Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...