Homeಮುಖಪುಟಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

ಮತ್ತೆ ಮುನ್ನೆಲೆಗೆ ಬಂದ ದಿಶಾ ಸಾಲಿಯಾನ್ ಪ್ರಕರಣ: ಆದಿತ್ಯ ಠಾಕ್ರೆ ವಿರುದ್ಧ ತನಿಖೆಗೆ ಆಗ್ರಹ

- Advertisement -
- Advertisement -

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಕೆಯ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದರಿಂದ ದಿಶಾ ಸಾಲಿಯಾನ್ ಸಾವನ್ನಪ್ಪಿ ಸುಮಾರು 5 ವರ್ಷಗಳ ಬಳಿಕ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದಲ್ಲಿ ರಾಜಕೀಯ ಕಾಳಕಗಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿಯ ಸದಸ್ಯರು ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲಿ ದಿಶಾ ಸಾಲಿಯಾನ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಮಹಾಯುತಿ ಶಾಸಕರು ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ದಿಶಾ ಸಾವಿನ ತನಿಖೆಗೆ ಒತ್ತಾಯಿಸಿದರು. ಗೃಹ ಖಾತೆ ಸಚಿವ ಯೋಗೇಶ್ ಕದಮ್ ಅವರು, ಪ್ರಕರಣದ ಎಸ್‌ಐಟಿ ತನಿಖೆ ಇನ್ನೂ ಮುಂದುವರೆದಿದೆ ಮತ್ತು ದಿಶಾ ಸಾಲಿಯಾನ್ ಅವರ ತಂದೆ ರಾಜ್ಯ ಸರ್ಕಾರವನ್ನು ತಮ್ಮ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

“ನಾವು ನ್ಯಾಯಾಲಯದ ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಬಿಡುವುದಿಲ್ಲ” ಎಂದರು.

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ, ಜೂನ್ 8,2020 ರಂದು ಮುಂಬೈ ಉಪನಗರದ ಮಲಾಡ್‌ನಲ್ಲಿರುವ ಬಹುಮಹಡಿ ಕಟ್ಟಡದ 14 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ಪೊಲೀಸರು ಇದು ಆಕಸ್ಮಿಕ ಸಾವು ಎಂದು ವರದಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, “ಸಿಐಡಿ ತನಿಖೆಯಲ್ಲಿ ಆದಿತ್ಯ ಠಾಕ್ರೆಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಕಂಡುಬಂದಿಲ್ಲ. ಆದರೂ, ಬಿಜೆಪಿ ನಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಮಾನಹಾನಿ ಮಾಡುತ್ತಿದೆ. ಆದಿತ್ಯ ಯಾವುದೇ ತಪ್ಪು ಮಾಡಿಲ್ಲ. ಹೀಗಿರುವಾಗ, ಅವರು ಏಕೆ ಭಯಪಡಬೇಕು? ನಾವು ಯಾವುದೇ ತನಿಖೆಗೆ ಮುಕ್ತರಾಗಿದ್ದೇವೆ” ಎಂದಿದ್ದಾರೆ.

“ನಾಗ್ಪುರ ಹಿಂಸಾಚಾರದಲ್ಲಿ ಬಿಜೆಪಿ ನಾಯಕರ ಬೆರಳುಗಳು ಸುಟ್ಟುಹೋಗಿವೆ. ಆದ್ದರಿಂದ ದಿಶಾ ಸಾಲಿಯಾನ್ ವಿಷಯವನ್ನು ಉದ್ದೇಶಪೂರ್ವಕವಾಗಿ ಕೆಣಕಲಾಗಿದೆ” ಎಂದು ಹೇಳಿದ್ದಾರೆ.

“ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದ್ದರಿಂದ, ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಆದಿತ್ಯ ಠಾಕ್ರೆ ತಿಳಿಸಿದ್ದಾರೆ.

“ಜೂನ್ 8, 2020ರಂದು ದಿಶಾ ತಮ್ಮ ಮನೆಯಲ್ಲಿ ಪಾರ್ಟಿ ಆಯೋಜಿಸಿದ್ದರು. ಅದರಲ್ಲಿ ಆದಿತ್ಯ ಠಾಕ್ರೆ, ನಟರಾದ ಸೂರಜ್ ಪಾಂಚೋಲಿ ಮತ್ತು ಡಿನೋ ಮೋರಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ದಿಶಾ ಮೇಲೆ ‘ಸಾಮೂಹಿಕ ಅತ್ಯಾಚಾರ’ ಎಸಗಲಾಗಿದೆ. ಆಕೆಯನ್ನು ಬಂಧಿಸಿಟ್ಟು ಕ್ರೂರ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ” ಎಂದು ದಿಶಾ ತಂದೆ ಸತೀಶ್ ಸಾಲಿಯಾನ್ ಬಾಂಬೆ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆರೋಪಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಒಡಿಶಾ| ಇನ್ನೂರು ರೂಪಾಯಿಗೆ ಮೊಮ್ಮಗನನ್ನು ಮಾರಾಟ ಮಾಡಿದ ವೃದ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...