Homeಅಂತರಾಷ್ಟ್ರೀಯಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

ಗಾಜಾ ಮೇಲಿನ ದಾಳಿಗೆ ಹಮಾಸ್ ತಿರುಗೇಟು | ರಾಜಧಾನಿ ಟೆಲ್ ಅವೀವ್ ಮೇಲೆ ರಾಕೆಟ್ ದಾಳಿ

- Advertisement -
- Advertisement -

ಗಾಜಾ ಮೇಲೆ ಇಸ್ರೇಲ್ ತನ್ನ ದಾಳಿಯನ್ನು ಮತ್ತೆ ಆರಂಭಿಸಿದ್ದಕ್ಕೆ ಪ್ಯಾಲೆಸ್ತೀನ್ ಹೋರಾಟಗಾರ ಸೇನೆ ಹಮಾಸ್‌ ಗುರುವಾರ ಮೊದಲ ತಿರುಗೇಟು ನೀಡಿದ್ದು, ವಸಾಹತುಗಾರ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್ ಕಡೆಗೆ ರಾಕೆಟ್ ದಾಳಿ ನಡೆಸಿದೆ ಎಂದು ಎಎಫ್‌ಪಿ ವರದಿ ಮಾಡಿದೆ. ಗಾಜಾ ಮೇಲಿನ ದಾಳಿಗೆ

ಪ್ಯಾಲೆಸ್ತೀನ್ ಹೋರಾಟಗಾರ ಹಮಾಸ್‌ನ ಸಶಸ್ತ್ರ ವಿಭಾಗವಾದ ಎಜ್ಜೆಡೈನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಗಾಜಾದಲ್ಲಿ ನಾಗರಿಕರ ಮೇಲೆ ಇಸ್ರೇಲ್ ನಡೆಸಿದ “ಹತ್ಯಾಕಾಂಡ” ಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ. ಗಾಜಾದಿಂದ ಹಾರಿಸಲಾದ ಒಂದು ರಾಕೆಟ್‌ ಅನ್ನು ತಡೆಹಿಡಿಯಲಾಗಿದ್ದು, ಇತರ ಎರಡು ರಾಕೆಟ್‌ಗಳು ಜನವಸತಿಯಿಲ್ಲದ ಪ್ರದೇಶಕ್ಕೆ ಬಿದ್ದಿದೆ ಎಂದು ಇಸ್ರೇಲ್ ಹೇಳಿದೆ. ಗಾಜಾ ಮೇಲಿನ ದಾಳಿಗೆ

ಮಂಗಳವಾರ ಗಾಜಾ ಮೇಲಿನ ತನ್ನ ದಾಳಿಯನ್ನು ಇಸ್ರೇಲ್ ಮತ್ತೆ ಆರಂಭಿಸಿದೆ. ಈ ದಾಳಿಯಲ್ಲಿ ಕನಿಷ್ಠ 330 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಬೆಳಗಿನ ಜಾವ 2 ಗಂಟೆಗೆ ಈ ದಾಳಿಗಳು ಪ್ರಾರಂಭವಾಗಿದ್ದು, ಜನವರಿ 19 ರಂದು ಕದನ ವಿರಾಮ ಜಾರಿಗೆ ಬಂದ ನಂತರ ಪ್ಯಾಲೆಸ್ತೀನಿ ಪ್ರದೇಶದ ಮೇಲೆ ನಡೆದ ಅತ್ಯಂತ ಭೀಕರ ದಾಳಿಗಳಲ್ಲಿ ಒಂದಾಗಿದೆ.

ದಾಳಿಗಳಿಗೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ತಮ್ಮ ನಡುವಿನ ಕದನ ವಿರಾಮವನ್ನು ಏಕಪಕ್ಷೀಯವಾಗಿ ಕೊನೆಗೊಳಿಸಿದೆ ಎಂದು ಹೇಳಿದೆ. ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳಲ್ಲಿ 190 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 504 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ಗುರುವಾರ ತಿಳಿಸಿದೆ.

ಹಗಲಿ ವೇಳೆ ಇಸ್ರೇಲ್ ಸೇನೆಯು ಮಧ್ಯ ಮತ್ತು ದಕ್ಷಿಣ ಗಾಜಾದಲ್ಲಿ ತನ್ನ ಭೂ ಕಾರ್ಯಾಚರಣೆಯನ್ನು ವಿಸ್ತರಿಸಿದೆ ಎಂದು ಹೇಳಿದೆ. “ಕಳೆದ 24 ಗಂಟೆಗಳಲ್ಲಿ, ಉತ್ತರ ಮತ್ತು ದಕ್ಷಿಣ ಭಾಗಗಳ ನಡುವಿನ ಭದ್ರತಾ ವಲಯವನ್ನು ವಿಸ್ತರಿಸುವ ಸಲುವಾಗಿ, ಇಸ್ರೇಲ್ ರಕ್ಷಣಾ ಪಡೆಗಳ ಸೈನಿಕರು ಮಧ್ಯ ಮತ್ತು ದಕ್ಷಿಣ ಗಾಜಾ ಪಟ್ಟಿಯಲ್ಲಿ ಗುರಿಯಿಟ್ಟುಕೊಂಡು ಭೂ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ” ಎಂದು ಸೇನಾ ವಕ್ತಾರ ಅವಿಚೇ ಅಡ್ರೇಯಿ ಹೇಳಿದ್ದಾರೆ.

ಇಸ್ರೇಲ್ ತನ್ನ ಮಿಲಿಟರಿ ದಾಳಿಯನ್ನು ಪುನರಾರಂಭಿಸಿದಾಗಿನಿಂದ, ಗಾಜಾದ ನಾಗರಿಕರ ಮೇಲೆ ಅತ್ಯಂತ ಅಮಾನವೀಯ ಅಗ್ನಿಪರೀಕ್ಷೆಗಳನ್ನು ಅಂತ್ಯವಿಲ್ಲದೆ ನಡೆಸಲಾಗುತ್ತಿದೆ ಎಂದು ಪ್ಯಾಲೆಸ್ತೀನ್‌ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯ ಸಂಸ್ಥೆಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

“ಮೂರನೇ ದಿನವೂ ಇಸ್ರೇಲ್ ಪಡೆಗಳು ವಾಯು ಮತ್ತು ಸಮುದ್ರದಿಂದ ಬಾಂಬ್ ದಾಳಿ ಮುಂದುವರೆಸಿದೆ. ನಮ್ಮ ದೈನಂದಿನ ಕಣ್ಗಾವಲಿನಲ್ಲಿ, ಗಾಜಾದಲ್ಲಿ ಜನರು ಮತ್ತೆ ಮತ್ತೆ ತಮ್ಮ ಕೆಟ್ಟ ದುಃಸ್ವಪ್ನವನ್ನು ಎದುರಿಸುತ್ತಿದ್ದಾರೆ.” ಎಂದು ಅವರು ಘಟನೆಯನ್ನು ಖಂಡಿಸಿದ್ದಾರೆ.

ಗಾಜಾ ಮೇಲಿನ ದಾಳಿಯನ್ನು ಮಂಗಳವಾರ ಸಮರ್ಥಿಸಿಕೊಂಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಪದೇ ಪದೇ ನಿರಾಕರಿಸುವುದು ಮತ್ತು ಕದನ ವಿರಾಮವನ್ನು ವಿಸ್ತರಿಸುವ ಮಾತುಕತೆಗಳಲ್ಲಿ ಪ್ರಗತಿಯ ಕೊರತೆಯ ಕಾರಣಕ್ಕೆ ವಾಯುದಾಳಿಗಳಿಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.

“ಇನ್ನು ಮುಂದೆ, ಇಸ್ರೇಲ್ ಹಮಾಸ್ ವಿರುದ್ಧ ಹೆಚ್ಚಿನ ಮಿಲಿಟರಿ ಬಲದೊಂದಿಗೆ ಕ್ರಮ ಕೈಗೊಳ್ಳುತ್ತದೆ. ಕಾರ್ಯಾಚರಣಾ ಯೋಜನೆಯನ್ನು ಸೇನೆ ವಾರಾಂತ್ಯದಲ್ಲಿ ಮಂಡಿಸಿದ್ದು, ಅದಕ್ಕೆ ರಾಜಕೀಯ ನಾಯಕತ್ವವು ಅನುಮೋದಿಸಿತು.” ಎಂದು ನೆತನ್ಯಾಹು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...