Homeಕರ್ನಾಟಕರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ...

ರಾಯಚೂರು ಪಿ.ಜಿ ಸೆಂಟರ್‌ನಲ್ಲಿ ಬೋರ್ಡ್‌, ಊಟದ ತಟ್ಟೆ, ಕುಡಿಯುವ ನೀರು ಸಹ ಇಲ್ಲ! : ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಧಿಡೀರ್‌ ಪ್ರತಿಭಟನೆ

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ

- Advertisement -
- Advertisement -

ಹೈದರಾಬಾದ್‌ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ರಾಯಚೂರಿನಲ್ಲಿ ಉತ್ತಮ ಶಿಕ್ಷಣ ಸಂಸ್ಥೆಗಳಿಲ್ಲ ಎನ್ನುವುದು ಹಲವಾರು ದಶಕಗಳ ಕೂಗು. ಹಲವು ವರ್ಷಗಳ ಹಿಂದೆ ಇಲ್ಲಿಗೊಂದು ಐಐಟಿ ಬರುತ್ತದೆ ಎಂದು ಆಸೆ ಹುಟ್ಟಿಸಿ ಕೊನೆಗೆ ಕೈಕೊಡಲಾಯ್ತು, ಐಐಟಿ ಧಾರವಾಡದ ಪಾಲಾಯ್ತು. ಹೋಗಲಿ ಈ ಜಿಲ್ಲೆಗೆ ಒಂದು ವಿವಿಯಾದರೂ ಇದೆಯೇ ಎಂದು ನೋಡಿದರೆ ರಾಯಚೂರಿನಲ್ಲಿ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಮೂರ್‍ನಾಲ್ಕು ವರ್ಷಗಳಿಂದ ಚರ್ಚೆಗಳು ನಡೆದಿವೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಇಷ್ಟೆಲ್ಲದರ ನಡುವೆ ಅಲ್ಲಿನ ವಿದ್ಯಾರ್ಥಿಗಳು ಸಮರ್ಪಕ ಶಿಕ್ಷಣ ಸಿಗದೇ ನರಳುತ್ತಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳ ಧಾರುಣ ಸ್ಥಿತಿ ಇಲ್ಲಿದೆ ನೋಡಿ.

ಬೋರ್ಡೇ ಇಲ್ಲದ ಕಗ್ಗಾಡಿನಲ್ಲೊಂದು ಪಿ.ಜಿ ಸೆಂಟರ್‌

ದೊಡ್ಡ ಜಿಲ್ಲೆ ರಾಯಚೂರಿನಲ್ಲಿ ಯರಗೇರಾ ಪಿ.ಜಿ ಸೆಂಟರ್‌ ಇದೆ. ಸದ್ಯಕ್ಕೆ ಪದವಿ ನಂತರ ಉನ್ನತ ಶಿಕ್ಷಣ ಪಡೆಯಲು ರಾಯಚೂರು ಸುತ್ತ ಇರುವ ವಿದ್ಯಾರ್ಥಿಗಳೆಲ್ಲಾ ಇಲ್ಲಿಗೆ ಬರಬೇಕು. ದುರಂತವೆಂದರೆ ಇಲ್ಲಿ ಪಿ.ಜಿ ಸೆಂಟರ್‌ ಇದೆ ಎಂದು ಗೊತ್ತಾಗಲು ಇರಬೇಕಾದ ಒಂದು ಬೋರ್ಡ್‌ ಕೂಡ ಇಲ್ಲ. ಸುತ್ತಲೂ ಜಾಲಿಗಿಡಗಳು ಬೆಳೆದುಕೊಂಡಿದ್ದು ದೊಡ್ಡ ಕೊಂಪೆಯಾಗಿ ಕಾಣಿಸುತ್ತದೆಯೇ ವಿನಾಃ ವಿಶ್ವವಿದ್ಯಾನಿಲಯವಿರಲಿ ಒಂದು ಕಾಲೇಜು ಕಂಡಂತೆ ಸಹ ಕಾಣುವುದಿಲ್ಲ.

ಈ ಪಿ.ಜಿ ಸೆಂಟರ್‌ನಲ್ಲಿ ಇಂದು ವಿದ್ಯಾರ್ಥಿಗಳ ಆಕ್ರೋಶದ ಕಟ್ಟೆಯೊಡದಿದೆ. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕೈಬರಹದಲ್ಲಿ ಕೊಟ್ಟಿರುವ ಮನವಿ ಪತ್ರ ನೋಡಿದರೆ ಎಂತವರಿಗೂ ಕನಿಕರ ಹುಟ್ಟುತ್ತದೆ. ಪಿ.ಜಿ ಹಾಸ್ಟೆಲ್‌ನಲ್ಲಿ ಗಂಗಳದ ಸಮಸ್ಯೆ( ಊಟದ ತಟ್ಟೆ), ಶುದ್ದ ಕುಡಿಯುವ ನೀರು ಇಲ್ಲ. ಸಮರ್ಪಕ ಬಸ್‌ ಸೌಲಭ್ಯವಿಲ್ಲ. ಬರುವ ಬಸ್‌ಗಳು ಸಹ ಸರಿಯಾಗಿ ನಿಲ್ಲಿಸುವುದಿಲ್ಲ. ಬಸ್‌ ಸ್ಟ್ಯಾಂಡ್‌ನಿಂದ ಪಿ.ಜಿ ಯೊಳಗೆ ಹೋಗಬೇಕಾದರೆ ವಿದ್ಯುತ್‌ ದೀಪ ಇಲ್ಲ. ಕ್ರೀಡಾಂಗಣ, ಕ್ರೀಡಾ ಸಾಮಾಗ್ರಿಗಳು, ಜಿಮ್‌ ಯಾವುದೂ ಇಲ್ಲ. ಗ್ರಂಥಾಲಯದ ಪುಸ್ತಕಗಳಿಲ್ಲ, ದಿನಪತ್ರಿಕೆಗಳಿಲ್ಲ… ಹೇಳುತ್ತಾ ಹೋದರೆ ಸಮಸ್ಯೆಗಳು ಮುಗಿಯುವುದೇ ಇಲ್ಲ.

ಒಂದು ರೀತಿ ಕಾಡಿನಂತಿರುವ ಅಲ್ಲಿ ಹೆಣ್ಣು ಮಕ್ಕಳ ಹಾಸ್ಟೆಲ್‌ಗೂ ಕೂಡ ಯಾವುದೇ ಭದ್ರತೆಯಿಲ್ಲ. ಹಾಸ್ಟೆಲ್‌ ರೂಂಗಳಿಗೆ ಕಿಟಕಿ ಬಾಗಿಲುಗಳಿಲ್ಲ, ಸಮರ್ಪಕ ಚಿಲಕಗಳಿಲ್ಲ. ಹಾಸ್ಟೆಲ್‌ ಊಟ ನೀಡುವ ಜವಾಬ್ದಾರಿಯನ್ನು ಗುತ್ತಿಗೆ ನೀಡಲಾಗಿದ್ದು ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ.. ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಇದೆ.

 

ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟದ ನಡುವೆ ಹೇಗೆ ಓದುತ್ತಿದ್ದಾರೆ ಎಂದು ನೆನೆಸಿಕೊಂಡರೇ ಕಷ್ಟವಾಗುತ್ತದೆ. ಹಾಗಾಗಿ ಆ ವಿದ್ಯಾರ್ಥಿಗಳು ತಮ್ಮ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದಾರೆ. ಸಮರ್ಪಕವಾಗಿ ಸ್ಕಾಲರ್‌ಶಿಪ್‌ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಬೇಕು, ಇಂಟರ್‌ನೆಟ್‌ ಸಂಪರ್ಕ ಒದಗಿಸಬೇಕು. ವಿದ್ಯುತ್‌ ಕಡಿತದ ಸಮಸ್ಯೆಯಿರುವುದರಿಂದ ಜನರೇಟರ್‌ ಬೇಕು ಮತ್ತು ಮುಖ್ಯವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಸಹ ಹಾಸ್ಟೆಲ್‌ ಸೌಲಭ್ಯ ಸಿಗಬೇಕು.

ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ!

ಈ ಪಿ.ಜಿ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಒಂದಷ್ಟು ವಿದ್ಯಾರ್ಥಿನಿಯರು ಇದ್ದಾರೆ. ಯಾರಾದರೂ ಇಲ್ಲಿಗೆ ಸೇರಬೇಕಾದರೆ ಅವರೊಂದು ಮುಚ್ಚಳಿಕೆ ಪತ್ರವನ್ನು ಕಡ್ಡಾಯವಾಗಿ ಬರೆದುಕೊಡಬೇಕು. ಅದರಲ್ಲಿ  ನಮಗೇನಾದರೂ ಅನಾಹುತವಾದರೆ ನಾವೇ ಹೊಣೆ ಹೊರತು ಇಲ್ಲಿಯ ಆಡಳಿಯ ಮಂಡಳಿಯಲ್ಲ ಎಂದು! ರಾಜ್ಯದ, ದೇಶದ ಯಾವ ವಿ.ವಿಯಲ್ಲಿಯೂ ಇಂತಹ ಮುಚ್ಚಳಿಕೆ ಪತ್ರ ಬರೆಸಿಕೊಳ್ಳುವುದಿಲ್ಲವೇನೋ? ಇಲ್ಲಿಯ ಅನ್ಯಾಯ ಅಕ್ರಮಗಳನ್ನು ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದೆಂದು ಈ ರೀತಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಹೆದರಿಸಲಾಗುತ್ತಿದೆ. ಅವರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಪಿ.ಜಿ ಸೆಂಟರ್‌ನ ಆವರಣ

ಈ ವಿಚಾರದ ಕುರಿತು ನಾನುಗೌರಿ.ಕಾಂ ವತಿಯಿಂದ ರಾಯಚೂರು ವಿ.ವಿಯ ವಿಶೇಷಾಧಿಕಾರಿಗಳಾದ ಪ್ರೊ.ಮುಝಾಫರ್‌ ಅಸ್ಸಾದಿಯವರನ್ನು ಮಾತಾಡಿಸಲಾಯಿತು. “ಇಲ್ಲಿ ರಾಯಚೂರು ವಿಶ್ವವಿದ್ಯಾನಿಲಯವಾದರೆ ಮಾತ್ರ ಆ ಪಿ.ಜಿ ಸೆಂಟರ್‌ ನಮ್ಮ ವ್ಯಾಪ್ತಿಗೆ ಬರುತ್ತದೆ. ಸದ್ಯಕ್ಕೆ ಅದು ಗುಲಬರ್ಗಾ ವಿ.ವಿಯ ವ್ಯಾಪ್ತಿಯಲ್ಲಿದ್ದು ಅಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅಧಿಕಾರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆ ಪಿ.ಜಿ ಸೆಂಟರ್‌ನ ಕಾರ್ಯಾಧಿಕಾರಿಗಳಾದ ನುಶ್ರತ್‌ ರವರನ್ನು ಸಂಪರ್ಕಿಸಲು ಪ್ರಯತ್ನಿಸಿದರು ಕೂಡ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

ಇನ್ನು ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿದಿಲ್ಲ. ವಿಷಯ ತಿಳಿದ ನಂತರ ರವಿ ಪಾಟೀಲ್‌ ಫೌಂಡೇಶನ್‌ನ ರವಿ ಪಾಟೀಲ್‌ರವರು ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದಾರೆ. ನಂತರವಷ್ಟೇ ತಹಶೀಲ್ದಾರ್‌ ಪಿ.ಜಿ ಸೆಂಟರ್‌ಗೆ ಭೇಟಿಕೊಟ್ಟು ಮನವಿ ಪತ್ರ ಸ್ವೀಕರಿಸಿದ್ದಾರೆ. ಮತ್ತೆ ಯಥಾಪ್ರಕಾರ ಇದನ್ನು ಉನ್ನತ ಅಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ಹೇಳಿ ಹೊರಟಿದ್ದಾರೆ.

ರಾಯಚೂರು ವಿಶ್ವವಿದ್ಯಾಲಯವಾಗುವುದೇ ಪರಿಹಾರದ ದಾರಿ: ರವಿ ಪಾಟೀಲ್‌

ಈ ಕುರಿತು ರವಿ ಪಾಟೀಲ್‌ರವರು ಮಾತನಾಡಿ, ಈ ಪಿ.ಜಿ ಸೆಂಟರ್‌ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವಾರು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ಬಂದರೂ ಸಹ ಇಲ್ಲಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅನುದಾನ ಬಿಡುಗಡೆ ಆಗಿಲ್ಲ. ಇಲ್ಲಿಗೆ ಬರುವ ಇನ್‌ಚಾರ್ಜ್‌‌ಗಲು ಪ್ರತಿ ಮೂರು ತಿಂಗಳಿಗೊಮ್ಮೆ ಬದಲಾಗುತ್ತಿದ್ದಾರೆ. ಈಗ ಇರುವವರು ಸಹ ಡಿಸೆಂಬರ್‌ನಲ್ಲಿ ನಿವೃತ್ತಿಯಾಗುತ್ತಿದ್ದಾರೆ. ಈಗಾದರೆ ಈ ಪಿ.ಜಿ ಸೆಂಟರ್‌ ಉದ್ದಾರ ಆಗುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

600 ಜನಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಇಲ್ಲ ಕೇವಲ 6 ಜನ ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಉಳಿದವರೆಲ್ಲಾ ಅಥಿತಿ ಉಪನ್ಯಾಸಕರಾಗಿರುವುದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹಾಗಾಗಿ ಈ ತಿಂಗಳ 28 ರಂದು ಅಂತಿಮ ಮಾತುಕತೆ ನಡೆಸುತ್ತೇವೆ. ಆನಂತರ ಇದಕ್ಕಾಗಿ ಬೆಂಗಳೂರಿನಲ್ಲಿ ಒತ್ತಡ ತರುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೋರಾಟ ತೀವ್ರಗೊಳಿಸುತ್ತೇವೆ

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಲಕ್ಷ್ಮಣ್‌ ಮಂಡಲಗೇರಾ ಮಾತನಾಡಿ, ಪಿ.ಜಿ ಸೆಂಟರ್‌ ಸಣ್ಣ ಪುಟ್ಟ ಸಮಸ್ಯೆಗಳೇ ಇದ್ದರೂ ಸಹ ಬಗೆಹರಿಯುತ್ತಿಲ್ಲ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಎಲ್ಲಾ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ.

ಆವರಣದ ತುಂಬಾ ಜಾಲಿ ಮರಗಳು

ರಾಯಚೂರು ವಿ.ವಿ ಆಗಬೇಕು ಎಂಬುದು ನಮ್ಮ ಬಹುದಿನದ ಬೇಡಿಕೆ. ಆದರೆ ಆ ಕಡತವನ್ನು ರಾಜ್ಯಪಾಲರು ಎರಡು ಬಾರಿ ಕಾರಣವಿಲ್ಲದೆ ತಿರಸ್ಕರಿದ್ದಾರೆ. ಈ ಪಿ.ಜಿ ಸೆಂಟರ್‌ ಗುಲಬರ್ಗಾ ವಿ.ವಿ ವ್ಯಾಪ್ತಿಗೆ ಬರಲಿದ್ದು, ಇಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ರಾಯಚೂರು ನಗರದಿಂದ 15 ಕಿ.ಮಿ ದೂರದಲ್ಲಿದೆ. ಸಮರ್ಪಕ ಬಸ್‌ ವ್ಯವಸ್ಥೆ ಕೂಡ ಇಲ್ಲ. ಕಷ್ಟಪಟ್ಟು ಬಂದರೂ ಸಹ ನಿಗಧಿತವಾಗಿ ಕ್ಲಾಸ್‌ ನಡೆಯುವುದಿಲ್ಲ. ಇಲ್ಲಿ ಒಂದು ಝೆರಾಕ್ಸ್ ಅಂಗಡಿ ಸಹ ಇಲ್ಲ. ಇಲ್ಲಿನ ವಿಶೇಷ ಅಧಿಕಾರಿಗಳು ರಬ್ಬರ್‌ ಸ್ಟ್ಯಾಂಪ್‌ ರೀತಿ ವರ್ತಿಸುತ್ತಾರೆ. ನಾವು ಕಟ್ಟಿದ ಶುಲ್ಕಕ್ಕೆ ರಶೀದಿ ಸಹ ನೀಡದೆ ವಂಚನೆ ನಡೆಯುತ್ತಿದೆ. ಹಾಗಾಗಿ ಪ್ರತಿಭಟನೆ ನಮಗೆ ಅನಿವಾರ್ಯವಾಗಿದೆ

-ಮಲ್ಲನಗೌಡ, ಪ್ರಥಮ ಎಂ.ಎ, ರಾಜ್ಯಶಾಸ್ತ್ರ ವಿಭಾಗ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...