Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

- Advertisement -
- Advertisement -

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ

ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರ ಪುತ್ರಿ ನೇಹಾ ಶಾ ಅವರು ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅದಾಗ್ಯೂ, ಉಮೇಶ್ ಸಿಂಗ್ ಅವರನ್ನು ಸೋನ್‌ಭದ್ರ ಜಿಲ್ಲಾ ಜೈಲಿಗೆ ವರ್ಗಾಯಿಸಲಾಗಿದ್ದು, ಅವರ ಬದಲಿಗೆ ಸೌರಭ್ ಶ್ರೀವಾಸ್ತವ ಅವರನ್ನು ತಾತ್ಕಾಲಿಕವಾಗಿ ವಿಶೇಷ ಕರ್ತವ್ಯದ ಮೇಲೆ ವಾರಣಾಸಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರು ಉಮೇಶ್ ಸಿಂಗ್ ವಿರುದ್ಧ ಕಿರುಕುಳ ಆರೋಪ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ವಿಷಯವು ಗಮನ ಸೆಳೆಯಿತು. ವಿಡಿಯೋ ಕಾಣಿಸಿಕೊಂಡ ನಂತರ, ಅವರನ್ನು ಕೂಡಾ ನೈನಿ ಜಿಲ್ಲಾ ಜೈಲಿಗೆ ವರ್ಗಾಯಿಸಲಾಯಿತು ಎಂದು ವರದಿಯಾಗಿದೆ.

ಮಾರ್ಚ್ 18 ರಂದು ಡೈರೆಕ್ಟರ್ ಜನರಲ್ (ಜೈಲು) ಪಿವಿ ರಾಮಶಾಸ್ತ್ರಿ ಹೊರಡಿಸಿದ ಆದೇಶದ ಪ್ರಕಾರ, ಉಮೇಶ್ ಸಿಂಗ್ ಅವರನ್ನು ಯಾವುದೇ ಹೆಚ್ಚುವರಿ ಸಂಬಳ ಅಥವಾ ಭತ್ಯೆಗಳಿಲ್ಲದೆ ಸೋನ್‌ಭದ್ರದಲ್ಲಿ ವಿಶೇಷ ಕರ್ತವ್ಯದಲ್ಲಿ ಇರಿಸಲಾಗಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೇಹಾ ಶಾ ಅವರ ತಾಯಿ, ಪರಿಶಿಷ್ಟ ಜಾತಿಯ ಅಧಿಕಾರಿಯಾಗಿದ್ದು, ಉಮೇಶ್ ಸಿಂಗ್ ಅವರಿಂದ ತಿಂಗಳುಗಟ್ಟಲೆ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸಿದ್ದಾರೆ ಎಂದು ನೇಹಾ ಶಾ ಅವರ ದೂರಿನಲ್ಲಿ ಆರೋಪಿಸಲಾಗಿದೆ.

“ಅವರು ನನ್ನ ತಾಯಿಯನ್ನು ಆಗಾಗ್ಗೆ ಅವಮಾನಿಸುತ್ತಿದ್ದರು, ಜಾತಿ ಆಧಾರಿತ ನಿಂದನೆಗಳನ್ನು ಬಳಸುತ್ತಿದ್ದರು ಮತ್ತು ಅವರ ಕಚೇರಿಯಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಉಮೇಶ್ ಸಿಂಗ್ ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ನನ್ನ ತಾಯಿಯನ್ನು ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡುವಂತೆ ಒತ್ತಡ ಹೇರಿದ್ದರು, ಜೊತೆಗೆ ಮಹಿಳಾ ಕೈದಿಗಳನ್ನು ಶೋಷಣೆಗೆ ಒಳಪಡಿಸುವಂತೆ ಒತ್ತಾಯಿಸಿದ್ದರು” ಎಂದು ನೇಹಾ ಅವರು ಆರೋಪಿಸಿದ್ದಾರೆ.

“ಇದನ್ನು ನನ್ನ ತಾಯಿ ವಿರೋಧಿಸಿದಾಗ, ಅವರು ನನ್ನ ತಾಯಿಯ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ, ನಮ್ಮ ಕುಟುಂಬಕ್ಕೆ ಹಾನಿ ಮಾಡುವುದಾಗಿ ಮತ್ತು ನಮ್ಮ ಜೀವವನ್ನು ಸಹ ತೆಗೆಯುವುದಾಗಿ ಬೆದರಿಕೆ ಹಾಕಿದರು” ಎಂದು ಅವರು ಆರೋಪಿಸಿದ್ದಾರೆ.

ಆರೋಪಿ ಉಮೇಶ್ ಸಿಂಗ್ ಈ ಹಿಂದೆ ಕೂಡಾ ದುಷ್ಕೃತ್ಯ ಎಸಗಿದ್ದಾರೆ ಎಂದು ನೇಹಾ ಅವರು ಹೇಳಿಕೊಂಡಿದ್ದಾರೆ. “ಅವರು ಮಾಜಿ ಉಪ ಜೈಲರ್ ರತನ್ ಪ್ರಿಯಾ ಅವರೊಂದಿಗೂ ಕೂಡಾ ಅದೇ ರೀತಿ ಮಾಡಿದ್ದರು. ಈ ಬಗ್ಗೆ ನೀವು ಅವರನ್ನು ಕೇಳಬಹುದು” ಎಂದು ಅವರು ತಮ್ಮ ದೂರಿನಲ್ಲಿ ಬರೆದಿದ್ದಾರೆ. ಅಷ್ಟೆ ಅಲ್ಲದೆ, ಉಮೇರ್ಶ ಸಿಂಗ್ ತನ್ನ ತಾಯಿಯನ್ನು ಆತ್ಮಹತ್ಯೆಗೆ ಪ್ರೇರೇಪಿಸಲು ಪ್ರಯತ್ನಿಸಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ತಾನು 2027 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ, ಜೈಲು ಸಚಿವರಾಗುವುದಾಗಿ ನನ್ನ ತಾಯಿಗೆ ಪಾಠ ಕಲಿಸುವುದಾಗಿ ಹೇಳಿದ್ದರು. ಉಮೇಶ್ ಸಿಂಗ್ ಜೈಲಿನೊಳಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮತ್ತು ಮಾದಕವಸ್ತು ಕಳ್ಳಸಾಗಣೆ ನಡೆಯಲು ಅವಕಾಶ ನೀಡಿದ್ದಾರೆ. ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ ಜೈಲಿನಲ್ಲಿ ಮಾದಕವಸ್ತು ಮಾರಾಟವಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...