Homeದಲಿತ್ ಫೈಲ್ಸ್ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

- Advertisement -
- Advertisement -

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ

ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರ ಪುತ್ರಿ ನೇಹಾ ಶಾ ಅವರು ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಅದಾಗ್ಯೂ, ಉಮೇಶ್ ಸಿಂಗ್ ಅವರನ್ನು ಸೋನ್‌ಭದ್ರ ಜಿಲ್ಲಾ ಜೈಲಿಗೆ ವರ್ಗಾಯಿಸಲಾಗಿದ್ದು, ಅವರ ಬದಲಿಗೆ ಸೌರಭ್ ಶ್ರೀವಾಸ್ತವ ಅವರನ್ನು ತಾತ್ಕಾಲಿಕವಾಗಿ ವಿಶೇಷ ಕರ್ತವ್ಯದ ಮೇಲೆ ವಾರಣಾಸಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ

ಡೆಪ್ಯೂಟಿ ಜೈಲರ್ ಮೀನಾ ಕನೋಜಿಯಾ ಅವರು ಉಮೇಶ್ ಸಿಂಗ್ ವಿರುದ್ಧ ಕಿರುಕುಳ ಆರೋಪ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ವಿಷಯವು ಗಮನ ಸೆಳೆಯಿತು. ವಿಡಿಯೋ ಕಾಣಿಸಿಕೊಂಡ ನಂತರ, ಅವರನ್ನು ಕೂಡಾ ನೈನಿ ಜಿಲ್ಲಾ ಜೈಲಿಗೆ ವರ್ಗಾಯಿಸಲಾಯಿತು ಎಂದು ವರದಿಯಾಗಿದೆ.

ಮಾರ್ಚ್ 18 ರಂದು ಡೈರೆಕ್ಟರ್ ಜನರಲ್ (ಜೈಲು) ಪಿವಿ ರಾಮಶಾಸ್ತ್ರಿ ಹೊರಡಿಸಿದ ಆದೇಶದ ಪ್ರಕಾರ, ಉಮೇಶ್ ಸಿಂಗ್ ಅವರನ್ನು ಯಾವುದೇ ಹೆಚ್ಚುವರಿ ಸಂಬಳ ಅಥವಾ ಭತ್ಯೆಗಳಿಲ್ಲದೆ ಸೋನ್‌ಭದ್ರದಲ್ಲಿ ವಿಶೇಷ ಕರ್ತವ್ಯದಲ್ಲಿ ಇರಿಸಲಾಗಿದೆ. ನೇಮಕಾತಿ ತಾತ್ಕಾಲಿಕವಾಗಿದ್ದು, ಮುಂದಿನ ಸೂಚನೆ ಬರುವವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನೇಹಾ ಶಾ ಅವರ ತಾಯಿ, ಪರಿಶಿಷ್ಟ ಜಾತಿಯ ಅಧಿಕಾರಿಯಾಗಿದ್ದು, ಉಮೇಶ್ ಸಿಂಗ್ ಅವರಿಂದ ತಿಂಗಳುಗಟ್ಟಲೆ ನಿರಂತರ ಮಾನಸಿಕ ಮತ್ತು ದೈಹಿಕ ಕಿರುಕುಳ ಅನುಭವಿಸಿದ್ದಾರೆ ಎಂದು ನೇಹಾ ಶಾ ಅವರ ದೂರಿನಲ್ಲಿ ಆರೋಪಿಸಲಾಗಿದೆ.

“ಅವರು ನನ್ನ ತಾಯಿಯನ್ನು ಆಗಾಗ್ಗೆ ಅವಮಾನಿಸುತ್ತಿದ್ದರು, ಜಾತಿ ಆಧಾರಿತ ನಿಂದನೆಗಳನ್ನು ಬಳಸುತ್ತಿದ್ದರು ಮತ್ತು ಅವರ ಕಚೇರಿಯಲ್ಲಿ ಅವರ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಉಮೇಶ್ ಸಿಂಗ್ ಅಶ್ಲೀಲ ಸನ್ನೆಗಳನ್ನು ಮಾಡುತ್ತಿದ್ದರು. ನನ್ನ ತಾಯಿಯನ್ನು ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡುವಂತೆ ಒತ್ತಡ ಹೇರಿದ್ದರು, ಜೊತೆಗೆ ಮಹಿಳಾ ಕೈದಿಗಳನ್ನು ಶೋಷಣೆಗೆ ಒಳಪಡಿಸುವಂತೆ ಒತ್ತಾಯಿಸಿದ್ದರು” ಎಂದು ನೇಹಾ ಅವರು ಆರೋಪಿಸಿದ್ದಾರೆ.

“ಇದನ್ನು ನನ್ನ ತಾಯಿ ವಿರೋಧಿಸಿದಾಗ, ಅವರು ನನ್ನ ತಾಯಿಯ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ, ನಮ್ಮ ಕುಟುಂಬಕ್ಕೆ ಹಾನಿ ಮಾಡುವುದಾಗಿ ಮತ್ತು ನಮ್ಮ ಜೀವವನ್ನು ಸಹ ತೆಗೆಯುವುದಾಗಿ ಬೆದರಿಕೆ ಹಾಕಿದರು” ಎಂದು ಅವರು ಆರೋಪಿಸಿದ್ದಾರೆ.

ಆರೋಪಿ ಉಮೇಶ್ ಸಿಂಗ್ ಈ ಹಿಂದೆ ಕೂಡಾ ದುಷ್ಕೃತ್ಯ ಎಸಗಿದ್ದಾರೆ ಎಂದು ನೇಹಾ ಅವರು ಹೇಳಿಕೊಂಡಿದ್ದಾರೆ. “ಅವರು ಮಾಜಿ ಉಪ ಜೈಲರ್ ರತನ್ ಪ್ರಿಯಾ ಅವರೊಂದಿಗೂ ಕೂಡಾ ಅದೇ ರೀತಿ ಮಾಡಿದ್ದರು. ಈ ಬಗ್ಗೆ ನೀವು ಅವರನ್ನು ಕೇಳಬಹುದು” ಎಂದು ಅವರು ತಮ್ಮ ದೂರಿನಲ್ಲಿ ಬರೆದಿದ್ದಾರೆ. ಅಷ್ಟೆ ಅಲ್ಲದೆ, ಉಮೇರ್ಶ ಸಿಂಗ್ ತನ್ನ ತಾಯಿಯನ್ನು ಆತ್ಮಹತ್ಯೆಗೆ ಪ್ರೇರೇಪಿಸಲು ಪ್ರಯತ್ನಿಸಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ತಾನು 2027 ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ, ಜೈಲು ಸಚಿವರಾಗುವುದಾಗಿ ನನ್ನ ತಾಯಿಗೆ ಪಾಠ ಕಲಿಸುವುದಾಗಿ ಹೇಳಿದ್ದರು. ಉಮೇಶ್ ಸಿಂಗ್ ಜೈಲಿನೊಳಗೆ ದೊಡ್ಡ ಪ್ರಮಾಣದ ಭ್ರಷ್ಟಾಚಾರ ಮತ್ತು ಮಾದಕವಸ್ತು ಕಳ್ಳಸಾಗಣೆ ನಡೆಯಲು ಅವಕಾಶ ನೀಡಿದ್ದಾರೆ. ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ ಜೈಲಿನಲ್ಲಿ ಮಾದಕವಸ್ತು ಮಾರಾಟವಾಗುತ್ತಿರುವುದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.” ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...