Homeಅಂತರಾಷ್ಟ್ರೀಯದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

- Advertisement -
- Advertisement -

ಇಸ್ರೇಲ್ ಸಶಸ್ತ್ರ ಪಡೆಗಳು ಭಾನುವಾರ (ಮಾ.23) ರಾತ್ರಿ ದಕ್ಷಿಣ ಗಾಝಾದ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ನಾಸರ್ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಹಮಾಸ್‌ನ ಉನ್ನತ ಅಧಿಕಾರಿ ಇಸ್ಮಾಯಿಲ್ ಬರ್ಹೌಮ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದಾಳಿಯಿಂದ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಸೇನೆಯು ಆಸ್ಪತ್ರೆ ಮೇಲೆ ದಾಳಿ ನಡೆಸಿರುವುದನ್ನು ದೃಢಪಡಿಸಿದ್ದು, ಅಲ್ಲಿದ್ದ ಹಮಾಸ್ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ ಎಂದು ತಿಳಿಸಿದೆ. ಜನನಿಬಿಡ ಪ್ರದೇಶಗಳಲ್ಲಿ ಹಮಾಸ್ ಇರುವಿಕೆಯೇ ನಾಗರಿಕರ ಸಾವುನೋವುಗಳಿಗೆ ಕಾರಣ ಎಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್‌) “ಗಾಝಾದ ನಾಸರ್ ಆಸ್ಪತ್ರೆಯ ಆವರಣದೊಳಗಿಂದ ಕಾರ್ಯಾಚರಣೆ ನಡೆಸುತ್ತಿದ್ದ ಪ್ರಮುಖ ಹಮಾಸ್ ಭಯೋತ್ಪಾದಕನ ಮೇಲೆ ದಾಳಿ ನಡೆಸಲಾಗಿದೆ. ಹಮಾಸ್ ನಾಗರಿಕ ಮೂಲಸೌಕರ್ಯವನ್ನು ಬಳಸಿಕೊಳ್ಳುತ್ತಿದೆ ಮತ್ತು ಗಾಝಾದ ಜನಸಂಖ್ಯೆಯನ್ನು ದೊಡ್ಡ ಅಪಾಯಕ್ಕೆ ಸಿಲುಕಿಸಿದೆ. ಆಸ್ಪತ್ರೆಯನ್ನು ಆಶ್ರಯ ತಾಣವಾಗಿ ಬಳಸಿಕೊಂಡು ಅಂತಾರಾಷ್ಟ್ರೀಯ ಕಾನೂನಿನ ನೇರ ಉಲ್ಲಂಘನೆ ಮೂಲಕ ಭಯೋತ್ಪಾದಕ ದಾಳಿಗಳನ್ನು ಹಮಾಸ್ ಯೋಜಿಸುತ್ತಿದೆ” ಎಂದು ಆರೋಪಿಸಿದೆ.

ಗಾಝಾದಾ ಇತರ ವೈದ್ಯಕೀಯ ಸೌಲಭ್ಯಗಳಂತೆಯೇ ನಾಸರ್ ಆಸ್ಪತ್ರೆಯೂ ಕೂಡ ಒಂದೂವರೆ ವರ್ಷದ ಇಸ್ರೇಲ್‌ ಸೇನೆಯ ನಿರಂತರ ಆಕ್ರಮಣದಿಂದ ಹಾನಿಗೊಳಗಾಗಿದೆ.

ಇಸ್ರೇಲಿ ಪಡೆಗಳು ಗಾಝಾದ ಅಲ್-ಮವಾಸಿಯಲ್ಲಿರುವ ಟೆಂಟ್ ಮೇಲೆ ಬಾಂಬ್ ದಾಳಿ ನಡೆಸಿ ಹಮಾಸ್‌ನ ರಾಜಕೀಯ ಬ್ಯೂರೋದ ಎರಡನೇ ಸದಸ್ಯ ಸಲಾಹ್ ಅಲ್-ಬರ್ದಾವಿಲ್ ಅವರನ್ನು ಕೊಂದ ಕೆಲವೇ ಗಂಟೆಗಳ ನಂತರ ಇಸ್ಮಾಯಿಲ್ ಬರ್ಹೌಮ್ ಹತ್ಯೆ ನಡೆದಿದೆ.

ಆಕ್ರಮಣದ ನಡುವೆ, ಇಸ್ರೇಲ್ ಸೇನೆ ರಫಾದಲ್ಲಿ ಧ್ವಂಸಗೊಂಡ ಟೆಲ್ ಅಲ್-ಸುಲ್ತಾನ್ ಪ್ರದೇಶದಿಂದ ಹೊರ ಹೋಗುವಂತೆ ಸಾವಿರಾರು ಪ್ಯಾಲೆಸ್ತೀನಿಯರಿಗೆ ಆದೇಶಿಸಿದೆ. ಇಲ್ಲಿಂದ ಸ್ಥಳಾಂತರಗೊಂಡ ಕುಟುಂಬಗಳು ಮುವಾಸಿಗೆ ಓಡಿ ಹೋಗಿದ್ದಾರೆ. ಮುವಾಸಿ ಕಿಕ್ಕಿರಿದ ಟೆಂಟ್ ಶಿಬಿರಗಳಿಂದ ತುಂಬಿದ ತಾತ್ಕಾಲಿಕ ಪ್ರದೇಶವಾಗಿದೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್‌ ಸೇನೆ ನಿರಂತರವಾಗಿ ಗಾಝಾದ ಮೇಲೆ ನಡೆಸುತ್ತಿರುವ ದಾಳಿಯಿಂದ ಇದುವರೆಗೆ 50,021 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 113,274 ಮಂದಿ ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ಸರ್ಕಾರಿ ಮಾಧ್ಯಮಗಳು ಸಾವಿನ ಸಂಖ್ಯೆ 61,700ಕ್ಕೂ ಹೆಚ್ಚು ಎಂದಿವೆ. ಇಸ್ರೇಲ್ ಸೇನೆ ಹೊಡೆದುರುಳಿಸಿದ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿರುವ ಸಾವಿರಾರು ಮಂದಿ ಪ್ಯಾಲೆಸ್ತೀನಿಯರು ಸತ್ತಿದ್ದಾರೆಂದು ಭಾವಿಸಿ ಈ ಲೆಕ್ಕ ಹಾಕಲಾಗಿದೆ.

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...