Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...