Homeಮುಖಪುಟಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಪಂಜಾಬ್‌ನಲ್ಲಿ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ; ಮಾ.28 ರಂದು ದೇಶಾದ್ಯಂತ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

“ಪಂಜಾಬ್‌ನಲ್ಲಿ ರೈತರ ಪ್ರತಿಭಟನೆಯ ಮೇಲಿನ ಪೊಲೀಸ್ ದಬ್ಬಾಳಿಕೆಯ ವಿರುದ್ಧ ಮಾರ್ಚ್ 28 ರಂದು ಭಾರತದಾದ್ಯಂತ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಾಷ್ಟ್ರೀಯ ಸಮನ್ವಯ ಸಮಿತಿಯು ಭಾರತದಾದ್ಯಂತ ರೈತರಿಗೆ ಕರೆ ನೀಡಿದೆ” ಎಂದು ರೈತ ಸಂಘ ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಿಸಾನ್ ಮಜ್ದೂರ್ ಮೋರ್ಚಾ, ಎಸ್‌ಕೆಎಂ ಸೇರಿದಂತೆ ಎಲ್ಲ ರೈತ ಸಂಘಟನೆಗಳು ಮತ್ತು ವೇದಿಕೆಗಳು ಸಮಸ್ಯೆ ಆಧಾರಿತ ಏಕತೆಗೆ ಸೇರಬೇಕು. ದಬ್ಬಾಳಿಕೆಯ ವಿರುದ್ಧ ಒಗ್ಗೂಡಲು ಮುಂದೆ ಬರಬೇಕು ಎಂದು ಎಸ್‌ಕೆಎಂ ಒತ್ತಾಯಿಸಿದೆ.

“ಭಗವಂತ್ ಸಿಂಗ್ ಮಾನ್ ನೇತೃತ್ವದ ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ, ಪಂಜಾಬ್ ಪೊಲೀಸರು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಸೇರಿದಂತೆ 350 ರೈತ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಹಾಕಿದ್ದರು. ಖಾನೌರಿ ಮತ್ತು ಶಂಬು ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರ ಡೇರೆಗಳು ಮತ್ತು ವೇದಿಕೆಗಳನ್ನು ಪೊಲೀಸರು ಬುಲ್ಡೋಜರ್‌ನಿಂದ ಕೆಡವಿದ್ದು, ಟ್ರ್ಯಾಕ್ಟರ್ ಟ್ರೇಲರ್‌ಗಳು, ಟ್ರಾಲಿಗಳು ಮತ್ತು ಇತರ ಉಪಕರಣಗಳನ್ನು ಬಲವಂತವಾಗಿ ತೆರವುಗೊಳಿಸಿದರು” ಎಂದು ಹೇಳಿಕೆ ತಿಳಿಸಿದೆ.

ಈ ಮಧ್ಯೆ, ಬುಧವಾರ ಹಲವಾರು ರೈತ ನಾಯಕರೊಂದಿಗೆ ಬಂಧನಕ್ಕೊಳಗಾದ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ವಾಲ್ ಅವರನ್ನು ಭಾನುವಾರ ಜಲಂಧರ್‌ನಿಂದ ಪಟಿಯಾಲಕ್ಕೆ ಸ್ಥಳಾಂತರಿಸಲಾಯಿತು.

ಕಳೆದ ವರ್ಷ ನವೆಂಬರ್ 26 ರಿಂದ ಅನಿರ್ದಿಷ್ಟಾವಧಿ ಉಪವಾಸ ನಡೆಸುತ್ತಿರುವ ದಲ್ಲೆವಾಲ್ ಅವರನ್ನು ಬುಧವಾರ ಪಂಜಾಬ್ ಪೊಲೀಸರು ಹಲವಾರು ರೈತರನ್ನು ಬಂಧಿಸಿದ ನಂತರ ಜಲಂಧರ್‌ನ ಪಂಜಾಬ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಲಾಯಿತು. ಬಳಿಕ, ಅವರನ್ನು ಜಲಂಧರ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹಕ್ಕೆ ಕರೆದೊಯ್ಯಲಾಯಿತು.

ಭಾನುವಾರ, ರೈತ ನಾಯಕನನ್ನು ಪಟಿಯಾಲದ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು ಎಂದು ಮೂಲಗಳು ತಿಳಿಸಿವೆ.

ಚಂಡೀಗಢದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಕೇಂದ್ರ ನಿಯೋಗದೊಂದಿಗೆ ಸಭೆಯ ನಂತರ ಹಿಂತಿರುಗುತ್ತಿದ್ದ ಪಂಧೇರ್, ದಲ್ಲೆವಾಲ್ ಮತ್ತು ಹಲವಾರು ರೈತ ನಾಯಕರನ್ನು ಬುಧವಾರ ಮೊಹಾಲಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ್ದರು.

ಸಭೆಯಲ್ಲಿ ರೈತರ ವಿವಿಧ ಬೇಡಿಕೆಗಳ ಬಗ್ಗೆ, ವಿಶೇಷವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನಿನ ಬಗ್ಗೆ ಚರ್ಚಿಸಲಾಯಿತು. ಸಭೆಯ ನಂತರ ನಿರ್ಗಮಿಸಿದ ರೈತರು ಮೊಹಾಲಿಗೆ ಪ್ರವೇಶಿಸಿದಾಗ, ಅವರನ್ನು ತಡೆಯಲಿ ಭಾರೀ ಬ್ಯಾರಿಕೇಡ್ ಹಾಕಲಾಯಿತು; ಅವರಸ್ಥಳದಲ್ಲೇ ಕೆಲವು ನಾಯಕರನ್ನು ಬಂಧಿಸಲಾಯಿತು.

ಶಂಭು ಮತ್ತು ಖಾನೌರಿಯಲ್ಲಿ ನಡೆದ ಪ್ರತಿಭಟನೆಗಳ ನೇತೃತ್ವವನ್ನು ಎಸ್‌ಕೆಎಂ ಮತ್ತು ಕೆಎಂಎಂ ಸಂಘಟನೆಗಳು ವಹಿಸಿವೆ.

ಪಂಜಾಬ್ ಪೊಲೀಸರು ಪ್ರತಿಭಟನಾ ನಿರತ ರೈತರ ಮೇಲೆ ನಡೆಸಿದ ದಬ್ಬಾಳಿಕೆಯ ನಡುವೆ, ಎಸ್‌ಕೆಎಂ ಮತ್ತು ಭಾರತಿ ಕಿಸಾನ್ ಯೂನಿಯನ್ ಶುಕ್ರವಾರ ಪಂಜಾಬ್ ಸರ್ಕಾರ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದವು.

ರೈತರ ವಿರುದ್ಧ ಪೊಲೀಸ್ ಕ್ರಮಕ್ಕಾಗಿ ಸರ್ಕಾರವನ್ನು ಟೀಕಿಸಿದ ರೈತ ಸಂಘಟನೆಗಳು, ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಾ ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸಿದವು.

ಭಾನುವಾರ ಎಸ್‌ಕೆಎಂ ಹೇಳಿಕೆಯ ಪ್ರಕಾರ, ಮಾರ್ಚ್ 28 ರಂದು ಪಂಜಾಬ್‌ನಾದ್ಯಂತ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳ ಮುಂದೆ ‘ಪೊಲೀಸ್ ದಬ್ಬಾಳಿಕೆ’ಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ.

ಧರ್ಮಾಧಾರಿತ ಮೀಸಲಾತಿ ಸಂವಿಧಾನವನ್ನು ಉಲ್ಲಂಘಿಸುತ್ತದೆ: ಆರ್‌ಎಸ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...