Homeಚಳವಳಿಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

ಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

- Advertisement -
- Advertisement -

ಕೇಂದ್ರ ಕಾರ್ಮಿಕ ಸಂಘಗಳು, ಸ್ವತಂತ್ರ ವಲಯ ಒಕ್ಕೂಟಗಳು ಮತ್ತು ಸಂಘಗಳ ವೇದಿಕೆಯು ಮೇ 20 ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಉದ್ದೇಶಿತ ಮುಷ್ಕರಕ್ಕೂ ಮೊದಲು ದೇಶಾದ್ಯಂತ ಎರಡು ತಿಂಗಳ ಕಾಲದ ಪ್ರಚಾರ ಅಭಿಯಾನವನ್ನು ನಡೆಸಲು ದೇಶದ ಕಾರ್ಮಿಕರಿಗೆ ಕರೆ ನೀಡಿದೆ. ಮಾರ್ಚ್ 18ರ ಗುರುವಾರ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಮಿಕರ ರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಕಾರ್ಮಿಕ ಹೋರಾಟ

ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು, ಭಾರತೀಯ ಕಾರ್ಮಿಕ ಸಮ್ಮೇಳನ(ಐಎಲ್‍ಸಿ)ವನ್ನು ಆಯೋಜಿಸಬೇಕು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸಾರ್ವಜನಿಕ ಸೇವೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ದೆಹಲಿಯ ಸಮಾವೇಶ ಆಗ್ರಹಿಸಿದೆ. ದೇಶದ ಹೆಚ್ಚಿನ ಎಲ್ಲಾ ವಲಯದ ಕಾರ್ಮಿಕ ಮುಖಂಡರು ಮತ್ತು ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಕಾರ್ಮಿಕ ಹೋರಾಟ

ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧದ ಪ್ರತಿರೋಧದಲ್ಲಿ ಒಗ್ಗಟ್ಟಿನ ಪ್ರದರ್ಶನಕ್ಕಾಗಿ ನವದೆಹಲಿಯ ಪ್ಯಾರೆಲಾಲ್ ಭವನದಲ್ಲಿ ಎಲ್ಲಾ ರಾಜ್ಯಗಳ ಎಲ್ಲಾ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಮತ್ತು ವಲಯ ಒಕ್ಕೂಟಗಳ ಪ್ರತಿನಿಧಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದರು.

ಕಾರ್ಮಿಕ ಸಂಘಟನೆಗಳು ಸತತವಾಗಿ ಎತ್ತುತ್ತಿರುವ ಬೇಡಿಕೆಗಳಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಉದ್ದೇಶಪೂರ್ವಕವಾಗಿ ಕಿವಿಗೊಡದಿರುವ ಕೇಂದ್ರ ಸರಕಾರದ ನಡೆಗೆ ಖಂಡಿಸಿದ ಕಾರ್ಮಿಕ ಸಂಘಟನೆಗಳು, ಸರಕಾರದ ಇಂತಹ ನೀತಿಗಳ ವಿರುದ್ಧ ಸಾಮೂಹಿಕವಾಗಿ ತಿರಸ್ಕಾರ ವ್ಯಕ್ತಪಡಿಸಿದವು. ಜೊತೆಗೆ ಮೇ 20, 2025 ರಂದು ಒಂದು ದಿನದ ರಾಷ್ಟ್ರೀಯ ಮುಷ್ಕರಕ್ಕಾಗಿ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ನೀಡಿದ ಹೇಳಿಕೆಯಲ್ಲಿ ತಿಳಿಸಿವೆ.

ಸರ್ಕಾರದ ಸವಾಲನ್ನು ಸ್ವೀಕರಿಸಲು ದುಡಿಯುವ ಜನರು ಸಿದ್ಧರಾಗಬೇಕು ಎಂದು ಕರೆ ನೀಡಿರುವ ಸಮಾವೇಶವು, ಮೇ 20 ಕಾರ್ಮಿಕರು ಮತ್ತು ರೈತರ ರಾಷ್ಟ್ರವ್ಯಾಪಿ ನಿರ್ಣಾಯಕ ಹೋರಾಟಗಳ ಸರಣಿಗೆ ಚಾಲನೆ ನೀಡುವ ವೇದಿಕೆಯಾಗಲಿದೆ, ಶೋಷಣೆ, ಆಳವಾಗುತ್ತಿರುವ ಆದಾಯ ಅಸಮಾನತೆ, ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮತ್ತು ಭಾರತದ ಜನರ ಮೇಲೆ ಆಗುತ್ತಿರುವ ಒಟ್ಟಾರೆ ಅನ್ಯಾಯವನ್ನು ಹೊಸ ಶಕ್ತಿಯಿಂದ ಎದುರಿಸಲಾಗುವುದು ಎಂದು ಸಾರಿದೆ.

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವ ತನ್ನ ಬಹುದಿನಗಳ ಆಗ್ರಹವನ್ನು ಪುನರುಚ್ಚರಿಸುವುದರ ಜೊತೆಗೆ, ತನ್ನ 17 ಅಂಶಗಳ ಆಗ್ರಹಗಳ ಪಟ್ಟಿಯನ್ನು ಕಾರ್ಮಿಕರ ರಾಷ್ಟ್ರೀಯ ಸಮಾವೇಶದ ಘೋಷಣೆಯು ಪುನರುಚ್ಚರಿಸಿದೆ. ಅಲ್ಲದೆ ನವ ಉದಾರವಾದದ ವಿನಾಶಕಾರಿ ನೀತಿಗಳಿಗೆ ಪರ್ಯಾಯವನ್ನು ಸಹ ಸೂಚಿಸಿದ ಸಮಾವೇಶವು ಧರ್ಮ, ಪ್ರದೇಶ, ಜಾತಿ, ಸಂಸ್ಕೃತಿ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಕಾರ್ಮಿಕರನ್ನು ವಿಭಜಿಸುವ ಎನ್‍ಡಿಎ ಸರ್ಕಾರದ ಎಲ್ಲಾ ಕೆಟ್ಟ ಪ್ರಯತ್ನಗಳನ್ನು ವಿಫಲಗೊಳಿಸುವುದಾಗಿಯೂ ಸಾರಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...