Homeಮುಖಪುಟಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

- Advertisement -
- Advertisement -

ಚೆನ್ನೈನಲ್ಲಿ ಶನಿವಾರ (ಮಾ.22) ನಡೆದ ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ ‘ಜಂಟಿ ಕ್ರಿಯಾ ಸಮಿತಿ’ (ಜೆಎಸಿ) ಸಭೆಯಲ್ಲಿ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, “ರಾಷ್ಟ್ರದ ಗಮನ ಸೆಳೆಯುವಷ್ಟು ರಾಜಕೀಯ ಶಕ್ತಿ ಇಲ್ಲದ ಕಾರಣ ನ್ಯಾಯಕ್ಕಾಗಿ ಎತ್ತಿರುವ ರಾಜ್ಯದ ಧ್ವನಿಯನ್ನು ನಿರ್ಲಕ್ಷಿಸಲಾಗಿದೆ. ಸಂಸತ್ತಿನಲ್ಲಿ ನಮ್ಮ ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ನಮ್ಮ ರಾಜಕೀಯ ಶಕ್ತಿ ಕಡಿಮೆಯಾಗುತ್ತದೆ” ಎಂದು ಹೇಳಿದರು.

ಮಣಿಪುರದಲ್ಲಿ ಎರಡು ವರ್ಷಗಳಿಗೂ ಹೆಚ್ಚು ಸಮಯದಿಂದ ಹಿಂಸಾಚಾರ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮೌನ ವಹಿಸಿದೆ. ರಾಜಕೀಯ ಬಲ ಇಲ್ಲದ ರಾಜ್ಯಗಳಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಇದು ಉದಾಹರಣೆ ಎಂದರು.

“ನಮ್ಮ ಹೋರಾಟ ಕ್ಷೇತ್ರ ಪುನರ್‌ವಿಂಗಡನೆಯ ವಿರುದ್ದವಲ್ಲ, ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡನೆಗಾಗಿ. ಇದು ಸೀಟುಗಳ ಸಂಖ್ಯೆಯ ವಿಷಯವಲ್ಲ. ಬದಲಾಗಿ, ಇದು ನಮ್ಮ ಅಧಿಕಾರ, ನಮ್ಮ ಹಕ್ಕುಗಳು ಮತ್ತು ನಮ್ಮ ಭವಿಷ್ಯದ ವಿಷಯ” ಎಂದು ಸ್ಟಾಲಿನ್ ಸ್ಪಷ್ಟಪಡಿಸಿದರು.

ರಾಜ್ಯಗಳ ಸ್ವಾಯತ್ತತೆಯನ್ನು ಖಚಿತಪಡಿಸಿಕೊಂಡರೆ ಮಾತ್ರ ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಮೇಲುಗೈ ಸಾಧಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

“ಈ ಹಿಂದೆ ಒಕ್ಕೂಟ ವ್ಯವಸ್ಥೆಗೆ ಬೆದರಿಕೆಗಳು ಬಂದಾಗಲೆಲ್ಲಾ, ವಿವಿಧ ಪ್ರಜಾಪ್ರಭುತ್ವ ಶಕ್ತಿಗಳು ಅವುಗಳನ್ನು ತಡೆಯುತ್ತಿದ್ದವು. ಈಗ, ನಾವು ಅದೇ ರೀತಿಯ ಸವಾಲುಗಳು ಮತ್ತು ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ” ಎಂದರು.

ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆಯಿಂದಾಗುವ ಹಾನಿಗಳನ್ನು ಪಟ್ಟಿ ಮಾಡಿದ ಸ್ಟಾಲಿನ್ “ಪ್ರಾತಿನಿಧ್ಯ ಕಡಿಮೆಯಾಗುವುದರಿಂದ ರಾಜ್ಯಗಳು ಕೇಂದ್ರದಿಂದ ತಮ್ಮ ಹಣವನ್ನು ಪಡೆಯಲು ಹೆಣಗಾಡುತ್ತವೆ. ಕೇಂದ್ರ ಅನಗತ್ಯ ಕಾನೂನುಗಳನ್ನು ಜಾರಿಗೆ ತರುತ್ತದೆ. ನಮ್ಮ ಜನರ ಮೇಲೆ ಪರಿಣಾಮ ಬೀರುವ ನಿರ್ಧಾರಗಳನ್ನು ನಮ್ಮನ್ನು ಅರ್ಥಮಾಡಿಕೊಳ್ಳದವರು ತೆಗೆದುಕೊಳ್ಳುತ್ತಾರೆ. ಮಹಿಳಾ ಸಬಲೀಕರಣವು ಹಿನ್ನಡೆ ಅನುಭವಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ರೈತರು ತಮ್ಮ ಬೆಂಬಲವನ್ನು ಕಳೆದುಕೊಳ್ಳುತ್ತಾರೆ. ನಮ್ಮ ಸಂಸ್ಕೃತಿ, ಗುರುತು, ಪ್ರಗತಿಗೆ ಧಕ್ಕೆಯಾಗುತ್ತದೆ. ಸಾಮಾಜಿಕ ನ್ಯಾಯವು ದುರ್ಬಲಗೊಳ್ಳುತ್ತದೆ. ಎಸ್‌ಸಿ/ಎಸ್‌ಟಿ ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ವಿವರಿಸಿದರು. “ನಮ್ಮ ದೇಶದಲ್ಲಿಯೇ ನಾವು ರಾಜಕೀಯವಾಗಿ ದುರ್ಬಲರಾಗುತ್ತೇವೆ” ಎಂದರು.

ಭಾರತದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಇಂದಿನ ದಿನ ಮಹತ್ವದ ದಿನವಾಗಿ ಇತಿಹಾಸದ ಪುಟ ಸೇರಲಿದೆ ಎಂದು ಸಿಎಂ ಸ್ಟಾಲಿನ್ ಪುನರುಚ್ಚರಿಸಿದರು.

ಜಾತಿ ಆಧಾರಿತ ಜನಗಣತಿ ಮತ್ತು ಆ ಆಧಾರದ ಮೇಲೆ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಒತ್ತಾಯಿಸಿದಾಗ, ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡನೆ ನಡೆದರೆ ದಕ್ಷಿಣ ರಾಜ್ಯಗಳು ಸುಮಾರು 100 ಸ್ಥಾನಗಳನ್ನು ಕಳೆದುಕೊಳ್ಳುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ 2023ರಲ್ಲಿ ತೆಲಂಗಾಣದಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ‘ದಕ್ಷಿಣದ ರಾಜ್ಯಗಳು ಅದನ್ನು ಸ್ವೀಕರಿಸುತ್ತವೆಯೇ?” ಸ್ಟಾಲಿನ್ ಪ್ರಶ್ನಿಸಿದರು.

ದಕ್ಷಿಣ ರಾಜ್ಯಗಳಲ್ಲಿ ಸ್ಥಾನಗಳ ಸಂಖ್ಯೆ ಕಡಿಮೆಯಾಗಲಿದೆ ಎಂದು ಮೋದಿ ಒಪ್ಪಿಕೊಂಡಿದ್ದಾರೆ. ಆದರೂ, ಕ್ಷೇತ್ರ ಪುನರ್‌ವಿಂಗಡನೆಗೆ ಒತ್ತಾಯಿಸುತ್ತಲೇ ಇದ್ದಾರೆ ಎಂದು ಹೇಳಿದರು. ಬಿಜೆಪಿ ಯಾವಾಗಲೂ ರಾಜ್ಯಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಈಗಲೂ ತಮ್ಮ ಉದ್ದೇಶಗಳನ್ನು ಪೂರೈಸಲು ಕ್ಷೇತ್ರ ಪುನರ್‌ವಿಂಗಡನೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬೆದರಿಕೆಯನ್ನು ಅರ್ಥಮಾಡಿಕೊಂಡು, ತಮಿಳುನಾಡು ದೊಡ್ಡ ಒಗ್ಗಟ್ಟಿನಿಂದ ಅದರ ವಿರುದ್ಧ ನಿಂತಿದೆ. ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಇದೇ ರೀತಿಯ ಒಗ್ಗಟ್ಟಿಗಾಗಿ ಜೆಎಸಿ ಸಭೆಯಲ್ಲಿ ನಾಯಕರಿಗೆ ನಾನು ಮನವಿ ಮಾಡಿತ್ತಿದ್ದೇನೆ” ಎಂದರು.

ಕ್ಷೇತ್ರ ಪುನರ್‌ವಿಂಗಡನೆಯ ರಾಜಕೀಯ ವಿರೋಧಗಳನ್ನು ಕಾನೂನು ವೇದಿಕೆಗೆ ವಿಸ್ತರಿಸಲು ನಾಯಕರ ಸಲಹೆಗಳನ್ನು ಸ್ಟಾಲಿನ್ ಆಹ್ವಾನಿಸಿದ್ದು, ರಾಜಕೀಯ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲು ‘ತಜ್ಞರ ಸಮಿತಿ’ಯನ್ನು ಪ್ರಸ್ತಾಪಿಸಿದರು.

“ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡನೆ ಅನುಮತಿಸಬಾರದು ಎಂದು ನಾವೆಲ್ಲರೂ ದೃಢಸಂಕಲ್ಪ ಮಾಡಬೇಕು. ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡ ರಾಜ್ಯಗಳನ್ನು ಶಿಕ್ಷಿಸಲು ನಾವು ಬಿಡಬಾರದು” ಎಂದು ಹೇಳಿದರು. ನ್ಯಾಯಯುತವಾದ ಕ್ಷೇತ್ರ ಪುನರ್‌ವಿಂಗಡನೆ ಸಾಧಿಸುವವರೆಗೆ ಹೋರಾಟವನ್ನು ಮುಂದುವರೆಸುವುದಾಗಿ ಸ್ಟಾಲಿನ್ ಒತ್ತಿ ಹೇಳಿದರು.

“ಯಾವುದೇ ಬೆಲೆ ತೆತ್ತಾದರೂ, ಈ ಸಭೆಯಲ್ಲಿ ಉಪಸ್ಥಿತರಿರುವ ರಾಜ್ಯಗಳು ನಮ್ಮ ಸಂಸದೀಯ ಪ್ರಾತಿನಿಧ್ಯ ಕಡಿಮೆಯಾಗಲು ಬಿಡಬಾರದು” ಎಂದು ಅವರು ಮನವಿ ಮಾಡಿದರು.

ಕ್ಷೇತ್ರ ಪುನರ್‌ವಿಂಗಡನೆಯಿಂದ ಪರಿಣಾಮ ಬೀರುವ ಸಾಧ್ಯತೆ ಇರುವ ರಾಜ್ಯಗಳ ರಾಜಕೀಯ ನಾಯಕರಾದ ಕೇರಳ ಸಿಎಂ ಪಿಣರಾಯಿ ವಿಜಯನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಪಂಜಾಬ್ ಸಿಎಂ ಭಗವಂತ್ ಮಾನ್, ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೆಎಸಿ ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...