Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...