Homeಮುಖಪುಟಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ...

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂದೆ ಕುರಿತು ಹೇಳಿಕೆ; ಕಾಮಿಡಿಯನ್ ಕುನಾಲ್ ಕಮ್ರಾ ಕಾರ್ಯಕ್ರಮ ನೀಡಿದ್ದ ಸ್ಟುಡಿಯೋ ಧ್ವಂಸ

ದೂರು ದಾಖಲು, ಕಮ್ರಾಗೆ ಬೆದರಿಕೆ ಹಾಕಿದ ಶಿವಸೇನೆ

- Advertisement -
- Advertisement -

ಸ್ಟಾಂಡ್‌ಅಪ್‌ ಕಾಮಿಡಿಯನ್‌ ಕುನಾಲ್‌ ಕಮ್ರಾ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರನ್ನು ಕೆರಳಿಸಿದೆ.

ಇತ್ತೀಚೆಗೆ ನಡೆದ ‘ನಯ ಭಾರತ್’ ಎಂಬ ಕಾರ್ಯಕ್ರಮದಲ್ಲಿ ಸಮಕಾಲೀನ ರಾಜಕೀಯದ ಕುರಿತು ಚರ್ಚಿಸುವ ವೇಳೆ, ಶಿವಸೇನೆ ಪಕ್ಷವನ್ನು ವಿಭಜಿಸಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಶಿಂದೆ ಅವರನ್ನು ಕಮ್ರಾ ಪರೋಕ್ಷವಾಗಿ ಟೀಕಿಸಿದ್ದು, ಅವರನ್ನು ‘ದೇಶದ್ರೋಹಿ’ ಎಂದು ಕರೆದಿರುವುದಾಗಿ ಆರೋಪಿಸಲಾಗಿದೆ.

ಕಮ್ರಾ ಸ್ವತಃ ಹಂಚಿಕೊಂಡ ವಿಡಿಯೋ ಕ್ಲಿಪ್‌ನಲ್ಲಿ ಅವರು ‘ಥಾಣೆಯ ನಾಯಕ’ ಎಂದು ಉಲ್ಲೇಖಿಸಿ ‘ದಿಲ್ ತೋ ಪಾಗಲ್ ಹೈ’ ಹಾಡಿನ ದಾಟಿಯಲ್ಲಿ ಹಾಡೊಂದನ್ನು ಹಾಡಿ ಶಿಂದೆ ಅವರನ್ನು ಅಣಕಿಸಿದ್ದಾರೆ. ಅವರ ದೈಹಿಕ ನೋಟ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗಿನ ಹೊಂದಾಣಿಕೆಯ ಬಗ್ಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ. ಆದರೆ, ಎಲ್ಲೂ ಶಿಂದೆ ಹೆಸರು ಉಲ್ಲೇಖಿಸಿಲ್ಲ.

ಕುನಾಲ್ ಕಮ್ರಾ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಂಬೈನಲ್ಲಿ ಶಿವಸೇನೆ (ಶಿಂದೆ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಮ್ರಾ ಅವರ ಫೋಟೋಗಳನ್ನು ಸುಟ್ಟುಹಾಕಿದ್ದಾರೆ. ಕುನಾಲ್ ಕಮ್ರಾ ಅವರ ಕಾರ್ಯಕ್ರಮವನ್ನು ಚಿತ್ರೀಕರಿಸಿದ ಮುಂಬೈನ ಖಾರ್ ಪ್ರದೇಶದ ಹೋಟೆಲ್‌ ಅನ್ನು ಧ್ವಂಸಗೊಳಿಸಿದ್ದಾರೆ.

ಇದು “ಶಿಂಧೆ ಅವರ ಮೇಲೆ ಅಪಪ್ರಚಾರ ಮಾಡುವ ಪಿತೂರಿ” ಎಂದಿರುವ ಶಿವಸೇನೆ, ಕುನಾಲ್ ಕಮ್ರಾ, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಶಿವಸೇನಾ ನಾಯಕ ರಾಹುಲ್ ಕನಾಲ್ ನೀಡಿದ ದೂರಿನಲ್ಲಿ, “ಇದು ಶಿಂಧೆ ಅವರ ಖ್ಯಾತಿ, ವ್ಯಕ್ತಿತ್ವಕ್ಕೆ ಧಕ್ಕೆ ತರುವ “ಪೂರ್ವ ಯೋಜಿತ ಕ್ರಿಮಿನಲ್ ಪಿತೂರಿ ಮತ್ತು ವ್ಯವಸ್ಥಿತ ಪೇಯ್ಡ್ ಅಭಿಯಾನ” ಎಂದು ಕರೆದಿದ್ದಾರೆ.

“ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದು, ಅಶ್ಲೀಲ ಪದಗಳನ್ನು ಬಳಸುವುದು ಮತ್ತು ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಆರೋಪಗಳನ್ನು ಮಾಡುವುದು ಸೇರಿದಂತೆ ಕುನಾಲ್ ಕಮ್ರಾ ಮಾಡಿದ ಕೃತ್ಯಗಳು ಆಕ್ರಮಣಕಾರಿ ಮಾತ್ರವಲ್ಲದೆ ಕಾನೂನುಬಾಹಿರವೂ ಆಗಿವೆ ಎನ್ನಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.

ಶಿವಸೇನಾ ಶಾಸಕ ಮುರಾಜಿ ಪಟೇಲ್ ನೀಡಿದ ದೂರಿನ ಮೇರೆಗೆ ಕಮ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

“ನಾವು ನಾಳೆ 11 ಗಂಟೆಗೆ ಕುನಾಲ್ ಕಮ್ರಾಗೆ ಥಳಿಸುತ್ತೇವೆ” ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ನಿರುಪಮ್ ಭಾನುವಾರ ರಾತ್ರಿ ಎಕ್ಸ್‌ನಲ್ಲಿ ಬೆದರಿಕೆಯ ಪೋಸ್ಟ್ ಹಾಕಿದ್ದಾರೆ.

ಶಿವಸೇನೆ ಸಂಸದ ನರೇಶ್ ಮಸ್ಕೆ, “ದೇಶದಾದ್ಯಂತ ಸೇನಾ ಕಾರ್ಯಕರ್ತರು ಕಮ್ರಾ ಅವರ ಬೆನ್ನಟ್ಟಲಿದ್ದಾರೆ” ಎಂದಿದ್ದಾರೆ. “ನೀವು ಭಾರತದಿಂದ ಪಲಾಯನ ಮಾಡಿ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಈ ನಡುವೆ, ಉದ್ಧವ್ ಸೇನಾ ನಾಯಕರು ಕಮ್ರಾ ಕಾರ್ಯಕ್ರಮದ ನಡೆದ ಹೋಟೆಲ್‌ನ ಸ್ಟುಡಿಯೋ ಧ್ವಂಸವನ್ನು ಖಂಡಿಸಿದ್ದು, ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದು, ಫಡ್ನವೀಸ್ ಅವರನ್ನು ‘ದುರ್ಬಲ ಗೃಹ ಸಚಿವ’ ಎಂದು ಕರೆದಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಆದಿತ್ಯ ಠಾಕ್ರೆ, “ಏಕನಾಥ್ ಶಿಂಧೆ ಅವರ ಕುರಿತ ಹಾಡು “100% ನಿಜ” ಮತ್ತು “ಯಾರಾದರೂ ಹಾಡಿದರೆ ಅಸುರಕ್ಷಿತ ಹೇಡಿ ಮಾತ್ರ ಪ್ರತಿಕ್ರಿಯಿಸುತ್ತಾನೆ” ಎಂದು ಹೇಳಿದ್ದಾರೆ.

ಕುನಾಲ್ ಕಮ್ರಾ ಅವರು ಇದುವರೆಗೆ ವಿವಾದದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪ್ರತ್ಯೇಕ ಪೋಸ್ಟ್‌ನಲ್ಲಿ, ಅವರು ಸಂವಿಧಾನದ ಪ್ರತಿಯನ್ನು ಹಿಡಿದಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ ಮತ್ತು ಹೆಚ್ಚಿನ ವಿವರಣೆಯನ್ನು ನೀಡದೆ “ಮುಂದಕ್ಕೆ ಒಂದೇ ದಾರಿ” ಎಂದು ಬರೆದಿದ್ದಾರೆ.

ಸುಶಾಂತ್ ಸಿಂಗ್ ಸಾವು ಪ್ರಕರಣದ ಮುಕ್ತಾಯ ವರದಿ ಸಲ್ಲಿಸಿದ ಸಿಬಿಐ: ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...