Homeಕರ್ನಾಟಕಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ 'ಮಹಾಡ್ ಸತ್ಯಾಗ್ರಹ': ಬರಗೂರು ರಾಮಚಂದ್ರಪ್ಪ

ಹಲವಾರು ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧವೇ ‘ಮಹಾಡ್ ಸತ್ಯಾಗ್ರಹ’: ಬರಗೂರು ರಾಮಚಂದ್ರಪ್ಪ

- Advertisement -
- Advertisement -

“ಮಹಾಡ್ ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ‘ಸಾಮಾಜಿಕ ಸಬಲೀಕರಣ ದಿನ’ವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಕ್ಕಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗಳಿಗೆ ಒಡ್ಡಿದ್ದ ಪ್ರತಿರೋಧವಾಗಿದೆ” ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

“ಭಾರತದಲ್ಲಿ ನಡೆದ ಅಸ್ಪ್ರಶ್ಯರ ಪರವಾದ ಮೊಟ್ಟ ಮೊದಲ ಚಳವಳಿ ಅಂದರೆ ಅದು ಮಹಾಡ್ ಸತ್ಯಾಗ್ರಹ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ಮಹಾಡ್‌ನಲ್ಲಿ 1927 ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆ ನೀರನ್ನ ಮುಟ್ಟಿ ಕುಡಿಯುವುದರ ಮೂಲಕ ಇದು ಎಲ್ಲರಿಗೂ ಸೇರಿದ್ದು ಎನ್ನುವುದನ್ನ ಅಂಬೇಡ್ಕರ್ ಅವರು ಹೇಳಿದ್ದರು. ಮಾನವ ಹಕ್ಕುಗಳನ್ನ ಎತ್ತಿ ಹಿಡಿಯುವ ಈ ಮೂಲಕ ಅಂಬೇಡ್ಕರ್ ಅವರು ಬೌದ್ಧಿಕ ಬದ್ಧತೆಯನ್ನ ತೋರಿಸಿದ್ದರು” ಎಂದು ಬಣ್ಣಿಸಿದರು.

ಭಾರತದ ಅಸ್ಪ್ರಶ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಬೆಂಗಳೂರಿನ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗುರುವಾರ ಆಯೋಜಿಸಿದ್ದ ‘ಶೋಷಿತರ ಸಂಘರ್ಷ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಭಾಷಣ ಆರಂಭಕ್ಕೂ ಮುನ್ನ ಸಣ್ಣ ಕತೆಯೊಂದನ್ನು ಹೇಳಿದ ಅವರು, “ಒಂದು ಊರಿನಲ್ಲಿ ಒಬ್ಬ ಗುರು ಶಿಷ್ಯರಿಗೆ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ವಿರುದ್ಧ ಭೋಧನೆ ಮಾಡುತ್ತಾರೆ. ಅಸ್ಪಶ್ಯತೆ ಮಾಡಬಾರದು; ಅಸ್ಪ್ರಶ್ಯರನ್ನ ಕೀಳಾಗಿ ಕಾಣುವುದು ತಪ್ಪು ಎಂದೆಲ್ಲಾ ಭಾಷಣ ಮಾಡಿ ಮುಂದಿನ ಊರಿಗೆ ತೆರಳುತ್ತಾರೆ. ಇನ್ನೊಂದು ಊರಿಗೆ ಹೋಗುವಾಗ ಅಲ್ಲಿನ ಬಾವಿಯಲ್ಲಿ ಕೈಕಾಲು ತೊಳೆದು ನೀರು ಕುಡಿಯುತ್ತಾರೆ. ನೀರು ಕುಡಿದ ಮೇಲೆ ಬರುವಾಗ ಯಾರೋ ಒಬ್ಬರು, ಇದು ಅಸ್ಪೃಶ್ಯರ ಬಾವಿ ಎಂದು ಹೇಳುತ್ತಾರೆ. ಆ ಬಳಿಕ ಗುರುವಿಗೆ ತಳಮಳ ಶುರುವಾಗಿ ಎಂತಹ ಪಾಪ ತಟ್ಟಿತ್ತು ನನಗೆ ಎಂದು ಹೇಳಿ ಒಬ್ಬ ಬುದ್ಧಿವಂತನ ಹತ್ತಿರ ಹೋಗಿ ಹೀಗೆ ಮಾಡಿದೆ, ಈ ಪಾಪ ಕಳೆದುಕೊಳ್ಳುವುದಕ್ಕೆ ಏನು ಮಾಡಲಿ ಹೇಳಿ ಎಂದು ಕೇಳುತ್ತಾನೆ. ಆ ಬುದ್ಧಿವಂತ ಬಾವಿ ನೀರು ಕುಡಿಯುವ ಸಂದರ್ಭದಲ್ಲಿ ಏನೇನೂ ಮಾಡಿದೆ ಕ್ರಮವಾಗಿ ಹೇಳು ಎಂದಾಗ; ಮೊದಲಿಗೆ ಬಾವಿ ಮೆಟ್ಟಿಲು ಇಳಿದು ಹೋಗಿ ಕೈಕಾಲು ತೊಳೆದು ಆಮೇಲೆ ನೀರು ಕುಡಿದೆ ಎಂದು ಗುರು ಹೇಳುತ್ತಾನೆ. ಆ ಬಳಿಕ ಬುದ್ದಿವಂತ, ನಿನಗೇನು ಆಗಲ್ಲ; ಏಕೆಂದರೆ, ಮೊದಲಿಗೆ ನೀನು ಕೈ-ಕಾಲು ತೊಳೆದಿದ್ದೀಯ. ನಿನ್ನ ಪಾದ ಸ್ಪರ್ಶದಿಂದ ಆ ಬಾವಿಯ ನೀರು ಪವಿತ್ರವಾಯಿತು. ಹಾಗಾಗಿ, ನಿನಗೆ ಏನು ಆಗಲ್ಲ ಎಂದು ಹೇಳಿದ್ನಂತೆ. ಇದು ಕಲ್ಪಿತ ಪ್ರಸಂಗ, ಆದರೂ ಇದರೊಳಗಡೆ ವಾಸ್ತವ ಇದೆ. ಅಂದರೆ, ಗುರು ಪತನಗೊಂಡ ಪ್ರಾಮಾಣಿಕತೆಯ ಸಂಕೇತ. ಈ ಬುದ್ಧಿವಂತ ಭ್ರಷ್ಟಗೊಂಡ ಬೌದ್ಧಿಕತೆಯ ಸಂಕೇತ. ಇವು ಯಾವತ್ತಿಗೂ ಕೂಡ ಒಂದೇ. ಇವು ದೇಶವನ್ನ ಉದ್ಧಾರ ಮಾಡುವುದಿಲ್ಲ. ದೊಡ್ಡ ದೊಡ್ಡ ಹೆಸರು ಇಟ್ಟುಕೊಂಡಿರುವವರಿಗೆ ಪ್ರಾಮಾಣಿಕತೆ ಇರೋದಿಲ್ಲ. ಆ ಗುರು ಪ್ರಾಮಾಣಿಕನಾಗಿದ್ದರೇ ಅಸ್ಪ್ರಶ್ಯರ ಬಾವಿ ನೀರು ಕುಡಿದೆ ಎಂದು ಸಂಭ್ರಮಿಸಬೇಕಿತ್ತು. ಇನ್ನು ಆತ ನಿಜವಾದ ಬುದ್ಧಿವಂತನೇ ಆಗಿದ್ದರೇ, ಆ ಗುರುವನ್ನ ಬೈದು ಕಳಿಸಬೇಕಿತ್ತು” ಎಂದು ವಿವರಿಸಿದರು.

“ಇಂದು ನಾವು ಸಹ ಪತನಗೊಂಡಿರುವ ಪ್ರಾಮಾಣಿಕತೆಯ, ಭ್ರಷ್ಟಗೊಂಡಿರುವ ಬೌದ್ಧಿಕ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನೈತಿಕ ಶಕ್ತಿ, ಸಂಘಟನಾ ಶಕ್ತಿ, ವಿಚಾರ ಶಕ್ತಿ ಸೇರಿ ಒಂದು ಬೌದ್ದಿಕ ಬದ್ದತೆ ಬೇಕು. ಇವತ್ತು ಸಹ ಅಸ್ಪಶ್ಯರಿಗೆ ಹಿಂಸೆ ನೀಡುವ ಘಟನೆ ನಡೆಯುತ್ತಿವೆ. ಆಗ ಅಂಬೇಡ್ಕರ್ ಅವರು ಅದಕ್ಕೊಂದು ದೊಡ್ಡ ಪ್ರತಿರೋಧ ಒಡ್ಡಿದ್ದರು. ಅಂಬೇಡ್ಕರ್ ಅವರು ಒಡ್ಡಿದ ಈ ಪ್ರತಿರೋಧದ ಚಳವಳಿಯಲ್ಲಿ ಅನೇಕ ಸವರ್ಣೀಯರು ಭಾಗವಹಿಸುತ್ತಾರೆ. ಸವರ್ಣೀಯರಲ್ಲಿನ ಪ್ರಗತಿಪರರು ಎಲ್ಲರೂ ಭಾಗವಹಿಸಿದ್ದರು. ಕೆರೆಯ ನೀರನ್ನ ಮುಟ್ಟಿದ್ದಕ್ಕಾಗಿ ಪ್ರತಿವರ್ಷ ಮಾರ್ಚ್‌ 20 ಅನ್ನು ಸಾಮಾಜಿಕ ಸಬಲೀಕರಣ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಅಂಬೇಡ್ಕರ್ ಅವರು ಹೇಳುತ್ತಾರೆ. ಮಹಾಡ್ ಸತ್ಯಾಗ್ರಹ ಕೇವಲ ನೀರನ್ನ ಮುಟ್ಟಿದ್ದಲ್ಲ, ಹಲವು ರೂಪದ ಅಸ್ಪ್ರಶ್ಯ ಆಚರಣೆಗೆ ಒಡ್ಡಿದ್ದ ಪ್ರತಿರೋಧ ಆಗಿದೆ” ಎಂದು ತಿಳಿಸಿದರು.

“ಶೋಷಿತ ಸಮುದಾಯಗಳು ಪಂಚಭೂತ ವಂಚಿತ ಸಮುದಾಯಗಳು ಈ ಸಮುದಾಯಗಳು ಗಾಳಿಯಿಂದ ವಂಚಿತರಾಗುತ್ತಾರೆ. ಭೂಮಿಯಿಂದ ವಂಚಿತರಾಗಿದ್ದಾರೆ. ಆಕಾಶ ಕನಸಿನ ಸಂಕೇತ ಅವರಿಗೆ ಕನಸು ಕಾಣೋದಕ್ಕೆ ಆಗುವುದಿಲ್ಲ. ನೀರು ಮುಟ್ಟೋದಕ್ಕೆ ಬಿಡೋದಿಲ್ಲ. ಗುಡಿಸಲಿಗೆ ಬೆಂಕಿ ಹಚ್ಚುತ್ತಾರೆ. ಒಟ್ಟಿನಲ್ಲಿ ಈ ಶೋಷಿತ ಸಮುದಾಯಗಳು ಈ ಪಂಚಭೂತಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸರಿಯಾದ ನೀರು, ಗಾಳಿ, ಬೆಂಕಿ, ಭೂಮಿ ಇವ್ಯಾವುದನ್ನೂ ಕೊಡಲಿಲ್ಲ ಅಂದರೆ, ಇವು ಪಂಚಭೂತ ವಂಚಿತ ಸಮುದಾಯಗಳು” ಎಂದು ಹೇಳಿದರು.

“1949ರಲ್ಲಿ ಪ್ರಜಾಪ್ರಭುತ್ವವನ್ನ ಸಾಮಾಜಿಕ, ರಾಜಕೀಯ, ಆರ್ಥಿಕ ಪ್ರಜಾಪ್ರಭುತ್ವ ಎಂದು ಅಂಬೇಡ್ಕರ್ ವಿವರಿಸಿದ್ದಾರೆ. ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಇದ್ದರೆ ಇದು ಸಾಮಾಜಿಕ ಪ್ರಜಾಪ್ರಭುತ್ವ ಆಗುತ್ತದೆ. ಆದರೆ, ಈಗ ದ್ವೇಷದ ರಾಜಕಾರಣ ನಡೆಯುತ್ತದೆ. ಪ್ರಜಾಪ್ರಭುತ್ವ ಸಮಾನತೆ ಸಹೋದರತೆ ಜತೆಗೆ ಎಲ್ಲರೂ ತಾರತಮ್ಯ ಮೀರಿ ಸಮಾಜವನ್ನ ಕಟ್ಟಬೇಕು. ಅರ್ಧಕ್ಕೂ ಹೆಚ್ಚು ಸಂಪತ್ತು ಕೆಲವೇ ಜನರ ಬಳಿ‌ ಇದೆ. ಸ್ವಾತಂತ್ರ್ಯ ಕೊಟ್ಟಿರುವ ಹಕ್ಕಿನಿಂದಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅನೇಕ ಚಳುವಳಿಗಳ ಕಾರಣಕ್ಕಾಗಿ ಅನೇಕ ಮುನ್ನಡೆಗಳು ನಡೆಯುತ್ತಿವೆ. ಈ ಮುನ್ನಡೆಗಳ ನಡುವೆ ಹಲವು ಸಮಸ್ಯೆಗಳು ಇದೆ. ಇನ್ನೂ ಅಸ್ಪ್ರಶ್ಯತೆ ಇದೆ. ಸಾಮಾಜಿಕ ಪ್ರಜಾಪ್ರಭುತ್ವ ನೆಲೆಯೂರಿದರೆ ಆಗ ಸ್ವಾತಂತ್ರ್ಯ ಸಮಾನತೆ‌ ಬರುತ್ತದೆ” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿಯ ಇಂದಿರಾ ಕೃಷ್ಣಪ್ಪ ಮಾತನಾಡಿ, “ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಈ ದಿನಾಚರಣೆಯನ್ನ ನಡೆಸುತ್ತೇವೆ. ಎಲ್ಲ ಜಿಲ್ಲೆಗಳಲ್ಲಿ ಮಹಾಡ್ ಸತ್ಯಾಗ್ರಹದ ಅರಿವು ಮೂಡಲಿ ಎಂದು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಏಕಕಾಲದಲ್ಲಿ ಆಚರಣೆ ಮಾಡಲಾಗುತ್ತಿದೆ” ಎಂದರು.

“ಪ್ರಯಾಗರಾಜ್‌ಗೆ ಹೋಗಿ ಕುಂಭಮೇಳದಲ್ಲಿ ಜನರು ಮುಳುಗಿ ಪವಿತ್ರರಾಗಿದ್ದೀವಿ ಎಂದು ಹೇಳಿಕೊಂಡರು. ಅಲ್ಲಿನ ಜೀವಜಲವನ್ನ ಕೊಳಕು ಮಾಡಿದ್ದಾರೆ; ಇದು ಸಾಮಾನ್ಯ ಜ್ಞಾನ ಎಲ್ಲರಿಗೂ ಗೊತ್ತಾಗುವ ವಿಚಾರ. ನೀರನ್ನು ಹಾಳು ಮಾಡಿ, ಮಲಿನ ಮಾಡಿದ್ದಾರೆ. ಸರ್ಕಾರ ಆ ಪ್ರದೇಶ, ನೀರನ್ನ ಸ್ವಚ್ಛ ಮಾಡಲು ನಮ್ಮ ತೆರಿಗೆ ಹಣದಲ್ಲಿ ನೂರಾರು ಕೋಟಿ ಹಣ ಖರ್ಚು ಮಾಡಿದೆ. ಎಷ್ಟು ಹಣ ವೆಚ್ಚ ಆಗಿದೆ ಎಂದು ಯಾರಾದರೂ ಯೋಚನೆ ಮಾಡಿದ್ದೀರಾ? ಅಂಬೇಡ್ಕರ್ ಮಾಡಿದ್ದ ಸತ್ಯಾಗ್ರಹಕ್ಕೂ ಈಗ ಸರ್ಕಾರವೇ ಏರ್ಪಡಿಸುವ ಇಂತಹ ಕಾರ್ಯಕ್ರಮಗಳಿಗೂ ಎಲ್ಲಿಯ ಸಾಮ್ಯತೆ? ಮೌಢ್ಯದ ವಿರೋಧದ ಬಗ್ಗೆ ಮಾತನಾಡಬೇಕಾದ ಕರ್ನಾಟಕ ಸರ್ಕಾರ ಇಲ್ಲಿಯೂ ಕೂಡ ಹಾಗೆಯೇ ಮಾಡಿತ್ತು. ಈ ಬಗ್ಗೆ ಎಲ್ಲರೂ ಪ್ರಶ್ನೆಗಳನ್ನ ಎತ್ತಿ ಹಿಡಿಯಬೇಕು” ಎಂದು ಹೇಳಿದರು.

“ಈ ಚಳವಳಿ ನಡೆದು ಇಂದಿಗೆ 98 ವರ್ಷಗಳು ಕಳೆದರು ಕೂಡ ನೀರಿನ ವಿಷಯದಲ್ಲಿ, ಬಟ್ಟೆಯ ವಿಷಯದಲ್ಲಿ, ದಲಿತರ ಅಭಿರುಚಿಯ ವಿಷಯದಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇತ್ತೀಚಿಗೆ ರಾಜಸ್ತಾನದ ಶಾಲೆಯೊಂದರಲ್ಲಿ ಏಳನೇ ತರಗತಿಯ ಬಾಲಕನೊಬ್ಬ ನೀರು ಕುಡಿದನೆಂದು ಹೊಡೆದು ಸಾಯಿಸಿದರು. ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಸಾರ್ವಜನಿಕ ಬಾವಿಯೊಂದರ ನೀರನ್ನು ಮುಟ್ಟಿದ ಕಾರಣಕ್ಕೆ ಕೊಲೆಮಾಡಲಾಯಿತು. ಹೀಗೆ, ಪ್ರತಿದಿನ ಸವರ್ಣಿಯರು ತಮ್ಮ ಬಾವಿಯಲ್ಲಿ ನೀರು ಸೇದಿದರು ಎಂದು. ಕೆರೆಯ ನೀರನ್ನು ಬಳಸಿದರು ಎಂದು ನಿರಂತರವಾಗಿ ಹಲ್ಲೆಗಳನ್ನು ದೇಶಾದ್ಯಂತ ನಡೆಸುತ್ತಲೇ ಇದ್ದಾರೆ. ಇದು ದೇಶ ಸಮಾನತೆಯ ಕಡೆಗೆ ನಡೆಯದೆ ಅಮಾನುಷ ದ್ವೇಷ ಮತ್ತು ವಿಕೃತಿಯ ಕಡೆಗೆ ನಡೆಯುತ್ತಿರುವುದನ್ನು ಮತ್ತೆ ಮತ್ತೆ ಖಚಿತಪಡಿಸುತ್ತಿದೆ” ಎಂದು ತಿಳಿಸಿದರು.

ದಲಿತ ಚಳವಳಿ ಘನತೆಯ ಬದುಕು ಕೊಟ್ಟಿದೆ, ಹಂಚಿಕೊಂಡು ತಿನ್ನೋಣ: ಮಾವಳ್ಳಿ ಶಂಕರ್ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...