Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...