Homeಮುಖಪುಟಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

“ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯ ಮೇಲಿನ ಪೊಲೀಸ್ ದಬ್ಬಾಳಿಕೆಯ ವಿರುದ್ಧ ಮಾರ್ಚ್ 28 ರಂದು ಭಾರತದಾದ್ಯಂತ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಸಮನ್ವಯ ಸಮಿತಿಯು ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ” ಎಂದು ರೈತ ಸಂಘ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾ, ಎಸ್‌ಕೆಎಂ ಸೇರಿದಂತೆ ಎಲ್ಲ ರೈತ ಸಂಘಟನೆಗಳು ಮತ್ತು ವೇದಿಕೆಗಳು ಸಮಸ್ಯೆ ಆಧಾರಿತ ಏಕತೆಗೆ ಸೇರಬೇಕು. ದಬ್ಬಾಳಿಕೆಯ ವಿರುದ್ಧ ಒಗ್ಗೂಡಲು ಮುಂದೆ ಬರಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ.

“ಭಗವಂತ್ ಸಿಂಗ್ ಮಾನ್ ನೇತೃತ್ವದ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ, ಪಂಜಾಬ್ ಪೊಲೀಸರು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದಂತೆ 350 ರೈತ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಖಾನೌರಿ ಮತ್ತು ಶಂಬು ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರ ಡೇರೆಗಳು ಮತ್ತು ವೇದಿಕೆಗಳನ್ನು ಪೊಲೀಸರು ಬುಲ್ಡೋಜರ್‌ನಿಂದ ಕೆಡವಿದ್ದು, ಟ್ರ್ಯಾಕ್ಟರ್ ಟ್ರೇಲರ್‌ಗಳು, ಟ್ರಾಲಿಗಳು ಮತ್ತು ಇತರ ಉಪಕರಣಗಳನ್ನು ಬಲವಂತವಾಗಿ ತೆರವುಗೊಳಿಸಿದರು” ಎಂದು ಹೇಳಿಕೆ ತಿಳಿಸಿದೆ.

ಈ ಮಧ್ಯೆ, ಬುಧವಾರ ಹಲವಾರು ರೈತ ನಾಯಕರೊಂದಿಗೆ ಬಂಧನಕ್ಕೊಳಗಾದ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ವಾಲ್ ಅವರನ್ನು ಭಾನುವಾರ ಜಲಂಧರ್‌ನಿಂದ ಪಟಿಯಾಲಕ್ಕೆ ಸ್ಥಳಾಂತರಿಸಲಾಯಿತು.

ಕಳೆದ ವರ್ಷ ನವೆಂಬರ್ 26 ರಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರನ್ನು ಬುಧವಾರ ಪಂಜಾಬ್ ಪೊಲೀಸರು ಹಲವಾರು ರೈತರನ್ನು ಬಂಧಿಸಿದ ನಂತರ ಜಲಂಧರ್‌ನ ಪಂಜಾಬ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಯಿತು. ಬಳಿಕ, ಅವರನ್ನು ಜಲಂಧರ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹಕ್ಕೆ ಕರೆದೊಯ್ಯಲಾಯಿತು.

ಭಾನುವಾರ, ರೈತ ನಾಯಕನನ್ನು ಪಟಿಯಾಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.

ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯ ನಂತರ ಹಿಂತಿರುಗುತ್ತಿದ್ದ ಪಂಧೇರ್, ದಲ್ಲೆವಾಲ್ ಮತ್ತು ಹಲವಾರು ರೈತ ನಾಯಕರನ್ನು ಬುಧವಾರ ಮೊಹಾಲಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು.

ಸಭೆಯಲ್ಲಿ ರೈತರ ವಿವಿಧ ಬೇಡಿಕೆಗಳ ಬಗ್ಗೆ, ವಿಶೇಷವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನಿನ ಬಗ್ಗೆ ಚರ್ಚಿಸಲಾಯಿತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಗೆ ಪ್ರವೇಶಿಸಿದಾಗ, ಅವರನ್ನು ತಡೆಯಲಿ ಭಾರೀ ಬ್ಯಾರಿಕೇಡ್ ಹಾಕಲಾಯಿತು; ಅವರಸ್ಥಳದಲ್ಲೇ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿಯಲ್ಲಿ ನಡೆದ ಪ್ರತಿಭಟನೆಗಳ ನೇತೃತ್ವವನ್ನು ಎಸ್‌ಕೆಎಂ ಮತ್ತು ಕೆಎಂಎಂ ಸಂಘಟನೆಗಳು ವಹಿಸಿವೆ.

ಪಂಜಾಬ್ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ನಡೆಸಿದ ದಬ್ಬಾಳಿಕೆಯ ನಡುವೆ, ಎಸ್‌ಕೆಎಂ ಮತ್ತು ಭಾರತಿ ಕಿಸಾನ್ ಯೂನಿಯನ್ ಶುಕ್ರವಾರ ಪಂಜಾಬ್ ಸರ್ಕಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದವು.

ರೈತರ ವಿರುದ್ಧ ಪೊಲೀಸ್ ಕ್ರಮಕ್ಕಾಗಿ ಸರ್ಕಾರವನ್ನು ಟೀಕಿಸಿದ ರೈತ ಸಂಘಟನೆಗಳು, ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಿದವು.

ಭಾನುವಾರ ಎಸ್‌ಕೆಎಂ ಹೇಳಿಕೆಯ ಪ್ರಕಾರ, ಮಾರ್ಚ್ 28 ರಂದು ಪಂಜಾಬ್‌ನಾದ್ಯಂತ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳ ಮುಂದೆ ‘ಪೊಲೀಸ್ ದಬ್ಬಾಳಿಕೆ’ಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ.

ಧರ್ಮಾಧಾರಿತ ಮೀಸಲಾತಿ ಸಂವಿಧಾನವನ್ನು ಉಲ್ಲಂಘಿಸುತ್ತದೆ: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...