Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...