾರು ಆಸ್ತಿಗಳನ್ನು ಧ್ವಂಸಗೊಳಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

‘ಇಸ್ರೇಲ್ ಸರ್ಕಾರಕ್ಕೆ ಮಾನವೀಯತೆ ಏನೇನೂ ಅಲ್ಲ..’; ಗಾಜಾ ಮೇಲಿನ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...