Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...