Homeಮುಖಪುಟಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

- Advertisement -
- Advertisement -

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು.

ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಇದು ಉದಾಹರಣೆ ಎಂದರು.

“ನಮ್ಮ ಹೋರಾಟ ಕ್ಷೇತ್ರ ಪುನರ್‌ವಿಂಗಡನೆಯ ವಿರುದ್ದವಲ್ಲ, ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ. ಇದು ಸೀಟುಗಳ ಸಂಖ್ಯೆಯ ವಿಷಯವಲ್ಲ. ಬದಲಾಗಿ, ಇದು ನಮ್ಮ ಅಧಿಕಾರ, ನಮ್ಮ ಹಕ್ಕುಗಳು ಮತ್ತು ನಮ್ಮ ಭವಿಷ್ಯದ ವಿಷಯ” ಎಂದು ಸ್ಟಾಲಿನ್ ಸ್ಪಷ್ಟಪಡಿಸಿದರು.

ರಾಜ್ಯಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಂಡರೆ ಮಾತ್ರ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಮೇಲುಗೈ ಸಾಧಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

“ಈ ಹಿಂದೆ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಗಳು ಬಂದಾಗಲೆಲ್ಲಾ, ವಿವಿಧ ಪ್ರಜಾಪ್ರಭುತ್ವ ಶಕ್ತಿಗಳು ಅವುಗಳನ್ನು ತಡೆಯುತ್ತಿದ್ದವು. ಈಗ, ನಾವು ಅದೇ ರೀತಿಯ ಸವಾಲುಗಳು ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ” ಎಂದರು.

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆಯಿಂದಾಗುವ ಹಾನಿಗಳನ್ನು ಪಟ್ಟಿ ಮಾಡಿದ ಸ್ಟಾಲಿನ್ “ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ರಾಜ್ಯಗಳು ಕೇಂದ್ರದಿಂದ ತಮ್ಮ ಹಣವನ್ನು ಪಡೆಯಲು ಹೆಣಗಾಡುತ್ತವೆ. ಕೇಂದ್ರ ಅನಗತ್ಯ ಕಾನೂನುಗಳನ್ನು ಜಾರಿಗೆ ತರುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ನಮ್ಮನ್ನು ಅರ್ಥಮಾಡಿಕೊಳ್ಳದವರು ತೆಗೆದುಕೊಳ್ಳುತ್ತಾರೆ. ಮಹಿಳಾ ಸಬಲೀಕರಣವು ಹಿನ್ನಡೆ ಅನುಭವಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ತಮ್ಮ ಬೆಂಬಲವನ್ನು ಕಳೆದುಕೊಳ್ಳುತ್ತಾರೆ. ನಮ್ಮ ಸಂಸ್ಕೃತಿ, ಗುರುತು, ಪ್ರಗತಿಗೆ ಧಕ್ಕೆಯಾಗುತ್ತದೆ. ಸಾಮಾಜಿಕ ನ್ಯಾಯವು ದುರ್ಬಲಗೊಳ್ಳುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ವಿವರಿಸಿದರು. “ನಮ್ಮ ದೇಶದಲ್ಲಿಯೇ ನಾವು ರಾಜಕೀಯವಾಗಿ ದುರ್ಬಲರಾಗುತ್ತೇವೆ” ಎಂದರು.

ಭಾರತದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದಿನ ದಿನ ಮಹತ್ವದ ದಿನವಾಗಿ ಇತಿಹಾಸದ ಪುಟ ಸೇರಲಿದೆ ಎಂದು ಸಿಎಂ ಸ್ಟಾಲಿನ್ ಪುನರುಚ್ಚರಿಸಿದರು.

ಜಾತಿ ಆಧಾರಿತ ಜನಗಣತಿ ಮತ್ತು ಆ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದಾಗ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡನೆ ನಡೆದರೆ ದಕ್ಷಿಣ ರಾಜ್ಯಗಳು ಸುಮಾರು 100 ಸ್ಥಾನಗಳನ್ನು ಕಳೆದುಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ 2023ರಲ್ಲಿ ತೆಲಂಗಾಣದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ‘ದಕ್ಷಿಣದ ರಾಜ್ಯಗಳು ಅದನ್ನು ಸ್ವೀಕರಿಸುತ್ತವೆಯೇ?” ಸ್ಟಾಲಿನ್ ಪ್ರಶ್ನಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ. ಆದರೂ, ಕ್ಷೇತ್ರ ಪುನರ್‌ವಿಂಗಡನೆಗೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈಗಲೂ ತಮ್ಮ ಉದ್ದೇಶಗಳನ್ನು ಪೂರೈಸಲು ಕ್ಷೇತ್ರ ಪುನರ್‌ವಿಂಗಡನೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬೆದರಿಕೆಯನ್ನು ಅರ್ಥಮಾಡಿಕೊಂಡು, ತಮಿಳುನಾಡು ದೊಡ್ಡ ಒಗ್ಗಟ್ಟಿನಿಂದ ಅದರ ವಿರುದ್ಧ ನಿಂತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಇದೇ ರೀತಿಯ ಒಗ್ಗಟ್ಟಿಗಾಗಿ ಜೆಎಸಿ ಸಭೆಯಲ್ಲಿ ನಾಯಕರಿಗೆ ನಾನು ಮನವಿ ಮಾಡಿತ್ತಿದ್ದೇನೆ” ಎಂದರು.

ಕ್ಷೇತ್ರ ಪುನರ್‌ವಿಂಗಡನೆಯ ರಾಜಕೀಯ ವಿರೋಧಗಳನ್ನು ಕಾನೂನು ವೇದಿಕೆಗೆ ವಿಸ್ತರಿಸಲು ನಾಯಕರ ಸಲಹೆಗಳನ್ನು ಸ್ಟಾಲಿನ್ ಆಹ್ವಾನಿಸಿದ್ದು, ರಾಜಕೀಯ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲು ‘ತಜ್ಞರ ಸಮಿತಿ’ಯನ್ನು ಪ್ರಸ್ತಾಪಿಸಿದರು.

“ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆ ಅನುಮತಿಸಬಾರದು ಎಂದು ನಾವೆಲ್ಲರೂ ದೃಢಸಂಕಲ್ಪ ಮಾಡಬೇಕು. ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡ ರಾಜ್ಯಗಳನ್ನು ಶಿಕ್ಷಿಸಲು ನಾವು ಬಿಡಬಾರದು” ಎಂದು ಹೇಳಿದರು. ನ್ಯಾಯಯುತವಾದ ಕ್ಷೇತ್ರ ಪುನರ್‌ವಿಂಗಡನೆ ಸಾಧಿಸುವವರೆಗೆ ಹೋರಾಟವನ್ನು ಮುಂದುವರೆಸುವುದಾಗಿ ಸ್ಟಾಲಿನ್ ಒತ್ತಿ ಹೇಳಿದರು.

“ಯಾವುದೇ ಬೆಲೆ ತೆತ್ತಾದರೂ, ಈ ಸಭೆಯಲ್ಲಿ ಉಪಸ್ಥಿತರಿರುವ ರಾಜ್ಯಗಳು ನಮ್ಮ ಸಂಸದೀಯ ಪ್ರಾತಿನಿಧ್ಯ ಕಡಿಮೆಯಾಗಲು ಬಿಡಬಾರದು” ಎಂದು ಅವರು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡನೆಯಿಂದ ಪರಿಣಾಮ ಬೀರುವ ಸಾಧ್ಯತೆ ಇರುವ ರಾಜ್ಯಗಳ ರಾಜಕೀಯ ನಾಯಕರಾದ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೆಎಸಿ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....